AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪತ್ನಿಗೂ ವೆಂಟಿಲೇಟರ್ ಕೊಡಿಸುವ ಯೋಗ್ಯತೆ ಇಲ್ಲ‘ ಅಸಹಾಯಕತೆ ತೋಡಿಕೊಂಡ ಮೈಸೂರು ಡಿಹೆಚ್‌ಒ ಅಮರನಾಥ್

‘ನನ್ನ ಪತ್ನಿಗೂ ವೆಂಟಿಲೇಟರ್​ ಕೊಡಿಸುವ ಯೋಗ್ಯತೆ ಇಲ್ಲ’ ಎಂದು ಮೈಸೂರು ಡಿಹೆಚ್‌ಒ ಅಮರನಾಥ್ ಹೇಳಿಕೊಂಡ ಮಾತು  ಇದೀಗ ವೈರಲ್​ ಆಗಿದೆ.

'ಪತ್ನಿಗೂ ವೆಂಟಿಲೇಟರ್ ಕೊಡಿಸುವ ಯೋಗ್ಯತೆ ಇಲ್ಲ‘ ಅಸಹಾಯಕತೆ ತೋಡಿಕೊಂಡ ಮೈಸೂರು ಡಿಹೆಚ್‌ಒ ಅಮರನಾಥ್
ಪ್ರಾತಿನಿಧಿಕ ಚಿತ್ರ
shruti hegde
| Edited By: |

Updated on: May 06, 2021 | 3:00 PM

Share

ಮೈಸೂರು: ಜಿಲ್ಲೆಯಲ್ಲಿ ದಿನ ಸಾಗುತ್ತಿದ್ದಂತೆ ಕೊರೊನಾ ಸೋಂಕು ಹರಡುವಿಕೆ ಉಲ್ಬಣಗೊಳ್ಳುತ್ತಿದೆ. ಜೀವ ಕೈಯ್ಯಲ್ಲಿ ಹಿಡಿದು ಅದೆಷ್ಟೋ ಮಂದಿ ಕೊರೊನಾ ಜೊತೆ ಹೋರಾಡುತ್ತಿದ್ದಾರೆ. ಆಕ್ಸಿಜನ್​ ಬೆಡ್​ಗಳಿಗಾಗಿ ಸೆಣೆಸಾಡುತ್ತಿದ್ದಾರೆ. ಹೀಗಿರುವಾಗ ಮೈಸೂರು ಡಿಹೆಚ್‌ಒ ಅಮರನಾಥ್​ ತಮ್ಮ  ಅಸಹಾಯಕತೆಯನ್ನು ಫೋನಿನಲ್ಲಿ ಹೇಳಿಕೊಂಡ ಮಾತು ಇದೀಗ ವೈರಲ್​ ಆಗಿದೆ. ‘ನನ್ನ ಪತ್ನಿಗೂ ವೆಂಟಿಲೇಟರ್​ ಕೊಡಿಸುವ ಯೋಗ್ಯತೆ ಇಲ್ಲ’ ಎಂದು ಹೇಳಿಕೊಂಡ ಮಾತು  ಇದೀಗ ವೈರಲ್​ ಆಗಿದೆ.

ಮೈಸೂರು ಡಿಹೆಚ್‌ಒ ಅಮರ್​ನಾಥ್​ ಅವರಿಗೆ, ಕೊವಿಡ್​ ಸೋಂಕಿತನ ಸಂಬಂಧಿಕರೊಬ್ಬರು ಕರೆ ಮಾಡಿ ವೆಂಟಿಲೇಟರ್​ ಕೊಡಿಸುವಂತೆ ಕೇಳಿಕೊಳ್ಳುತ್ತಾರೆ. ಇದಕ್ಕೆ ಪ್ರತಿಕ್ರಿಯಿಸಿದ ಅಮರ್​ನಾಥ್​ ಅವರು ವಾರ್​ರೂಂಗೆ ಕರೆ‌ ಮಾಡಿ ಅಲ್ಲಿ ಅರೆಂಜ್ ಮಾಡಿಕೊಡುತ್ತಾರೆ ಎಂದು ಹೇಳಿದ್ದಾರೆ. ಕರೆ ಮಾಡಿದರೆ ಯಾರೂ ಕೂಡಾ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ರೋಗಿಯ ಸಂಬಂಧಿಕರು ಹೇಳಿದಾಗ, ನನಗೂ ಬೆಡ್​ಗೂ ಸಂಬಂಧವಿಲ್ಲ, ನನಗೆ ಬೆಡ್ ಕೊಡಿಸಲು ಆಗಲ್ಲ. ನನ್ನ ಹೆಂಡತಿಗೂ ವೆಂಟಿಲೇಟರ್ ಕೊಡಿಸಲು ನನಗೆ ಯೋಗ್ಯತೆ ಇಲ್ಲ. ನನ್ನ ಕೈ ಸೋತೋಗಿದೆ‌ ಎಂದು ಅಸಹಾಯಕತೆ ತೋಡಿಕೊಂಡಿದ್ದಾರೆ.

ಇದನ್ನು ಕೇಳಿದ ರೋಗಿಯ ಸಂಬಂಧಿಕ, ನಿಮಗೆ ಜವಾಬ್ದಾರಿ ಏಕೆ? ಕೆಲಸ ಬಿಟ್ಟೋಗಿ ಎಂದು ಹೇಳಿದ್ದಾರೆ. ಕೆಲಸದಿಂದ ಕಳುಹಿಸಿ ಬಿಡಲು ನಾನು ರೆಡಿ ಇದ್ದೇನೆ.  ನನ್ನ ಮೇಲೆ ಯಾವುದೇ ಆಕ್ಷನ್ ತೆಗೆದುಕೊಳ್ಳಲಿ. ನಾನು‌ ಮನೆಗೆ ಹೋಗಲು ರೆಡಿ ಇದ್ದೇನೆ. ನನ್ನ ಕೈಯಲ್ಲಿ ಬೆಡ್ ಕೊಡಿಸಲು ಸಾಧ್ಯವಿಲ್ಲ ಎಂದು  ಪ್ರತಿಕ್ರಿಯೆ ನೀಡಿರುವ ಆಡಿಯೋ ಇದೀಗ ವೈರಲ್​ ಆಗಿದೆ.

ಇದನ್ನೂ ಓದಿ: ಘಟನೆಗೆ ಮೈಸೂರು ಡಿಸಿಯೇ ನೇರ ಕಾರಣ; ಚಾಮರಾಜನಗರ ಡಿಸಿಯಿಂದ ಆರೋಪ

FMR CM Siddaramaiah: ಮೈಸೂರು ಡಿಸಿ ರೋಹಿಣಿ ಸಿಂಧೂರಿ ಆಕ್ಸಿಜನ್ ಕೊಡ್ಬೇಡಿ ಅಂದಿದ್ರಂತೆ, ಇದ್ಯಾವ ಕಥೆ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