AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ: 20 ವರ್ಷ ಕಠಿಣ ಶಿಕ್ಷೆ, ₹52 ಸಾವಿರ ದಂಡ ವಿಧಿಸಿದ ವಿಶೇಷ ಪೋಕ್ಸೋ ನ್ಯಾಯಾಲಯ

ಮೈಸೂರು ಜಿಲ್ಲೆ ಸಾಲಿಗ್ರಾಮ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಈಗ ತೀರ್ಪು ಸಿಕ್ಕಿದೆ. ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ, ₹52 ಸಾವಿರ ದಂಡ ವಿಧಿಸಲಾಗಿದೆ.

ಮೈಸೂರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ: 20 ವರ್ಷ ಕಠಿಣ ಶಿಕ್ಷೆ, ₹52 ಸಾವಿರ ದಂಡ ವಿಧಿಸಿದ ವಿಶೇಷ ಪೋಕ್ಸೋ ನ್ಯಾಯಾಲಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 19, 2022 | 9:18 AM

Share

ಮೈಸೂರು: ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದವನಿಗೆ 20 ವರ್ಷ ಕಠಿಣ ಶಿಕ್ಷೆ, ₹52 ಸಾವಿರ ದಂಡ ವಿಧಿಸಿ ವಿಶೇಷ ಪೋಕ್ಸೋ ನ್ಯಾಯಾಲಯ ಆದೇಶ ಪ್ರಕಟಿಸಿದೆ. ಮೈಸೂರು ಜಿಲ್ಲೆ ಸಾಲಿಗ್ರಾಮ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಈಗ ತೀರ್ಪು ಸಿಕ್ಕಿದೆ. ಆರೋಪಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ.

ಕುಡಿದ ಮತ್ತಿನಲ್ಲಿ ಚಾಕು ಇರಿದಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಕುಡಿದ ಮತ್ತಿನಲ್ಲಿ ಜಗಳವಾಡಿ ವ್ಯಕ್ತಿಗೆ ಚಾಕು ಇರಿದಿದ್ದ ಆರೋಪಿಯನ್ನು ವಿವೇಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಲಿಯಮ್ಸ್ ಪ್ರಕಾಶ್ ಬಂಧಿತ ಆರೋಪಿ. ಈತ ಅ.17ರಂದು ಈಜಿಪುರ ಚಾರ್ವಿ ಚರ್ಚ್​ ಬಳಿಯ ಯೋಗೇಶ್ ಎಂಬ ಯುವಕನಿಗೆ ಚಾಕು ಇರಿದಿದ್ದ.

ಕುಡಿದ ಮತ್ತಿನಲ್ಲಿ ಇಬ್ಬರ ಮಧ್ಯೆ ಜಗಳವಾಗಿತ್ತು. ಈ ವೇಳೆ ಆರೋಪಿ ಯುವಕನಿಗೆ ಚಾಕು ಇರಿದಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ವಿವೇಕನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ವಿರುದ್ಧ ಈ ಹಿಂದೆ ಅಶೋಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನ.10 ರಂದು ಚರ್ಚ್ ನಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆ ಬೆದರಿಕೆ ಹಾಕಿದ್ದ ಆರೋಪವಿದೆ. ಸದ್ಯ ಆರೋಪಿಯನ್ನ ಬಂಧಿಸಿ ಹೆಚ್ಚಿನ ತನಿಖೆ‌ ನಡೆಸಲಾಗುತ್ತಿದೆ. ಇದನ್ನೂ ಓದಿ: ಐಷಾರಾಮಿ ಬೈಕ್ ಓಡಿಸಿ ಬೇಬಿ ಬಂಪ್​, ಡಿಫ್ರೆಂಟ್ ಫೋಸ್ ಕೊಟ್ಟ ಮಾಜಿ ಮಿಸ್ ಕರ್ನಾಟಕ ಬೆಡಗಿ

ಅವಳಿ ಚಿರತೆಗಳು ಪ್ರತ್ಯಕ್ಷ

ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ನಿರವುಗಲ್ ಉಲ್ಕಲಮ್ಮನ ಬೆಟ್ಟದಲ್ಲಿ ಅವಳಿ ಚಿರತೆಗಳು ಪ್ರತ್ಯಕ್ಷವಾಗಿವೆ. ಚಿರತೆಗಳನ್ನ ಕಂಡು ಬೆಟ್ಟಕ್ಕೆ ಭೇಟಿನೀಡಿದ್ದ ಭಕ್ತರು ಭಯಬೀತರಾಗಿದ್ದಾರೆ. ಕೂಡಲೇ ಚಿರತೆಗಳನ್ನ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ. ಉಲ್ಕಲಮ್ಮನ ದೇವಾಲಯಕ್ಕೆ ಪ್ರತಿ ದಿನ ನೂರಾರು ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿ ದರ್ಶನ ಪಡೆಯುತ್ತಾರೆ. ಈ ನಿಟ್ಟಿನಲ್ಲಿ ಅಹಿತಕರ ಘಟನೆ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಕೂಡಲೇ ಅರಣ್ಯ ಇಲಾಖೆಯವರು ಇತ್ತ ಗಮನಹರಿಸಿ ಚಿರತೆಗಳನ್ನ ಸೆರೆ ಹಿಡಿಯಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಲಾರಿ, ಗೂಡ್ಸ್​ ವಾಹನ ಮುಖಾಮುಖಿ ಡಿಕ್ಕಿ-ಇಬ್ಬರು ಸಾವು

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ಬಳಿ ಲಾರಿ, ಗೂಡ್ಸ್​ ವಾಹನ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಮಹಾರಾಷ್ಟ್ರದ ಉಮರ್ಗಾ ಮೂಲದ ಇಬ್ಬರು ಮೃತಪಟ್ಟಿದ್ದಾರೆ. ನರೋಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:02 am, Wed, 19 October 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್