AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Dasara 2022: ಅಂತಾರಾಜ್ಯ ವಾಹನಗಳಿಗೆ ತೆರಿಗೆ ವಿನಾಯಿತಿ ಘೋಷಿಸಿದ ರಾಜ್ಯ ಸರ್ಕಾರ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವ ಅಂತಾರಾಜ್ಯ ವಾಹನಗಳಿಗೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿ ಘೋಷಣೆ ಮಾಡಿದೆ.

Mysore Dasara 2022: ಅಂತಾರಾಜ್ಯ ವಾಹನಗಳಿಗೆ ತೆರಿಗೆ ವಿನಾಯಿತಿ ಘೋಷಿಸಿದ ರಾಜ್ಯ ಸರ್ಕಾರ
ಮೈಸೂರು ದಸರಾ 2022: ಅಂತಾರಾಜ್ಯ ವಾಹನಗಳಿಗೆ ತೆರಿಗೆ ವಿನಾಯಿತಿ ಘೋಷಿಸಿದ ರಾಜ್ಯ ಸರ್ಕಾರ
TV9 Web
| Updated By: Rakesh Nayak Manchi|

Updated on:Sep 20, 2022 | 9:46 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysore Dasara) ಮಹೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಈ ನಡುವೆ ಪ್ರವಾಸಿಗರ ಅನುಕೂಲಕ್ಕಾಗಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಏಕೀಕೃತ ಟಿಕೇಟ್ (ಕಾಂಬೋ ಟಿಕೆಟ್) ವ್ಯವಸ್ಥೆ ಜಾರಿ ಮಾಡಿದೆ. ಇದರ ಬೆನ್ನಲ್ಲೆ ರಾಜ್ಯ ಸರ್ಕಾರ ದಸರಾಕ್ಕೆ ಬರುವ ಅಂತಾರಾಜ್ಯದ ಜನರಿಗೆ ಗುಡ್ ನ್ಯೂಸ್ ನೀಡಿದೆ. ವಿಶ್ವವಿಖ್ಯಾತ ಮೈಸೂರು ದಸರಾ ವೀಕ್ಷಣೆಗೆ ಆಗಮಿಸುವ ಅಂತಾರಾಜ್ಯ ವಾಹನಗಳಿಗೆ ಸರ್ಕಾರ ತೆರಿಗೆ ವಿನಾಯಿತಿ (Tax Exemption) ಘೋಷಣೆ ಮಾಡಿದೆ. ಮೈಸೂರು ನಗರ ಹಾಗೂ ಮಂಡ್ಯ ಜಿಲ್ಲೆಯ ಶ್ರೀರಂಗ ಪಟ್ಟಣ ವ್ಯಾಪ್ತಿಯ ಕೆ.ಆರ್.ಎಸ್ ಜಲಾಶಯ ವೀಕ್ಷಿಸಲು ಹೋಗುವ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ ಮಾಡಿ ಸಾರಿಗೆ ಇಲಾಖೆ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 6 ರವರೆಗೆ ಈ ತೆರಿಗೆ ವಿನಾಯಿತಿ ಇರಲಿದೆ.

ದಸರಾ ಮಹೋತ್ಸವದ ಹಿನ್ನೆಲೆ ಮೈಸೂರಿಗೆ ಆಗಮಿಸುವ ಪ್ರವಾಸಿಗರಿಗಾಗಿ ಮತ್ತು ಸಾರ್ವಜನಿಕರಿಗಾಗಿ ಮೈಸೂರಿನ ಕೆಲವು ಪ್ರಮುಖ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಅನುಕೂಲವಾಗುವಂತೆ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಕಾಂಬೋ ಟಿಕೆಟ್ ವ್ಯವಸ್ಥೆ ಜಾರಿ ಮಾಡಿದೆ. ಕಾಂಬೋ ಟಿಕೆಟ್ ಮೂಲಕ ಪ್ರವಾಸಿಗರು ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ರೈಲ್ವೆ ಮ್ಯೂಸಿಯಂ ಹಾಗೂ ಕೆಆರ್‌ಎಸ್ ಬೃಂದಾವನ ಸೇರಿ ಒಟ್ಟು ಪ್ರವಾಸಿ ತಾಣಗಳಿಗೆ ಭೇಟಿ ನೀಡಬಹುದು.

ಇಂದಿನಿಂದ (ಸೆ.20) ಈ ಟಿಕೆಟ್ ಪಡೆದುಕೊಂಡು ಸೂಚಿಸಿರುವ ಐದು ಸ್ಥಳಗಳಿಗೆ ಭೇಟಿ ನೀಡಬಹುದಾಗಿದ್ದು, ಅಕ್ಟೋಬರ್‌ 5ರವರೆಗೆ ಈ ವ್ಯವಸ್ಥೆ ಚಾಲ್ತಿಯಲ್ಲಿರಲಿದೆ. ಟಿಕೆಟ್ ಬೆಲೆ ವಯಸ್ಕರಿಗೆ 500 ರೂ. ಹಾಗೂ ಮಕ್ಕಳಿಗೆ 250 ರೂ. ನಿಗದಿಪಡಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಮಾರಾಟ ಮಾಡಲಾಗುವ ಈ ಟಿಕೆಟ್ ಅನ್ನು ನಗರದ ಕೆಎಸ್‌ಟಿಡಿಸಿ ಹೋಟೆಲ್ ಹಾಗೂ ಟ್ರಾವೆಲ್ಸ್ ವಿಭಾಗದಲ್ಲಿ, ಕೆಎಸ್‌ಆರ್‌ಟಿಸಿ ಸಬರ್ ಹಾಗೂ ನಗರ ಬಸ್ ನಿಲ್ದಾಣಗಳಲ್ಲಿ, ರೈಲ್ವೆ ನಿಲ್ದಾಣದ 2 ಕಡೆ, ಚಾಮುಂಡಿಬೆಟ್ಟ, ಮೃಗಾಲಯ, ಕೆಆರ್‌ಎಸ್, ಅರಮನೆ ಹಾಗೂ ಮೈಸೂರು ನಗರದ ಪ್ರಮುಖ ಹೋಟೆಲ್‌ಗಳಲ್ಲಿ ಪಡೆಯಬಹುದಾಗಿದೆ.

ಮತ್ತಷ್ಟು ಮೈಸೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:45 pm, Tue, 20 September 22

ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?