AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾಧಿಕಾರಿ ಹೆಚ್ಚು ಹೊತ್ತು ಸಭೆ ನಡೆಸುವುದನ್ನ ಬಿಡಲಿ: ಮೈಸೂರು ಡಿಸಿ ಸಿಂಧೂರಿಗೆ ಎಚ್ಚರಿಕೆ ಕೊಟ್ಟ ಸಂಸದ ಪ್ರತಾಪ್​ ಸಿಂಹ

ಮೈಸೂರು ಜಿಲ್ಲೆ ಅಭಿರಾಮ್ ಜೀ ಶಂಕರ್, ಶಿಖಾ, ರಂದೀಪ್ ರಂತಹ ಮಾದರಿ ಅಧಿಕಾರಿಗಳನ್ನು ಕಂಡಿದೆ. ಮೈಸೂರಿನಲ್ಲಿ ಮೂವರು ಐಎಎಸ್​ ಕೆಡಾರ್ ಅಧಿಕಾರಿಗಳಿದ್ದಾರೆ. ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತೆ, ಜಿ.ಪಂ. ಸಿಇಓ ಇದ್ದಾರೆ. ಇವರೆಲ್ಲರೂ ಒಂದೊಂದು ಟಾಸ್ಕ್​ಫೋರ್ಸ್ ವಹಿಸಿಕೊಂಡು ಕೆಲಸ ಮಾಡಿದರೆ ಸೂಕ್ತವಾದೀತು. ಆ ನಿಟ್ಟಿನಲ್ಲಿ ಈಗಿರುವ ಜಿಲ್ಲಾಡಳಿತವೂ ಕೆಲಸ ಮಾಡಬೇಕೆಂಬುದು ನಮ್ಮ ನಿರೀಕ್ಷೆ. ಜಿಲ್ಲಾಧಿಕಾರಿ ಹೆಚ್ಚು ಹೊತ್ತು ಸಭೆ ನಡೆಸುವುದನ್ನ ಬಿಡಲಿ -ಸಂಸದ ಪ್ರತಾಪ್ ಸಿಂಹ

ಜಿಲ್ಲಾಧಿಕಾರಿ ಹೆಚ್ಚು ಹೊತ್ತು ಸಭೆ ನಡೆಸುವುದನ್ನ ಬಿಡಲಿ: ಮೈಸೂರು ಡಿಸಿ ಸಿಂಧೂರಿಗೆ ಎಚ್ಚರಿಕೆ ಕೊಟ್ಟ ಸಂಸದ ಪ್ರತಾಪ್​ ಸಿಂಹ
ಸಂಸದ ಪ್ರತಾಪ್​ ಸಿಂಹ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
|

Updated on: May 25, 2021 | 1:12 PM

Share

ಮೈಸೂರು: ಮೈಸೂರು ಜಿಲ್ಲಾಡಳಿತ ಮಾದರಿ ಅಧಿಕಾರಿಗಳನ್ನ ಕಂಡಿದೆ. ಎಲ್ಲರನ್ನೂ ಒಟ್ಟುಗೂಡಿಸಿಕೊಂಡು ಅಂತಹ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಈಗಿರುವ ಜಿಲ್ಲಾಡಳಿತವೂ ಅದೇ ರೀತಿ ಕೆಲಸ ಮಾಡಬೇಕು. ಕೆಲಸ ಮಾಡುವುದರಲ್ಲಿ ವೈಯಕ್ತಿಕತೆಯ ಪ್ರಶ್ನೆ ಇಲ್ಲ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಪರೋಕ್ಷವಾಗಿ ಮೈಸೂರು ಜಿಲ್ಲಾಧಿಕಾರಿಗೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಹೆಚ್ಚು ಹೊತ್ತು ಸಭೆ ನಡೆಸುವುದನ್ನ ಬಿಡಲಿ. ಜಿಲ್ಲಾಧಿಕಾರಿಗಳು ಗ್ರಾಮೀಣ ಭಾಗಕ್ಕೆ ಹೋಗಿ ಕೆಲಸ ಮಾಡಲಿ ಎಂದೂ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಸಂಸದ ಪ್ರತಾಪ್ ಸಿಂಹ ಸೂಚಿಸಿದ್ದಾರೆ.

