AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾಧಿಕಾರಿ ಹೆಚ್ಚು ಹೊತ್ತು ಸಭೆ ನಡೆಸುವುದನ್ನ ಬಿಡಲಿ: ಮೈಸೂರು ಡಿಸಿ ಸಿಂಧೂರಿಗೆ ಎಚ್ಚರಿಕೆ ಕೊಟ್ಟ ಸಂಸದ ಪ್ರತಾಪ್​ ಸಿಂಹ

ಮೈಸೂರು ಜಿಲ್ಲೆ ಅಭಿರಾಮ್ ಜೀ ಶಂಕರ್, ಶಿಖಾ, ರಂದೀಪ್ ರಂತಹ ಮಾದರಿ ಅಧಿಕಾರಿಗಳನ್ನು ಕಂಡಿದೆ. ಮೈಸೂರಿನಲ್ಲಿ ಮೂವರು ಐಎಎಸ್​ ಕೆಡಾರ್ ಅಧಿಕಾರಿಗಳಿದ್ದಾರೆ. ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತೆ, ಜಿ.ಪಂ. ಸಿಇಓ ಇದ್ದಾರೆ. ಇವರೆಲ್ಲರೂ ಒಂದೊಂದು ಟಾಸ್ಕ್​ಫೋರ್ಸ್ ವಹಿಸಿಕೊಂಡು ಕೆಲಸ ಮಾಡಿದರೆ ಸೂಕ್ತವಾದೀತು. ಆ ನಿಟ್ಟಿನಲ್ಲಿ ಈಗಿರುವ ಜಿಲ್ಲಾಡಳಿತವೂ ಕೆಲಸ ಮಾಡಬೇಕೆಂಬುದು ನಮ್ಮ ನಿರೀಕ್ಷೆ. ಜಿಲ್ಲಾಧಿಕಾರಿ ಹೆಚ್ಚು ಹೊತ್ತು ಸಭೆ ನಡೆಸುವುದನ್ನ ಬಿಡಲಿ -ಸಂಸದ ಪ್ರತಾಪ್ ಸಿಂಹ

ಜಿಲ್ಲಾಧಿಕಾರಿ ಹೆಚ್ಚು ಹೊತ್ತು ಸಭೆ ನಡೆಸುವುದನ್ನ ಬಿಡಲಿ: ಮೈಸೂರು ಡಿಸಿ ಸಿಂಧೂರಿಗೆ ಎಚ್ಚರಿಕೆ ಕೊಟ್ಟ ಸಂಸದ ಪ್ರತಾಪ್​ ಸಿಂಹ
ಸಂಸದ ಪ್ರತಾಪ್​ ಸಿಂಹ (ಸಂಗ್ರಹ ಚಿತ್ರ)
Follow us
ಸಾಧು ಶ್ರೀನಾಥ್​
|

Updated on: May 25, 2021 | 1:12 PM

ಮೈಸೂರು: ಮೈಸೂರು ಜಿಲ್ಲಾಡಳಿತ ಮಾದರಿ ಅಧಿಕಾರಿಗಳನ್ನ ಕಂಡಿದೆ. ಎಲ್ಲರನ್ನೂ ಒಟ್ಟುಗೂಡಿಸಿಕೊಂಡು ಅಂತಹ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಈಗಿರುವ ಜಿಲ್ಲಾಡಳಿತವೂ ಅದೇ ರೀತಿ ಕೆಲಸ ಮಾಡಬೇಕು. ಕೆಲಸ ಮಾಡುವುದರಲ್ಲಿ ವೈಯಕ್ತಿಕತೆಯ ಪ್ರಶ್ನೆ ಇಲ್ಲ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಪರೋಕ್ಷವಾಗಿ ಮೈಸೂರು ಜಿಲ್ಲಾಧಿಕಾರಿಗೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಹೆಚ್ಚು ಹೊತ್ತು ಸಭೆ ನಡೆಸುವುದನ್ನ ಬಿಡಲಿ. ಜಿಲ್ಲಾಧಿಕಾರಿಗಳು ಗ್ರಾಮೀಣ ಭಾಗಕ್ಕೆ ಹೋಗಿ ಕೆಲಸ ಮಾಡಲಿ ಎಂದೂ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಸಂಸದ ಪ್ರತಾಪ್ ಸಿಂಹ ಸೂಚಿಸಿದ್ದಾರೆ.

