Mysore Dasara 2021: ಕೊರೊನಾದಿಂದ ಜಟ್ಟಿ‌ ಕಾಳಗಕ್ಕೆ ಬ್ರೇಕ್: ಅರಮನೆಯ ಪಾರಂಪರಿಕ ದಸರಾ ಕಾರ್ಯಕ್ರಮ ಲಿಸ್ಟ್​ ಇಲ್ಲಿದೆ

ಅಕ್ಟೋಬರ್ 15ರಂದು ಅರಮನೆಯಲ್ಲಿ ವಿಜಯ ದಶಮಿ ಆಚರಿಸಲಾಗುವುದು. 5.45ಕ್ಕೆ ಆನೆ, ಕುದುರೆ, ಹಸುಗಳ ಆಗಮನವಾಗಲಿದೆ. 6.13 ರಿಂದ 6.32ರವರೆಗೆ ಪೂಜಾ ಕೈಂಕರ್ಯ ನಡೆಯಲಿದೆ. 7.20ರಿಂದ 7.40ರವರೆಗೆ ವಿಜಯದಶಮಿ‌ ಮೆರವಣಿಗೆ ನಡೆಯಲಿದೆ.

Mysore Dasara 2021: ಕೊರೊನಾದಿಂದ ಜಟ್ಟಿ‌ ಕಾಳಗಕ್ಕೆ ಬ್ರೇಕ್: ಅರಮನೆಯ ಪಾರಂಪರಿಕ ದಸರಾ ಕಾರ್ಯಕ್ರಮ ಲಿಸ್ಟ್​ ಇಲ್ಲಿದೆ
ದಸರಾ
Follow us
| Updated By: ಸಾಧು ಶ್ರೀನಾಥ್​

Updated on:Sep 25, 2021 | 10:35 AM

ಮೈಸೂರು: ಮುಂದಿನ ತಿಂಗಳು ನಡೆಯಲಿರುವ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2021 ಅಂಗವಾಗಿ ಪಾರಂಪರಿಕ ಕಾರ್ಯಕ್ರಮಗಳು ನಿಗದಿಯಾಗಿವೆ. ಅರಮನೆಯಲ್ಲಿ ಪಾರಂಪರಿಕ ದಸರಾ ಕಾರ್ಯಕ್ರಮ ನಿಗದಿಯಾಗಿದ್ದು, ಕೊವಿಡ್ ಹಿನ್ನೆಲೆ ಈ ಬಾರಿಯೂ ಜಟ್ಟಿ‌ ಕಾಳಗಕ್ಕೆ ಬ್ರೇಕ್ ಹಾಕಲಾಗಿದೆ. ಅಕ್ಟೋಬರ್ 1ರಂದು ರತ್ನ ಖಚಿತ ಸಿಂಹಾಸನ ಜೋಡಣೆ ಮಾಡಲಾಗುವುದು. ಹಾಗಾಗಿ ಅ. 1ರಂದು ಅರಮನೆಗೆ ಪ್ರವಾಸಿಗರ ಭೇಟಿ ನಿರ್ಬಂಧಿಸಲಾಗಿದೆ. ಅರಮನೆ ಕಾರ್ಯಕ್ರಮದ ಪಟ್ಟಿ ಟಿವಿ9 ಗೆ ಲಭ್ಯವಾಗಿದೆ.

ಅಕ್ಟೋಬರ್ 7 ರಿಂದ 14ರವರೆಗೂ ಅರಮನೆಯಲ್ಲಿ ದಸರಾ ಕಾರ್ಯಕ್ರಮ ಆಯೋಜಿಸಲಾಗಿದೆ. ಅಕ್ಟೋಬರ್ 7ರಂದು ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದೆ. ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸಿಂಹಾಸನ ಏರಿ ಔಪಚಾರಿಕವಾಗಿ ಖಾಸಗಿ ದರ್ಬಾರ್ ನಡೆಸಲಿದ್ದಾರೆ. ಕೊರೊನಾ ಸಂದರ್ಭದಲ್ಲಿ ಕಳೇದ ಬಾರಿ ಮೈಸೂರು ದಸರಾ 2020  ಮಹೋತ್ಸವವನ್ನು ಖ್ಯಾತ ವೈದ್ಯರಾದ ಡಾ. ಸಿ.ಎನ್. ಮಂಜುನಾಥ್​ ಅವರು ಉದ್ಘಾಟನೆ ಮಾಡಿದ್ದರು. ಆದರೆ ಈ ಬಾರಿ ಯಾರು ಎಂಬುದು ಇನ್ನೂ ತೀರ್ಮಾನವಾಗಿಲ್ಲ.

ಅಕ್ಟೋಬರ್ 14ರಂದು ಅರಮನೆಯಲ್ಲಿ ಆಯುಧ ಪೂಜೆ ಏರ್ಪಡಿಸಲಾಗಿದೆ. ಬೆಳಗ್ಗೆ 5.30ರಿಂದ ಪೂಜಾ ವಿಧಿ ವಿಧಾನ ಆರಂಭಗೊಳ್ಳಲಿದೆ. 7.45ಕ್ಕೆ ರಾಜರ ಆಯುಧಗಳು ಅರಮನೆ ಕೋಡಿ ಸೋಮೇಶ್ವರ ದೇಗುಲಕ್ಕೆ ರವಾನೆ ಮಾಡಲಾಗುವುದು. ಪೂಜೆ ಸಲ್ಲಿಸಿ ಕೋಡಿ ಸೋಮೇಶ್ವರ ದೇಗುಲದಿಂದ ಅರಮನೆ ಕಲ್ಯಾಣ ಮಂಟಪಕ್ಕೆ ತರಲಾಗುವುದು. 11.02 ರಿಂದ 11.22ರ ಶುಭ ಮುಹೂರ್ತದಲ್ಲಿ ಆಯುಧಗಳಿಗೆ ಪೂಜೆ ನೆರವೇರಿಸಲಾಗುವುದು. ಯದುವೀರ ಕೃಷದತ್ತ ಚಾಮರಾಜ ಒಡೆಯರ್‌ರಿಂದ ಪೂಜೆ ನಡೆಯಲಿದೆ.

