AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಸಂಬಂಧಿಯ ಬಂಧನ

Prajwal Revanna Sexual Assault Case: ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆ ಕಾಣೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ನಾಪತ್ತೆಯಾಗಿರುವ ಸಂತ್ರಸ್ತೆಯ ಪುತ್ರ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಪ್ರಕರಣ ಸಂಬಂಧ ಭವಾನಿ ರೇವಣ್ಣ ಅವರ ಸಂಬಂಧಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಸಂಬಂಧಿಯ ಬಂಧನ
ಭವಾನಿ ರೇವಣ್ಣ, ಹೆಚ್​ಡಿ ರೇವಣ್ಣ
TV9 Web
| Edited By: ವಿವೇಕ ಬಿರಾದಾರ|

Updated on:May 04, 2024 | 9:57 AM

Share

ಬೆಂಗಳೂರು, ಮೇ 04: ಹಾಸನದ ಸಂಸದ ಪ್ರಜ್ವಲ್ ರೇವಣ್ಣ (Prajwal video case) ಅಶ್ಲೀಲ ವಿಡಿಯೋ ಪ್ರಕರಣ ದೇಶದಾದ್ಯಂತ ಭಾರಿ ಸದ್ದು ಮಾಡುತ್ತಿದೆ. ಪ್ರಜ್ವಲ್ ತಂದೆ, ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣರನ್ನು (HD Revanna) ಕೂಡ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನಾಗಿ ಹೆಸರಿಸಲಾಗಿದೆ. ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಳು ಎನ್ನಲಾದ ಕೆಆರ್​ ನಗರದ ಸಂತ್ರಸ್ತೆ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ (Bhavni Revanna) ಅವರ ಸಂಬಂಧಿಯೊಬ್ಬರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಇದು ಪ್ರಜ್ವಲ್​ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಂಧನವಾಗಿದೆ.

ನಾಪತ್ತೆಯಾದ ಸಂತ್ರಸ್ತೆಯ ಪುತ್ರ ಶುಕ್ರವಾರ (ಮೇ 03) ರಂದು ಕೆಆರ್​ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹೆಚ್​ಡಿ ರೇವಣ್ಣ ವಿರುದ್ಧ ಸೆಕ್ಷನ್ 364/A 365 ಹಾಗೂ 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರೇವಣ್ಣರನ್ನು ಆರೋಪಿ ಸಂಖ್ಯೆ 1 ಎಂದೂ ಸತೀಶ್ ಬಾಬು ಎಂಬವರನ್ನು ಆರೋಪಿ ಸಂಖ್ಯೆ 2 ಎಂದೂ ನಮೂದಿಸಲಾಗಿದೆ. ಸಂತ್ರಸ್ತೆಯ ಪತ್ತೆಗೆ ವಿಶೇಷ ತನಿಖಾ ದಳ (SIT) ಶುಕ್ರವಾರ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿತ್ತು. ಈ ಸ್ಥಳದಲ್ಲಿ ಮಹಿಳೆ ಇದ್ದಾಳೆಯೇ ಅಂತ ಶೋಧ ನಡೆಸಿತ್ತು.

ಇದನ್ನೂ ಓದಿ: ವಿದೇಶದಲ್ಲಿರುವ ಪ್ರಜ್ವಲ್​ ರೇವಣ್ಣನನ್ನು ಬಂಧಿಸುವುದು ಬಲು ಸುಲಭ: ಸಿದ್ದರಾಮಯ್ಯಗೆ ಕಾನೂನು ಪಾಠ ಮಾಡಿದ ಅಣ್ಣಾಮಲೈ

ಎಸ್​ಐಟಿ ತಂಡಗಳು ಗುರುವಾರ ತಡರಾತ್ರಿಯಿಂದಲೇ ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳು ಮತ್ತು ಬೆಂಗಳೂರು ನಗರ ಸೇರಿದಂತೆ ವಿವಿಧಡೆ ಪರಿಶೀಲನೆ ನಡೆಸಿದ್ದವು. ಇನ್ನು ಪ್ರಕರಣ ಸಂಬಂಧ ಇಂದು ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರಿಗೆ ಅಧಿಕಾರಿಗಳು ನೋಟಿಸ್​ ನೀಡಿದ್ದಾರೆ.