ಮೈಸೂರು ಜಿಲ್ಲೆ ಅಭಿರಾಮ್ ಜೀ ಶಂಕರ್, ಶಿಖಾ, ರಂದೀಪ್ ರಂತಹ ಮಾದರಿ ಅಧಿಕಾರಿಗಳನ್ನು ಕಂಡಿದೆ. ಮೈಸೂರಿನಲ್ಲಿ ಮೂವರು ಐಎಎಸ್​ ಕೆಡಾರ್ ಅಧಿಕಾರಿಗಳಿದ್ದಾರೆ. ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತೆ, ಜಿ.ಪಂ. ಸಿಇಓ ಇದ್ದಾರೆ. ಇವರೆಲ್ಲರೂ ಒಂದೊಂದು ಟಾಸ್ಕ್​ಫೋರ್ಸ್ ವಹಿಸಿಕೊಂಡು ಕೆಲಸ ಮಾಡಿದರೆ ಸೂಕ್ತವಾದೀತು. ಆ ನಿಟ್ಟಿನಲ್ಲಿ ಈಗಿರುವ ಜಿಲ್ಲಾಡಳಿತವೂ ಕೆಲಸ ಮಾಡಬೇಕೆಂಬುದು ನಮ್ಮ ನಿರೀಕ್ಷೆ. ಜನಪ್ರತಿನಿಧಿಗಳೂ ಟಾಸ್ಕ್​ಫೋರ್ಸ್​ ವಹಿಸಿ ಕೆಲಸ ಮಾಡ್ತಿದ್ದೇವೆ. ಆಕ್ಸಿಜನ್, ಬೆಡ್, ಆಸ್ಪತ್ರೆ ಸೇರಿ ಎಲ್ಲವನ್ನೂ ನೋಡಿಕೊಳ್ತಿದ್ದೇವೆ. ಜಿಲ್ಲಾಧಿಕಾರಿ ಹೆಚ್ಚು ಹೊತ್ತು ಸಭೆ ನಡೆಸುವುದನ್ನ ಬಿಡಲಿ. ಜಿಲ್ಲಾಧಿಕಾರಿಗಳು ಗ್ರಾಮೀಣ ಭಾಗಕ್ಕೆ ಹೋಗಿ ಕೆಲಸ ಮಾಡಲಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಮೈಸೂರಿನಲ್ಲಿ ನಗರಕ್ಕಿಂತ ಗ್ರಾಮೀಣ ಭಾಗದಲ್ಲಿ ಹೆಚ್ಚು ಸಾವು ಕಂಡಿದೆ. ಮೈಸೂರು ಗ್ರಾಮೀಣ ಭಾಗದಲ್ಲಿ 350 ಬೆಡ್​ಗಳಿವೆ. ಮೈಸೂರು ನಗರದಲ್ಲಿ 6 ಸಾವಿರಕ್ಕೂ ಅಧಿಕ ಬೆಡ್​ಗಳಿವೆ. ಹಳ್ಳಿಗಳಿಂದ ನಗರಕ್ಕೆ ಬಂದು ಸೇರುವವರು ಸಾವನ್ನಪ್ಪುತ್ತಿದ್ದಾರೆ. ಇದರಿಂದಲೇ ಗ್ರಾಮೀಣ ಭಾಗದಲ್ಲಿ ಹೆಚ್ಚು ಸಾವು ಅಗುತ್ತಿರುವುದು ಗೊತ್ತಾಗುತ್ತದೆ ಎಂದು ಸಂಸದ ಪ್ರತಾಪ್ ಹೇಳಿದ್ದಾರೆ.

(mysore mp pratap simha wants district administration to act united during corona times)

ಮನೆ ಎದುರು ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಮನೆ ಎದುರು ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ದರ್ಶನ್​ಗೆ ದೇವರ ಮೇಲೆ ಎಷ್ಟು ಭಕ್ತಿ ನೋಡಿ; ಇಲ್ಲಿದೆ ವಿಡಿಯೋ ಸಾಕ್ಷಿ
ದರ್ಶನ್​ಗೆ ದೇವರ ಮೇಲೆ ಎಷ್ಟು ಭಕ್ತಿ ನೋಡಿ; ಇಲ್ಲಿದೆ ವಿಡಿಯೋ ಸಾಕ್ಷಿ
ಐದು ದೇಶಗಳ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ಐದು ದೇಶಗಳ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ಮೇಘಸ್ಫೋಟ, ಪ್ರವಾಹದ ಬಳಿಕ ಹಿಮಾಚಲ ಪ್ರದೇಶದ ಸ್ಥಿತಿ ಹೇಗಿದೆ ನೋಡಿ
ಮೇಘಸ್ಫೋಟ, ಪ್ರವಾಹದ ಬಳಿಕ ಹಿಮಾಚಲ ಪ್ರದೇಶದ ಸ್ಥಿತಿ ಹೇಗಿದೆ ನೋಡಿ
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು