ಜಿಲ್ಲಾಧಿಕಾರಿ ಹೆಚ್ಚು ಹೊತ್ತು ಸಭೆ ನಡೆಸುವುದನ್ನ ಬಿಡಲಿ: ಮೈಸೂರು ಡಿಸಿ ಸಿಂಧೂರಿಗೆ ಎಚ್ಚರಿಕೆ ಕೊಟ್ಟ ಸಂಸದ ಪ್ರತಾಪ್​ ಸಿಂಹ

ಮೈಸೂರು ಜಿಲ್ಲೆ ಅಭಿರಾಮ್ ಜೀ ಶಂಕರ್, ಶಿಖಾ, ರಂದೀಪ್ ರಂತಹ ಮಾದರಿ ಅಧಿಕಾರಿಗಳನ್ನು ಕಂಡಿದೆ. ಮೈಸೂರಿನಲ್ಲಿ ಮೂವರು ಐಎಎಸ್​ ಕೆಡಾರ್ ಅಧಿಕಾರಿಗಳಿದ್ದಾರೆ. ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತೆ, ಜಿ.ಪಂ. ಸಿಇಓ ಇದ್ದಾರೆ. ಇವರೆಲ್ಲರೂ ಒಂದೊಂದು ಟಾಸ್ಕ್​ಫೋರ್ಸ್ ವಹಿಸಿಕೊಂಡು ಕೆಲಸ ಮಾಡಿದರೆ ಸೂಕ್ತವಾದೀತು. ಆ ನಿಟ್ಟಿನಲ್ಲಿ ಈಗಿರುವ ಜಿಲ್ಲಾಡಳಿತವೂ ಕೆಲಸ ಮಾಡಬೇಕೆಂಬುದು ನಮ್ಮ ನಿರೀಕ್ಷೆ. ಜಿಲ್ಲಾಧಿಕಾರಿ ಹೆಚ್ಚು ಹೊತ್ತು ಸಭೆ ನಡೆಸುವುದನ್ನ ಬಿಡಲಿ -ಸಂಸದ ಪ್ರತಾಪ್ ಸಿಂಹ

ಜಿಲ್ಲಾಧಿಕಾರಿ ಹೆಚ್ಚು ಹೊತ್ತು ಸಭೆ ನಡೆಸುವುದನ್ನ ಬಿಡಲಿ: ಮೈಸೂರು ಡಿಸಿ ಸಿಂಧೂರಿಗೆ ಎಚ್ಚರಿಕೆ ಕೊಟ್ಟ ಸಂಸದ ಪ್ರತಾಪ್​ ಸಿಂಹ
ಸಂಸದ ಪ್ರತಾಪ್​ ಸಿಂಹ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​

Updated on: May 25, 2021 | 1:12 PM

ಮೈಸೂರು: ಮೈಸೂರು ಜಿಲ್ಲಾಡಳಿತ ಮಾದರಿ ಅಧಿಕಾರಿಗಳನ್ನ ಕಂಡಿದೆ. ಎಲ್ಲರನ್ನೂ ಒಟ್ಟುಗೂಡಿಸಿಕೊಂಡು ಅಂತಹ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಈಗಿರುವ ಜಿಲ್ಲಾಡಳಿತವೂ ಅದೇ ರೀತಿ ಕೆಲಸ ಮಾಡಬೇಕು. ಕೆಲಸ ಮಾಡುವುದರಲ್ಲಿ ವೈಯಕ್ತಿಕತೆಯ ಪ್ರಶ್ನೆ ಇಲ್ಲ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಪರೋಕ್ಷವಾಗಿ ಮೈಸೂರು ಜಿಲ್ಲಾಧಿಕಾರಿಗೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಹೆಚ್ಚು ಹೊತ್ತು ಸಭೆ ನಡೆಸುವುದನ್ನ ಬಿಡಲಿ. ಜಿಲ್ಲಾಧಿಕಾರಿಗಳು ಗ್ರಾಮೀಣ ಭಾಗಕ್ಕೆ ಹೋಗಿ ಕೆಲಸ ಮಾಡಲಿ ಎಂದೂ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಸಂಸದ ಪ್ರತಾಪ್ ಸಿಂಹ ಸೂಚಿಸಿದ್ದಾರೆ.