ಮೈಸೂರು ಜಿಲ್ಲೆ ಅಭಿರಾಮ್ ಜೀ ಶಂಕರ್, ಶಿಖಾ, ರಂದೀಪ್ ರಂತಹ ಮಾದರಿ ಅಧಿಕಾರಿಗಳನ್ನು ಕಂಡಿದೆ. ಮೈಸೂರಿನಲ್ಲಿ ಮೂವರು ಐಎಎಸ್​ ಕೆಡಾರ್ ಅಧಿಕಾರಿಗಳಿದ್ದಾರೆ. ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತೆ, ಜಿ.ಪಂ. ಸಿಇಓ ಇದ್ದಾರೆ. ಇವರೆಲ್ಲರೂ ಒಂದೊಂದು ಟಾಸ್ಕ್​ಫೋರ್ಸ್ ವಹಿಸಿಕೊಂಡು ಕೆಲಸ ಮಾಡಿದರೆ ಸೂಕ್ತವಾದೀತು. ಆ ನಿಟ್ಟಿನಲ್ಲಿ ಈಗಿರುವ ಜಿಲ್ಲಾಡಳಿತವೂ ಕೆಲಸ ಮಾಡಬೇಕೆಂಬುದು ನಮ್ಮ ನಿರೀಕ್ಷೆ. ಜನಪ್ರತಿನಿಧಿಗಳೂ ಟಾಸ್ಕ್​ಫೋರ್ಸ್​ ವಹಿಸಿ ಕೆಲಸ ಮಾಡ್ತಿದ್ದೇವೆ. ಆಕ್ಸಿಜನ್, ಬೆಡ್, ಆಸ್ಪತ್ರೆ ಸೇರಿ ಎಲ್ಲವನ್ನೂ ನೋಡಿಕೊಳ್ತಿದ್ದೇವೆ. ಜಿಲ್ಲಾಧಿಕಾರಿ ಹೆಚ್ಚು ಹೊತ್ತು ಸಭೆ ನಡೆಸುವುದನ್ನ ಬಿಡಲಿ. ಜಿಲ್ಲಾಧಿಕಾರಿಗಳು ಗ್ರಾಮೀಣ ಭಾಗಕ್ಕೆ ಹೋಗಿ ಕೆಲಸ ಮಾಡಲಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಮೈಸೂರಿನಲ್ಲಿ ನಗರಕ್ಕಿಂತ ಗ್ರಾಮೀಣ ಭಾಗದಲ್ಲಿ ಹೆಚ್ಚು ಸಾವು ಕಂಡಿದೆ. ಮೈಸೂರು ಗ್ರಾಮೀಣ ಭಾಗದಲ್ಲಿ 350 ಬೆಡ್​ಗಳಿವೆ. ಮೈಸೂರು ನಗರದಲ್ಲಿ 6 ಸಾವಿರಕ್ಕೂ ಅಧಿಕ ಬೆಡ್​ಗಳಿವೆ. ಹಳ್ಳಿಗಳಿಂದ ನಗರಕ್ಕೆ ಬಂದು ಸೇರುವವರು ಸಾವನ್ನಪ್ಪುತ್ತಿದ್ದಾರೆ. ಇದರಿಂದಲೇ ಗ್ರಾಮೀಣ ಭಾಗದಲ್ಲಿ ಹೆಚ್ಚು ಸಾವು ಅಗುತ್ತಿರುವುದು ಗೊತ್ತಾಗುತ್ತದೆ ಎಂದು ಸಂಸದ ಪ್ರತಾಪ್ ಹೇಳಿದ್ದಾರೆ.

(mysore mp pratap simha wants district administration to act united during corona times)

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!