AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡ್ಡಂಡ ಕಾರ್ಯಪ್ಪ ಅರ್ಜೆಂಟ್​ ಆಗಿ ಎಂಎಲ್​ಸಿ ಆಗಬೇಕಾಗಿದೆ: ಹೆಚ್.ವಿಶ್ವನಾಥ್

ಎಂಎಲ್​ಸಿ ಆಗುವ ನಿಟ್ಟಿನಲ್ಲಿ ಅಡ್ಡಂಡ ಕಾರ್ಯಪ್ಪ ಅವರು ಸಾಂಸ್ಕೃತಿಕ ತಾಣವನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಎಂಎಲ್​ಸಿ ಹೆಚ್.ವಿಶ್ವನಾಥ್ ಹೇಳಿದ್ದಾರೆ.

ಅಡ್ಡಂಡ ಕಾರ್ಯಪ್ಪ ಅರ್ಜೆಂಟ್​ ಆಗಿ ಎಂಎಲ್​ಸಿ ಆಗಬೇಕಾಗಿದೆ: ಹೆಚ್.ವಿಶ್ವನಾಥ್
ಅಡ್ಡಂಡ ಕಾರ್ಯಪ್ಪ ಅರ್ಜೆಂಟ್​ ಆಗಿ ಎಂಎಲ್​ಸಿ ಆಗಬೇಕಾಗಿದೆ: ಹೆಚ್.ವಿಶ್ವನಾಥ್
TV9 Web
| Edited By: |

Updated on:Nov 26, 2022 | 4:07 PM

Share

ಮೈಸೂರು: ರಂಗಾಯಣದಲ್ಲಿ ಟಿಪ್ಪು ನಿಜ ಕನಸು ನಾಟಕ ಪ್ರದರ್ಶನವನ್ನು ಟೀಕಿಸಿರುವ ಬಿಜೆಪಿ ಎಂಎಲ್​ಸಿ ಹೆಚ್.ವಿಶ್ವನಾಥ್ (H.Vishwanath) ಅವರು, ನಾಟಕ ರಚನೆಕಾರ ಅಡ್ಡಂಡ ಕಾರ್ಯಪ್ಪ ಅವರಿಗೆ ರಾಜಕೀಯವಾಗಿ ಟಾಂಗ್ ಕೊಟ್ಟಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಅಡ್ಡಂಡ ಕಾರ್ಯಪ್ಪ(Addanda Cariappa) ಅರ್ಜೆಂಟ್​ ಆಗಿ ಎಂಎಲ್​ಸಿ ಆಗಬೇಕಾಗಿದೆ. ಅದಕ್ಕಾಗಿ ಸಾಂಸ್ಕೃತಿಕ ತಾಣವನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಅಡ್ಡಂಡ ಕಾರ್ಯಪ್ಪ ನಡೆ ಬಹಳ ವಿಷಾದನೀಯ ಎಂದರು. ಅಲ್ಲದೆ, ಫೀಲ್ಡ್ ಮಾರ್ಷಲ್ ಕಾರ್ಯಪ್ಪರಂತಹ ಹೆಸರಿಟ್ಟುಕೊಂಡು ಅವಮಾನ ಮಾಡುತ್ತಿದ್ದಾರೆ. ಇನ್ನುಮುಂದೆ ಕಾರ್ಯಪ್ಪ ಅನ್ನುವ ಹೆಸರನ್ನು ತೆಗೆದುಬಿಡಿ. ಅಡ್ಡಂಡನಿಂದ ಕೊಡಗಿಗೆ ಅವಮಾನವಾಗಿದೆ. ಎಂಎಲ್​ಸಿ ಆಗಲು ಅರ್ಜೆಂಟ್ ಆಗಿರುವುದರಿಂದ ಆರ್​ಎಸ್​ಎಸ್ ವಿಚಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಅಡ್ಡಂಡ ಕಾರ್ಯಪ್ಪ ಜತೆ ಸಾಹಿತ್ಯ ಲೋಕದ ಎತ್ತರದ ವ್ಯಕ್ತಿ ಸಾಹಿತಿ ಭೈರಪ್ಪ ಸೇರಿರುವುದು ಸೂಕ್ತವಲ್ಲ, ಎಸ್​.ಎಲ್.ಭೈರಪ್ಪಗೆ (S.L.Bhyrappa) ಅರ್ಜೆಂಟ್ ಆಗಿ ಜ್ಞಾನಪೀಠ ಬೇಕಿದೆ ಅನಿಸುತ್ತಿದೆ, ಕೊಟ್ಟು ಬಿಡಿ ಎಂದು ಹೇಳಿದ ವಿಶ್ವನಾಥ್, ರಂಗಾಯಣ ನಿರ್ದೇಶಕ ಸ್ಥಾನದಿಂದ ಅಡ್ಡಂಡ ಕಾರ್ಯಪ್ಪ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿದರು.