ಮೈಸೂರು ಜಿಲ್ಲೆ ಅಭಿರಾಮ್ ಜೀ ಶಂಕರ್, ಶಿಖಾ, ರಂದೀಪ್ ರಂತಹ ಮಾದರಿ ಅಧಿಕಾರಿಗಳನ್ನು ಕಂಡಿದೆ. ಮೈಸೂರಿನಲ್ಲಿ ಮೂವರು ಐಎಎಸ್​ ಕೆಡಾರ್ ಅಧಿಕಾರಿಗಳಿದ್ದಾರೆ. ಜಿಲ್ಲಾಧಿಕಾರಿ, ಪಾಲಿಕೆ ಆಯುಕ್ತೆ, ಜಿ.ಪಂ. ಸಿಇಓ ಇದ್ದಾರೆ. ಇವರೆಲ್ಲರೂ ಒಂದೊಂದು ಟಾಸ್ಕ್​ಫೋರ್ಸ್ ವಹಿಸಿಕೊಂಡು ಕೆಲಸ ಮಾಡಿದರೆ ಸೂಕ್ತವಾದೀತು. ಆ ನಿಟ್ಟಿನಲ್ಲಿ ಈಗಿರುವ ಜಿಲ್ಲಾಡಳಿತವೂ ಕೆಲಸ ಮಾಡಬೇಕೆಂಬುದು ನಮ್ಮ ನಿರೀಕ್ಷೆ. ಜನಪ್ರತಿನಿಧಿಗಳೂ ಟಾಸ್ಕ್​ಫೋರ್ಸ್​ ವಹಿಸಿ ಕೆಲಸ ಮಾಡ್ತಿದ್ದೇವೆ. ಆಕ್ಸಿಜನ್, ಬೆಡ್, ಆಸ್ಪತ್ರೆ ಸೇರಿ ಎಲ್ಲವನ್ನೂ ನೋಡಿಕೊಳ್ತಿದ್ದೇವೆ. ಜಿಲ್ಲಾಧಿಕಾರಿ ಹೆಚ್ಚು ಹೊತ್ತು ಸಭೆ ನಡೆಸುವುದನ್ನ ಬಿಡಲಿ. ಜಿಲ್ಲಾಧಿಕಾರಿಗಳು ಗ್ರಾಮೀಣ ಭಾಗಕ್ಕೆ ಹೋಗಿ ಕೆಲಸ ಮಾಡಲಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಮೈಸೂರಿನಲ್ಲಿ ನಗರಕ್ಕಿಂತ ಗ್ರಾಮೀಣ ಭಾಗದಲ್ಲಿ ಹೆಚ್ಚು ಸಾವು ಕಂಡಿದೆ. ಮೈಸೂರು ಗ್ರಾಮೀಣ ಭಾಗದಲ್ಲಿ 350 ಬೆಡ್​ಗಳಿವೆ. ಮೈಸೂರು ನಗರದಲ್ಲಿ 6 ಸಾವಿರಕ್ಕೂ ಅಧಿಕ ಬೆಡ್​ಗಳಿವೆ. ಹಳ್ಳಿಗಳಿಂದ ನಗರಕ್ಕೆ ಬಂದು ಸೇರುವವರು ಸಾವನ್ನಪ್ಪುತ್ತಿದ್ದಾರೆ. ಇದರಿಂದಲೇ ಗ್ರಾಮೀಣ ಭಾಗದಲ್ಲಿ ಹೆಚ್ಚು ಸಾವು ಅಗುತ್ತಿರುವುದು ಗೊತ್ತಾಗುತ್ತದೆ ಎಂದು ಸಂಸದ ಪ್ರತಾಪ್ ಹೇಳಿದ್ದಾರೆ.

(mysore mp pratap simha wants district administration to act united during corona times)

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us