AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡ್ಡಂಡ ಕಾರ್ಯಪ್ಪ ಅರ್ಜೆಂಟ್​ ಆಗಿ ಎಂಎಲ್​ಸಿ ಆಗಬೇಕಾಗಿದೆ: ಹೆಚ್.ವಿಶ್ವನಾಥ್

ಎಂಎಲ್​ಸಿ ಆಗುವ ನಿಟ್ಟಿನಲ್ಲಿ ಅಡ್ಡಂಡ ಕಾರ್ಯಪ್ಪ ಅವರು ಸಾಂಸ್ಕೃತಿಕ ತಾಣವನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಎಂಎಲ್​ಸಿ ಹೆಚ್.ವಿಶ್ವನಾಥ್ ಹೇಳಿದ್ದಾರೆ.

ಅಡ್ಡಂಡ ಕಾರ್ಯಪ್ಪ ಅರ್ಜೆಂಟ್​ ಆಗಿ ಎಂಎಲ್​ಸಿ ಆಗಬೇಕಾಗಿದೆ: ಹೆಚ್.ವಿಶ್ವನಾಥ್
ಅಡ್ಡಂಡ ಕಾರ್ಯಪ್ಪ ಅರ್ಜೆಂಟ್​ ಆಗಿ ಎಂಎಲ್​ಸಿ ಆಗಬೇಕಾಗಿದೆ: ಹೆಚ್.ವಿಶ್ವನಾಥ್
TV9 Web
| Updated By: Rakesh Nayak Manchi|

Updated on:Nov 26, 2022 | 4:07 PM

Share

ಮೈಸೂರು: ರಂಗಾಯಣದಲ್ಲಿ ಟಿಪ್ಪು ನಿಜ ಕನಸು ನಾಟಕ ಪ್ರದರ್ಶನವನ್ನು ಟೀಕಿಸಿರುವ ಬಿಜೆಪಿ ಎಂಎಲ್​ಸಿ ಹೆಚ್.ವಿಶ್ವನಾಥ್ (H.Vishwanath) ಅವರು, ನಾಟಕ ರಚನೆಕಾರ ಅಡ್ಡಂಡ ಕಾರ್ಯಪ್ಪ ಅವರಿಗೆ ರಾಜಕೀಯವಾಗಿ ಟಾಂಗ್ ಕೊಟ್ಟಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಅಡ್ಡಂಡ ಕಾರ್ಯಪ್ಪ(Addanda Cariappa) ಅರ್ಜೆಂಟ್​ ಆಗಿ ಎಂಎಲ್​ಸಿ ಆಗಬೇಕಾಗಿದೆ. ಅದಕ್ಕಾಗಿ ಸಾಂಸ್ಕೃತಿಕ ತಾಣವನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಅಡ್ಡಂಡ ಕಾರ್ಯಪ್ಪ ನಡೆ ಬಹಳ ವಿಷಾದನೀಯ ಎಂದರು. ಅಲ್ಲದೆ, ಫೀಲ್ಡ್ ಮಾರ್ಷಲ್ ಕಾರ್ಯಪ್ಪರಂತಹ ಹೆಸರಿಟ್ಟುಕೊಂಡು ಅವಮಾನ ಮಾಡುತ್ತಿದ್ದಾರೆ. ಇನ್ನುಮುಂದೆ ಕಾರ್ಯಪ್ಪ ಅನ್ನುವ ಹೆಸರನ್ನು ತೆಗೆದುಬಿಡಿ. ಅಡ್ಡಂಡನಿಂದ ಕೊಡಗಿಗೆ ಅವಮಾನವಾಗಿದೆ. ಎಂಎಲ್​ಸಿ ಆಗಲು ಅರ್ಜೆಂಟ್ ಆಗಿರುವುದರಿಂದ ಆರ್​ಎಸ್​ಎಸ್ ವಿಚಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಅಡ್ಡಂಡ ಕಾರ್ಯಪ್ಪ ಜತೆ ಸಾಹಿತ್ಯ ಲೋಕದ ಎತ್ತರದ ವ್ಯಕ್ತಿ ಸಾಹಿತಿ ಭೈರಪ್ಪ ಸೇರಿರುವುದು ಸೂಕ್ತವಲ್ಲ, ಎಸ್​.ಎಲ್.ಭೈರಪ್ಪಗೆ (S.L.Bhyrappa) ಅರ್ಜೆಂಟ್ ಆಗಿ ಜ್ಞಾನಪೀಠ ಬೇಕಿದೆ ಅನಿಸುತ್ತಿದೆ, ಕೊಟ್ಟು ಬಿಡಿ ಎಂದು ಹೇಳಿದ ವಿಶ್ವನಾಥ್, ರಂಗಾಯಣ ನಿರ್ದೇಶಕ ಸ್ಥಾನದಿಂದ ಅಡ್ಡಂಡ ಕಾರ್ಯಪ್ಪ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿದರು.