ಅಜ್ಞಾತ ಸ್ಥಳದಲ್ಲಿ ರೇವಣ್ಣ

ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆದರೆ ರೇವಣ್ಣಗೂ ಬಂಧನ ಭೀತಿ ಎದುರಾಗಲಿದೆ. ಹೀಗಾಗಿ ಸದ್ಯ ಬೆಂಗಳೂರಿನ ಅಜ್ಞಾತ ಸ್ಥಳದಲ್ಲಿದ್ದು ರೇವಣ್ಣ ವಕೀಲರ ಮೂಲಕ ಮಾಹಿತಿ ಪಡೆಯುತ್ತಿದ್ದಾರೆ. ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪು ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ.

ಈ ಮಧ್ಯೆ, ಇಂದು ಸಂಜೆಯೊಳಗೆ ವಿಚಾರಣೆಗೆ ಹಾಜರಾಗಲು ರೇವಣ್ಣಗೆ ಎಸ್​​​ಐಟಿ ಎರಡನೇ ನೋಟಿಸ್ ನೀಡಿದೆ. ಇಂದು ನಿರೀಕ್ಷಣಾ ಜಾಮೀನು ಸಿಕ್ಕಿದರೆ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ರೇವಣ್ಣ ಮನಗೆ ಎಸ್​ಐಟಿ ಭೇಟಿ

ಹೊಳೆನರಸೀಪುರದ ಹೆಚ್​ಡಿ ರೇವಣ್ಣ ಅವರ ಮನೆಗೆ ಎಸ್​ಐಟಿ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಮನೆಯಲ್ಲಿದ್ದ ಭವಾನಿ ರೇವಣ್ಣ ಜೊತೆ  ಚರ್ಚೆ ನಡೆಸಿದ್ದಾರೆ. ಬೆಳಗ್ಗೆ 10 ಗಂಟೆ ಬಳಿಕ ಎಸ್​​ಐಟಿ ಸ್ಥಳ ಮಹಜರು ಮಾಡಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 9:55 am, Sat, 4 May 24

Follow Us
ಪುಟ್ಟ ಮಗಳ ಜೀವ ಉಳಿಸಿ ಪ್ರಾಣಬಿಟ್ಟ ಫುಟ್ಬಾಲ್ ಆಟಗಾರನ ಪತ್ನಿ
ಪುಟ್ಟ ಮಗಳ ಜೀವ ಉಳಿಸಿ ಪ್ರಾಣಬಿಟ್ಟ ಫುಟ್ಬಾಲ್ ಆಟಗಾರನ ಪತ್ನಿ
ಮೊಹರಂ ಮೆರವಣಿಗೆಯಲ್ಲಿ ವಿಷದ ಮಾತ್ರೆ ಹಂಚುತ್ತಿದ್ದವ ಮುಂಬೈನಲ್ಲಿ ಅರೆಸ್ಟ್
ಮೊಹರಂ ಮೆರವಣಿಗೆಯಲ್ಲಿ ವಿಷದ ಮಾತ್ರೆ ಹಂಚುತ್ತಿದ್ದವ ಮುಂಬೈನಲ್ಲಿ ಅರೆಸ್ಟ್
ಜೂನ್ 29 ರಿಂದ ಜುಲೈ 05ರ ವರೆಗಿನ ವಾರದ ದ್ವಾದಶ ರಾಶಿಗಳ ಫಲಾಫಲ
ಜೂನ್ 29 ರಿಂದ ಜುಲೈ 05ರ ವರೆಗಿನ ವಾರದ ದ್ವಾದಶ ರಾಶಿಗಳ ಫಲಾಫಲ
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