AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಮಹಿಳೆಯ ಶವ ಹೊತ್ತು ಸಾಗುವ ಮೂಲಕ ಸೌಹಾರ್ದತೆ ಮೆರೆದ ಮುಸ್ಲಿಮರು

ರಾಜ್ಯದಲ್ಲಿ ಧರ್ಮ‌ ದಂಗಲ್ ಜೋರಾಗಿದೆ. ಟಿಪ್ಪು, ಹಿಜಾಬ್ ಹಲಾಲ್ ಹೆಸರಿನಲ್ಲಿ ಹಿಂದೂ ಮುಸ್ಲಿಂ ಸಂಘರ್ಷಗಳು ನಡೆಯುತ್ತಿವೆ. ಪರ ವಿರೋಧಗಳ ಭರಾಟೆ ಜೋರಾಗಿದೆ. ಇದರ ಬೆನ್ನಲ್ಲೇ ಅಪರೂಪಕ್ಕೆ ಹಿಂದೂ ಮುಸ್ಲಿಂ ಭಾವೈಕ್ಯತೆ ಮೆರೆಯುವ ಕಾರ್ಯವೊಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.

ಹಿಂದೂ ಮಹಿಳೆಯ ಶವ ಹೊತ್ತು ಸಾಗುವ ಮೂಲಕ ಸೌಹಾರ್ದತೆ ಮೆರೆದ ಮುಸ್ಲಿಮರು
ಹಿಂದೂ ಮಹಿಳೆಯ ಶವ ಹೊತ್ತು ಸಾಗುವ ಮೂಲಕ ಸೌಹಾರ್ದತೆ ಮೆರೆದ ಮುಸ್ಲಿಮರು
Follow us
TV9 Web
| Updated By: Rakesh Nayak Manchi

Updated on:Nov 13, 2022 | 1:13 PM

ಮೈಸೂರು: ಹಿಂದೂ ಮಹಿಳೆಯ ಶವ ಹೊತ್ತು ಸಾಗಿದ ಮುಸ್ಲಿಮರು ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸುವ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ. ಇಂತಹ ಮಾನವೀಯ ಘಟನೆ ಮಂಡಿ ಮೊಹಲ್ಲಾದಲ್ಲಿರುವ ಸುನ್ನಿ ಚೌಕ ಪ್ರದೇಶದಲ್ಲಿ ನಡೆದಿದೆ. ಶಿವಮ್ಮ ಎಂಬ ಮಹಿಳೆ ಸುಮಾರು 30 ವರ್ಷದಿಂದಲೂ ಇಲ್ಲೇ ಗುಡಿಸಲೊಂದರಲ್ಲಿ ವಾಸಿಸುತ್ತಿದ್ದರು. ಆಕೆಗೆ ಮಗ, ಮಗಳು ಇದ್ದರೂ ಅಲ್ಲಿಗೆ ಹೋಗದೇ ಗುಡಿಸಲಿನಲ್ಲಿಯೇ ವಾಸಿಸುತ್ತಿದ್ದರು. ಮಗ ಮಾತ್ರ ಕೆಲವೊಮ್ಮೆ ಬಂದು ತಾಯಿಯನ್ನು ಮಾತನಾಡಿಸಿ ಹೊಗುತ್ತಿದ್ದ. ಆದರೆ ಶುಕ್ರವಾರದಂದು ಶಿವಮ್ಮ ಮೃತಪಟ್ಟಿದ್ದರು. ವಿಷಯ ತಿಳಿದ ಒಂದಷ್ಟು ಮುಸ್ಲಿಮರು ಶಿವಮ್ಮ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಿದ್ದಾರೆ.

ಶಿವಮ್ಮ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಸುತ್ತಮುತ್ತಲಿನ ಮುಸ್ಲಿಮರು ಅಂತ್ಯಸಂಸ್ಕಾರ ನೆರವೇರಿಸಲು ಮುಂದೆಬಂದಿದ್ದಾರೆ. ಸುನ್ನಿ ಚೌಕದಿಂದ ಬನ್ನಿಮಂಟಪದ ಜೋಡಿ ತೆಂಗಿನ ಮರ ರುದ್ರಭೂಮಿಗೆ ಪಾರ್ಥಿವ ಶರೀರವನ್ನು‌ ಮೆರವಣಿಗೆ ಮೂಲಕ ತೆಗೆದುಕೊಂಡು ಬಂದಿದ್ದಾರೆ. ಈ ವೇಳೆ ಮುಸ್ಲಿಂ ಬಾಂಧವರೇ ಶವಕ್ಕೆ ಹೆಗಲು ಕೊಟ್ಟಿದ್ದಾರೆ. ರುದ್ರಭೂಮಿಯಲ್ಲಿ ಶಿವಮ್ಮಳ ಮಗ, ಮಗಳು, ಸೊಸೆ ಹಾಗೂ ಮೊಮ್ಮಕ್ಕಳು ವಿಧಿವತ್ತಾಗಿ ಪೂಜೆ ಸಲ್ಲಿಸಿದ ನಂತರ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಮುಸ್ಲಿಮರು ಕೊನೆವರೆಗೂ ಅಲ್ಲೇ ಇದ್ದು ಎಲ್ಲಾ ನೆರವನ್ನು ನೀಡಿದ್ದಾರೆ. ಶಿವಮ್ಮಳ ಕೊನೆ‌ ಆಸೆ ಸಹಾ ಇದೇ ಆಗಿತ್ತಂತೆ. ಅವರು ಬದುಕಿದ್ದಾಗಲೇ ಮುಸ್ಲಿಮರೇ ನನ್ನ ಅಂತ್ಯ ಸಂಸ್ಕಾರ ಮಾಡಬೇಕು ಅಂತಾ ಮನವಿ ಮಾಡಿದ್ದರಂತೆ.

ಸದ್ಯ ಎಲ್ಲೆಡೆ ಧರ್ಮ ದಂಗಲ್ ಜೋರಾಗಿದೆ. ಜಾತಿ ಧರ್ಮದ ಹೆಸರಿನಲ್ಲಿ ರಾಗ ದ್ವೇಷದಿಂದ ಹೊಡೆದಾಟ ನಡೆಯುತ್ತಿದೆ. ಇಂತಹ ಕಾಲಘಟ್ಟದಲ್ಲಿ ಈ ರೀತಿಯ ಸಾಮರಸ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಇಂತಹ ಕಾರ್ಯಕ್ರಮಗಳು ಮತ್ತಷ್ಟು ಆಗಲಿ. ಎಲ್ಲೆಡೆ ಶಾಂತಿ ನೆಮ್ಮದಿ ನೆಲಸಲಿ. ಇದು ಎಲ್ಲರಿಗೂ ಮಾದರಿಯಾಗಲಿ ಅನ್ನೋದೆ ಎಲ್ಲರ ಆಶಯ.

ವರದಿ: ರಾಮ್, ಟಿವಿ9 ಮೈಸೂರು

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:12 pm, Sun, 13 November 22

ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್