ಟಿಪ್ಪು ನಿಜ ಕನಸುಗಳು ನಾಟಕ

3 ಗಂಟೆ 10 ನಿಮಿಷಗಳ ಅವಧಿಯ ಟಿಪ್ಪು ನಿಜ ಕನಸು ಎಂಬ ನಾಟಕದ ಪುಸ್ತಕ ನವೆಂಬರ್ 20ರಂದು ಬಿಡುಗಡೆಯಾಗಿದೆ. ಚರಿತ್ರೆಯಲ್ಲಿ‌ ಬಚ್ಚಿಡಲಾಗಿದ್ದ ವಿಚಾರಗಳಿಗೆ ಬೆಳಕು ಚೆಲ್ಲುವ ಪ್ರಯತ್ನ ಈ ನಾಟಕದ ಮೂಲಕ ನಡೆಯುತ್ತಿದೆ. ಮೇಲುಕೋಟೆ ದುರಂತ, 700 ಬ್ರಾಹ್ಮಣರ ಹತ್ಯೆ ವಿಚಾರ, ಕೊಡಗಿನಲ್ಲಿ ನಡೆದ ದೊಡ್ಡ ಸಂಖ್ಯೆ ಮತಾಂತರ, ಕೊಡಗಿನಲ್ಲಿ ನಡೆದ ಕೊಡವರ ಹತ್ಯೆ, ಟಿಪ್ಪು ಸುಲ್ತಾನ್ ಆಡಳಿತದಲ್ಲಿ ತೆಗೆದುಕೊಂಡ ಇಸ್ಲಾಮಿಕ್ ತೀರ್ಮಾನಗಳು, ಆತ ಬರೆದ ಪತ್ರಗಳ‌ ದೃಶ್ಯಾವಳಿಗಳು, ಟಿಪ್ಪು ತಾಯಿ, ಪತ್ನಿಯಿಂದ ಮತಾಂದತೆಗೆ ವಿರೋಧದ ದೃಶ್ಯಗಳು ನಾಟಕದಲ್ಲಿ ಇರಲಿದೆ.

ಇದನ್ನೂ ಓದಿ: ಜರ್ಮನಿಯಿಂದ ಬಂದು ಮೈಸೂರು ಮೃಗಾಲಯದಲ್ಲಿ ಜನ್ಮದಿನ ಆಚರಿಸಿಕೊಂಡ ಗೊರಿಲ್ಲಾ ತಬೋ

ಅಷ್ಟೇ ಅಲ್ಲದೆ, ಪಾರ್ಸಿ ಭಾಷೆಯನ್ನು ರಾಜ್ಯ ಭಾಷೆಯನ್ನಾಗಿ ಮಾಡಿದ್ದು, ಕಂದಾಯ ಇಲಾಖೆ ಹೆಸರುಗಳನ್ನು ಪಾರ್ಸಿ ಭಾಷೆಯಾಗಿ ಬದಲಿಸಿದ್ದು, ಊರುಗಳ ಹೆಸರನ್ನು ಪಾರ್ಸಿ ಭಾಷೆಯಾಗಿ ಬದಲಿಸಿದ್ದು, ಶ್ರೀರಂಗಪಟ್ಟಣದಲ್ಲಿ ಬಹು ಮಹಡಿ ಕಟ್ಟಡದಲ್ಲಿ ಇದ್ದ ತಾಳೆಗರಿ ಗ್ರಂಥಗಳನ್ನು ಸುಟ್ಟು ಉರ್ದು ಗ್ರಂಥಗಳನ್ನು ಇರಿಸಿದ್ದು, ಇಸ್ಲಾಂ ನಡೆಗೆ ರಾಜ್ಯವನ್ನು ಬಲವಂತವಾಗಿ ದೂಡಿದ್ದು ಸೇರಿದಂತೆ ಇತರ ಅಂಶಗಳನ್ನು ಒಳಗೊಂಡಂತೆ ರಚನೆಯಾಗಿರುವ ನಾಟಕ ಪ್ರದರ್ಶನ ನವೆಂಬರ್ 22 ರಂದು ನಡೆಯಿತು.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:07 pm, Sat, 26 November 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್