ಟಿಪ್ಪು ನಿಜ ಕನಸುಗಳು ನಾಟಕ

3 ಗಂಟೆ 10 ನಿಮಿಷಗಳ ಅವಧಿಯ ಟಿಪ್ಪು ನಿಜ ಕನಸು ಎಂಬ ನಾಟಕದ ಪುಸ್ತಕ ನವೆಂಬರ್ 20ರಂದು ಬಿಡುಗಡೆಯಾಗಿದೆ. ಚರಿತ್ರೆಯಲ್ಲಿ‌ ಬಚ್ಚಿಡಲಾಗಿದ್ದ ವಿಚಾರಗಳಿಗೆ ಬೆಳಕು ಚೆಲ್ಲುವ ಪ್ರಯತ್ನ ಈ ನಾಟಕದ ಮೂಲಕ ನಡೆಯುತ್ತಿದೆ. ಮೇಲುಕೋಟೆ ದುರಂತ, 700 ಬ್ರಾಹ್ಮಣರ ಹತ್ಯೆ ವಿಚಾರ, ಕೊಡಗಿನಲ್ಲಿ ನಡೆದ ದೊಡ್ಡ ಸಂಖ್ಯೆ ಮತಾಂತರ, ಕೊಡಗಿನಲ್ಲಿ ನಡೆದ ಕೊಡವರ ಹತ್ಯೆ, ಟಿಪ್ಪು ಸುಲ್ತಾನ್ ಆಡಳಿತದಲ್ಲಿ ತೆಗೆದುಕೊಂಡ ಇಸ್ಲಾಮಿಕ್ ತೀರ್ಮಾನಗಳು, ಆತ ಬರೆದ ಪತ್ರಗಳ‌ ದೃಶ್ಯಾವಳಿಗಳು, ಟಿಪ್ಪು ತಾಯಿ, ಪತ್ನಿಯಿಂದ ಮತಾಂದತೆಗೆ ವಿರೋಧದ ದೃಶ್ಯಗಳು ನಾಟಕದಲ್ಲಿ ಇರಲಿದೆ.

ಇದನ್ನೂ ಓದಿ: ಜರ್ಮನಿಯಿಂದ ಬಂದು ಮೈಸೂರು ಮೃಗಾಲಯದಲ್ಲಿ ಜನ್ಮದಿನ ಆಚರಿಸಿಕೊಂಡ ಗೊರಿಲ್ಲಾ ತಬೋ

ಅಷ್ಟೇ ಅಲ್ಲದೆ, ಪಾರ್ಸಿ ಭಾಷೆಯನ್ನು ರಾಜ್ಯ ಭಾಷೆಯನ್ನಾಗಿ ಮಾಡಿದ್ದು, ಕಂದಾಯ ಇಲಾಖೆ ಹೆಸರುಗಳನ್ನು ಪಾರ್ಸಿ ಭಾಷೆಯಾಗಿ ಬದಲಿಸಿದ್ದು, ಊರುಗಳ ಹೆಸರನ್ನು ಪಾರ್ಸಿ ಭಾಷೆಯಾಗಿ ಬದಲಿಸಿದ್ದು, ಶ್ರೀರಂಗಪಟ್ಟಣದಲ್ಲಿ ಬಹು ಮಹಡಿ ಕಟ್ಟಡದಲ್ಲಿ ಇದ್ದ ತಾಳೆಗರಿ ಗ್ರಂಥಗಳನ್ನು ಸುಟ್ಟು ಉರ್ದು ಗ್ರಂಥಗಳನ್ನು ಇರಿಸಿದ್ದು, ಇಸ್ಲಾಂ ನಡೆಗೆ ರಾಜ್ಯವನ್ನು ಬಲವಂತವಾಗಿ ದೂಡಿದ್ದು ಸೇರಿದಂತೆ ಇತರ ಅಂಶಗಳನ್ನು ಒಳಗೊಂಡಂತೆ ರಚನೆಯಾಗಿರುವ ನಾಟಕ ಪ್ರದರ್ಶನ ನವೆಂಬರ್ 22 ರಂದು ನಡೆಯಿತು.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:07 pm, Sat, 26 November 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!