AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಐಎಎಸ್​ vs ಐಎಎಸ್​: ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಆರೋಪಕ್ಕೆ ಡಿಸಿ ರೋಹಿಣಿ ಸಿಂಧೂರಿ ಸ್ಪಷ್ಟನೆ

‘ನನ್ನ ವಿರುದ್ಧ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಮಾಡಿರುವ ಕಿರುಕುಳದ ಆರೋಪಕ್ಕೆ ಯಾವುದೇ ಆಧಾರವಿಲ್ಲ. ಅವರು ಕೊವಿಡ್​ ಸಂಬಂಧ ನಡೆಯುತ್ತಿದ್ದ ಸಭೆಗಳಿಗೆ ಗೈರಾಗುತ್ತಿದ್ದರು’ ಎಂದು ರೋಹಿಣಿ ಸಿಂಧೂರಿ ಹೇಳಿದರು.

ಮೈಸೂರಿನಲ್ಲಿ ಐಎಎಸ್​ vs ಐಎಎಸ್​: ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಆರೋಪಕ್ಕೆ ಡಿಸಿ ರೋಹಿಣಿ ಸಿಂಧೂರಿ ಸ್ಪಷ್ಟನೆ
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್
TV9 Web
| Edited By: |

Updated on:Jun 03, 2021 | 7:45 PM

Share

ಮೈಸೂರು: ಮಹಾನಗರ ಪಾಲಿಕೆ ಆಯುಕ್ತ ಶಿಲ್ಪಾನಾಗ್ ಗುರುವಾರ ತಮ್ಮ ವಿರುದ್ಧ ಮಾಡಿರುವ ಕಿರುಕುಳದ ಆರೋಪಗಳಿಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸ್ಪಷ್ಟನೆ ನೀಡಿದ್ದಾರೆ. ‘ನನ್ನ ವಿರುದ್ಧ ಅವರು ಮಾಡಿರುವ ಕಿರುಕುಳದ ಆರೋಪ ಆಧಾರರಹಿತ’ ಎಂದು ಹೇಳಿದ್ದಾರೆ.

‘ನನ್ನ ವಿರುದ್ಧ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಮಾಡಿರುವ ಕಿರುಕುಳದ ಆರೋಪಕ್ಕೆ ಯಾವುದೇ ಆಧಾರವಿಲ್ಲ. ಅವರು ಕೊವಿಡ್​ ಸಂಬಂಧ ನಡೆಯುತ್ತಿದ್ದ ಸಭೆಗಳಿಗೆ ಗೈರಾಗುತ್ತಿದ್ದರು’ ಎಂದು ರೋಹಿಣಿ ಸಿಂಧೂರಿ ಹೇಳಿದರು. ‘ಕೊವಿಡ್ ಕೇರ್ ಸೆಂಟರ್ ಆರಂಭಿಸಿಲ್ಲವೆಂಬ ಆರೋಪಕ್ಕೂ ಯಾವುದೇ ಪುಷ್ಟಿಯಿಲ್ಲ. ಕೇವಲ 20 ದಿನಗಳಲ್ಲೇ 18 ಕೊವಿಡ್ ಕೇರ್ ಸೆಂಟರ್ ಆರಂಭಿಸಿದ್ದೇವೆ. ಮೈಸೂರಿನಲ್ಲೇ 3 ಕೊವಿಡ್ ಕೇರ್ ಸೆಂಟರ್ ಇದೆ’ ಎಂದು ವಿವರಿಸಿದರು.

ಪಾಲಿಕೆ ಆಯುಕ್ತೆ ಶಿಲ್ಪಾನಾಗ್, ಕೆಲಸಕ್ಕೆ ಗುಡ್​ಬೈ ಇಂತಹ (ರೋಹಿಣಿ ಸಿಂಧೂರಿ) ದುರಂಹಕಾರಿ ಜಿಲ್ಲಾಧಿಕಾರಿ ಯಾರಿಗೂ ಸಿಗುವುದು ಬೇಡ ಎಂದು ಮೈಸೂರು ಮಹಾನಗರಪಾಲಿಕೆ ಆಯುಕ್ತೆ ಶಿಲ್ಪಾನಾಗ್ ನೇರವಾಗಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಆರೋಪ ಮಾಡಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಒಬ್ಬ ಐಎಎಸ್ ಅಧಿಕಾರಿಯಾಗಿ ಮತ್ತೊಬ್ಬ ಅಧಿಕಾರಿಗೆ ತೊಂದರೆ ಕೊಡುವುದು ಸರಿಯಲ್ಲ. ಜಿಲ್ಲಾಧಿಕಾರಿ ನನ್ನ ಮೇಲಿನ ಕೋಪಕ್ಕೆ ಬೇರೆ ಅಧಿಕಾರಿಗಳಿಗೆ ತೊಂದರೆ ಕೊಡುತ್ತಿದ್ದಾರೆ. ಒಬ್ಬ ಅಧಿಕಾರಿಯ ಅಹಂನಿಂದ ಪರ್ಸನಲ್‌ ಆಗಿ ಟಾರ್ಗೆಟ್ ಮಾಡಲಾಗಿದೆ ಎಂದು ದೂರಿದ್ದರು.

ಎಲ್ಲರಿಗೂ ಒಂದು ಸಹನೆ ಇರುತ್ತದೆ. ಪ್ರತಿದಿನ ನಮ್ಮ ಅಧಿಕಾರಿಗಳನ್ನು ಸಭೆಗೆ ಕರೆದು ಅವಮಾನ‌ ಮಾಡಲಾಗುತ್ತಿದೆ ಎಂದು ರೋಹಿಣಿ ಸಿಂಧೂರಿ ವಿರುದ್ಧ ಆಯುಕ್ತೆ ಶಿಲ್ಪಾ ನಾಗ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

(Mysore DC Rohini Sindhuri Clarifies on Allegations Made By IAS Officer Shilpa Nag)

ಇದನ್ನೂ ಓದಿ: ರೋಹಿಣಿ ಸಿಂಧೂರಿ ಅಂತಹ ದುರಹಂಕಾರಿ ಜಿಲ್ಲಾಧಿಕಾರಿ ಯಾರಿಗೂ ಸಿಗುವುದು ಬೇಡ -ಪಾಲಿಕೆ ಆಯುಕ್ತೆ ಶಿಲ್ಪಾನಾಗ್, ಕೆಲಸಕ್ಕೆ ಗುಡ್​ಬೈ

ಇದನ್ನೂ ಓದಿ: ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಸಿಎಂ ಯಡಿಯೂರಪ್ಪರಿಗೆ ಪತ್ರ ಬರೆದ ಸಂಸದ ಪ್ರತಾಪ್ ಸಿಂಹ

Published On - 7:44 pm, Thu, 3 June 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?