AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಚ್ಛ ಕಿರೀಟ ಪಟ್ಟವನ್ನು ಮುಡಿಗೇರಿಸಿಕೊಳ್ಳಲು ಮೈಸೂರು ಕಸರತ್ತು: ಮುಂಜಾಗೃತಾ ಕ್ರಮಕ್ಕೆ ಮುಂದಾದ ಮಹಾನಗರ ಪಾಲಿಕೆ

ಕೇವಲ 22 ದಿನ ಮಾತ್ರ. 2100 ಪೌರ ಕಾರ್ಮಿಕರಿಂದ ಬೆಳಗಿನಿಂದ ಸಂಜೆವರೆಗೂ ಸ್ವಚ್ಛತೆ ನಡೆಯುತ್ತಿದ್ದು, ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸ್ವಚ್ಛ ನಗರಿಗಾಗಿ ಮೈಸೂರು ಮಹಾನಗರ ಪಾಲಿಕೆ ಪಣ ತೊಟ್ಟಿದೆ. ಪಾಲಿಕೆ ಸಿಬ್ಬಂದಿಗಳು ಮನೆ ಬಾಗಿಲಿಗೆ ತೆರಳಿ ಕರಪತ್ರ ನೀಡಿ ಓಟಿಂಗ್ ಮಾಡಿಸುತ್ತಿದ್ದಾರೆ.

ಸ್ವಚ್ಛ ಕಿರೀಟ ಪಟ್ಟವನ್ನು ಮುಡಿಗೇರಿಸಿಕೊಳ್ಳಲು ಮೈಸೂರು ಕಸರತ್ತು: ಮುಂಜಾಗೃತಾ ಕ್ರಮಕ್ಕೆ ಮುಂದಾದ ಮಹಾನಗರ ಪಾಲಿಕೆ
ಸಾಂದರ್ಭಿಕ ಚಿತ್ರ
preethi shettigar
| Edited By: |

Updated on: Mar 09, 2021 | 11:35 AM

Share

ಮೈಸೂರು: ಸ್ವಚ್ಛ ನಗರಿ ಮೈಸೂರು ಮತ್ತೊಮ್ಮೆ ಸ್ವಚ್ಛ ಕಿರೀಟ ಪಟ್ಟವನ್ನು ತನ್ನ ಮುಡಿಗೇರಿಸಿಕೊಳ್ಳಲು ಹರಸಾಹಸ ಪಡುತ್ತಿದೆ. ಮಹಾನಗರ ಪಾಲಿಕೆ ಈ ಬಗ್ಗೆ ತಯಾರಿ ನಡೆಸುತ್ತಿದೆ. ಮುಂದಿನ ವಾರ ಮೈಸೂರಿಗೆ ಸ್ವಚ್ಛ ಸರ್ವೇಕ್ಷಣಾ ತಂಡ ತ್ಯಾಜ್ಯ ಮುಕ್ತ ನಗರ ಪರಿಶೀಲನೆಗೆ ಆಗಮಿಸಲಿದೆ. ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮ ತೆಗೆದುಕೊಳ್ಳಲಾಗುತ್ತಿದೆ.

ಇದುವರೆಗೂ 2.80 ಸಾವಿರ ಜನರಿಂದ ಮತದಾನ ನಡೆದಿದ್ದು, 1 ಲಕ್ಷಕ್ಕೂ ಹೆಚ್ಚು ಜನರು ಸ್ವಚ್ಛತಾ ಎಂಬ ಮೊಬೈಲ್‌ ಆ್ಯಪ್‌ ಡೌನ್‌ಲೋಡ್ ಮಾಡಿದ್ದಾರೆ. ಆ ಮೂಲಕ ಸ್ವಚ್ಛ ನಗರಿಗಾಗಿ ಮೈಸೂರಿಗೆ ವೋಟಿಂಗ್ ನಡೆಸುತ್ತಿದ್ದಾರೆ. ವಾಲ್ ಪೈಟಿಂಗ್, ಬೀದಿ ನಾಟಕ, ಕರಪತ್ರ ಹಂಚಿಕೆ ಮೂಲಕ ಈಗಾಗಲೇ ಜನರಲ್ಲಿ ಜಾಗೃತಿ ಮೂಡುವ ಕಾರ್ಯ ಮಾಡುತ್ತಿದ್ದಾರೆ.

ಉಳಿದಿರುವುದು ಕೇವಲ 22 ದಿನ ಮಾತ್ರ. 2100 ಪೌರ ಕಾರ್ಮಿಕರಿಂದ ಬೆಳಗಿನಿಂದ ಸಂಜೆವರೆಗೂ ಸ್ವಚ್ಛತೆ ನಡೆಯುತ್ತಿದೆ. ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸ್ವಚ್ಛ ನಗರಿಗಾಗಿ ಮೈಸೂರು ಮಹಾನಗರ ಪಾಲಿಕೆ ಪಣ ತೊಟ್ಟಿದೆ. ಪಾಲಿಕೆ ಸಿಬ್ಬಂದಿಗಳು ಮನೆ ಬಾಗಿಲಿಗೆ ತೆರಳಿ ಕರಪತ್ರ ನೀಡಿ ಓಟಿಂಗ್ ಮಾಡಿಸುತ್ತಿದ್ದಾರೆ.

ನಾಗರಿಕರ ಪ್ರತಿಕ್ರಿಯೆ ವಿಭಾಗದಲ್ಲಿ ಕಳೆದ ಬಾರಿ ಮೈಸೂರು ಹಿಂದೆ ಬಿದ್ದಿತ್ತು, ಸ್ವಚ್ಛತೆಯಲ್ಲಿ ಮೊದಲ ಸ್ಥಾನ ಪಡೆದ ಇಂದೋರ್ ನಗರವು ಈ ವಿಭಾಗದಲ್ಲಿ 1,416 ಅಂಕಗಳನ್ನು ಪಡೆದಿತ್ತು. ಇನ್ನು ಮೈಸೂರು ಈ ಹಿಂದೆ ಕೇವಲ 1,181 ಅಂಕಗಳಷ್ಟೇ ಪಡೆದಿತ್ತು. ಸ್ವಚ್ಛತಾ ಆ್ಯಪ್ ‌ಬಳಕೆಯಲ್ಲಿ ಇಂದೋರ್‌ 332 ಅಂಕಗಳಿಸಿದ್ದು, ಮೈಸೂರು ಕೇವಲ 100 ಅಂಕಗಳನ್ನಷ್ಟೇ ಗಳಿಸಿತ್ತು. ಈ ಕಾರಣಕ್ಕೆ ಮೈಸೂರು ಸ್ವಚ್ಛ ನಗರಿ ಪಟ್ಟಿಯಲ್ಲಿ ಈ ಬಾರಿಯಾದರೂ ಮೊದಲ ಸ್ಥಾನ ಪಡೆಯಲು ಸಾರ್ವಜನಿಕರ ಸಹಕಾರ ಕೇಳಲು ಪಾಲಿಕೆ ಮುಂದಾಗಿದೆ.

ಇದನ್ನೂ ಓದಿ:ಕ್ರೀಡಾಂಗಣದ ಕನಸು ಕಂಡಿದ್ದ ಜನರಿಗೆ ಕಸ ವಿಲೇವಾರಿ ಘಟಕ ಶಾಕ್.. ಮೈಸೂರು ಪಾಲಿಕೆ ವಿರುದ್ಧ ಸ್ಥಳೀಯರ ಆಕ್ರೋಶ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್