ಅಕ್ಟೋಬರ್ 15ರಂದು ಅರಮನೆಯಲ್ಲಿ ವಿಜಯ ದಶಮಿ ಆಚರಿಸಲಾಗುವುದು. 5.45ಕ್ಕೆ ಆನೆ, ಕುದುರೆ, ಹಸುಗಳ ಆಗಮನವಾಗಲಿದೆ. 6.13 ರಿಂದ 6.32ರವರೆಗೆ ಪೂಜಾ ಕೈಂಕರ್ಯ ನಡೆಯಲಿದೆ. 7.20ರಿಂದ 7.40ರವರೆಗೆ ವಿಜಯದಶಮಿ‌ ಮೆರವಣಿಗೆ ನಡೆಯಲಿದೆ. ಅರಮನೆ ಮುಖ್ಯದ್ವಾರದಿಂದ ಅರಮನೆ ಆವರಣ ಭುವನೇಶ್ವರಿ ದೇಗುಲದವರೆಗೂ ಮೆರವಣಿಗೆ ನಡೆಯಲಿದೆ. ದೇಗುಲದ ಬನ್ನಿ ಮರಕ್ಕೆ ಯದುವೀರ ಕೃಷದತ್ತ ಚಾಮರಾಜ ಒಡೆಯರ್‌ ಪೂಜೆ ನಡೆಸಲಿದ್ದಾರೆ. ಪೂಜೆಯ ನಂತರ ಮೆರವಣಿಗೆ ಮೂಲಕ ಅರಮನೆಗೆ ವಾಪಸ್ಸು ಆಗಲಿದ್ದಾರೆ.

ಅಕ್ಟೋಬರ್ 31ರಂದು ಸಿಂಹಾಸನ ವಿಂಗಡಿಸಿ ಖಜಾನೆಗೆ ವಾಪಸ್ ರವಾನೆ ಮಾಡಲಾಗುವುದು. ಅಂದೂ ಸಹ ಮಧ್ಯಾಹ್ನ 1.30ರವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧವಿರಲಿದೆ.

ಇಂದಿನಿಂದಲೇ ಮೈಸೂರು ಅರಮನೆ ಪ್ರವೇಶ ದರ ಏರಿಕೆ:

ಮೈಸೂರು ಅರಮನೆ ಪ್ರವೇಶ ದರ ಏರಿಕೆ ಮಾಡಲಾಗಿದ್ದು, ಅರಮನೆ ಮಂಡಳಿಯು ಹೊಸ ದರ ನಿಗದಿ ಮಾಡಿದೆ. ಇಂದಿನಿಂದಲೇ ಹೊಸ ದರಗಳು ಅನ್ವಯವಾಗಲಿವೆ. ಹಳೆಯ ಪ್ರವೇಶ ದರ 70 ರೂ ಇದ್ದಿದ್ದು, ಈಗ ಹೊಸ ಪ್ರವೇಶದ ದರ 100 ರೂಪಾಯಿಗೆ ಏರಿಸಲಾಗಿದೆ. ಪೋಷಕರ ಜೊತೆ ಬರುವ ಮಕ್ಕಳಿಗೆ ಹಳೆಯ ದರ 30 ರೂ ಇದ್ದರೆ, ಈಗ ಮಕ್ಕಳಿಗೆ ಹೊಸ ದರ 50 ರೂ ನಿಗದಿಪಡಿಸಲಾಗಿದೆ. ಶಾಲಾ ಮಕ್ಕಳಿಗೆ ಹಳೆಯ ದರ 20 ರೂ ಹೊಸ ದರ 50 ರೂ ಮಾತ್ರವೇ ಇದೆ.

ಇನ್ನು ಕನ್ನಡದ ಧ್ವನಿ ಮತ್ತು ಬೆಳಕು ಕಾರ್ಯಕ್ರಮದ ದರದಲ್ಲಿ ಯಾವುದೇ ಏರಿಕೆ ಇಲ್ಲ. ಇಂಗ್ಲಿಷ್ ಧ್ವನಿ ಮತ್ತು ಬೆಳಕು ಕಾರ್ಯಕ್ರಮದ ದರ 120 ರೂ ಇದೆ.

Also Read: Dasara 2021: ಮೈಸೂರು ದಸರಾಗೆ ಪ್ರಾಥಮಿಕ ಹಂತದಲ್ಲಿ ಚೈತ್ರಾ, ಲಕ್ಷ್ಮೀ, ಪಾರ್ಥಸಾರಥಿ ಆನೆಗಳು ಆಯ್ಕೆ

Also Read: ಮೈಸೂರು ದಸರಾ 2020: ಡಾ. ಸಿ.ಎನ್. ಮಂಜುನಾಥ್​ರಿಂದ ಮಹೋತ್ಸವ ಉದ್ಘಾಟನೆ

ಷೇರು ಮಾರುಕಟ್ಟೆ ಹೂಡಿಕೆ ಮಾಡದವ್ರು ಏನು ಮಾಡಬೇಕು?|Balaji Rao D.G.|Tv9 Investment Tips

(mysore dasara 2021 celebrations conventional programme list announced)

Published On - 9:20 am, Sat, 25 September 21

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್