AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?

ದೇವರಾಜ ಅರಸು ರಸ್ತೆಯ ಕೆ ಆರ್ ವೃತ್ತದ ಬಾಟ ಶೋರೂಂ ಬಳಿಯಿಂದ ಎತ್ತಿಕೊಂಡು ಹೋಗಿದ್ದ ಬೆಕ್ಕನ್ನು ಯುವಕ ಮರಳಿ ಅದರ ಮಾಲೀಕರಿಗೆ ಒಪ್ಪಿಸಿದ್ದಾನೆ.

TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
ನಾಪತ್ತೆಯಾಗಿದ್ದ ಬೆಕ್ಕು
TV9 Web
| Edited By: |

Updated on: Aug 06, 2022 | 11:38 AM

Share

ಮೈಸೂರು: ದೇವರಾಜ ಅರಸು ರಸ್ತೆಯ ಬಾಟ ಶೋರೂಂನಲ್ಲಿದ್ದ ಬೆಕ್ಕನ್ನು ಎತ್ತಿಕೊಂಡು ಹೋಗಿದ್ದ ಯುವಕ ವಾಪಸ್ ಮಾಲೀಕರಿಗೆ ಒಪ್ಪಿಸಿದ್ದಾನೆ. ಬೆಕ್ಕು ನೋಡಲು ಚೆನ್ನಾಗಿ ಕಂಡ ಹಿನ್ನೆಲೆ ಅದನ್ನು ಸಾಕಲೆಂದು ಮಂಡ್ಯದ ಯುವಕ ಜಿತೇಂದ್ರ ತನ್ನ ಮನೆಗೆ ಕೊಂಡೊಯ್ದಿದ್ದಾನೆ. ಬಳಿಕ ಟಿವಿ9 ಹಾಗೂ ಸಾಮಾಜಿಕ ಜಾಲತಾಣದಲ್ಲಿ ಬೆಕ್ಕಿನ ನಾಪತ್ತೆ ಸುದ್ದಿ ಓದಿ ಸತ್ಯಾಂಶ ತಿಳಿದು ಮಾಲೀಕರಿಗೆ ವಾಪಸ್ ತಂದು ಮಾಲೀಕರಿಗೆ ಒಪ್ಪಿಸಿದ್ದಾನೆ. ಆ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಜಾಹೀರಾತು ಫಲಪ್ರದವಾಗಿದ್ದು, ಬೆಕ್ಕು ಮರಳಿ ಮಾಲೀಕರ ಕೈ ಸೇರಿಕೊಂಡಿತು. ಅಲ್ಲದೆ, ಜಾಹೀರಾತಿನಲ್ಲಿ ಘೋಷಣೆ ಮಾಡಿದಂತೆ ಯುವಕನಿಗೆ ಮಾಲೀಕರು 5ಸಾವಿರ ರೂಪಾಯಿ ಬಹುಮಾನ ನೀಡಲು ಮುಂದಾದಾಗ ಜಿತೇಂದ್ರ ನಿರಾಕರಿಸಿದ್ದಾನೆ.

ಎರಡು ದಿನಗಳ ಹಿಂದೆ ದೇವರಾಜ ಅರಸು ರಸ್ತೆಯ ಕೆ ಆರ್ ವೃತ್ತದ ಬಾಟ ಶೋರೂಂನಿಂದ ಸೃಷ್ಟಿ ಎಂಬ ಹೆಸರಿನ ಬೆಕ್ಕು ನಾಪತ್ತೆಯಾಗಿತ್ತು. ಅದರಂತೆ ಮಾಲೀಕ ನಾಚಪ್ಪ ಅವರು ಸಾಮಾಜಿಕ ಜಾಲತಾಣದಲ್ಲಿ ಬೆಕ್ಕಿನ ಫೋಟೋಗಳ ಸಹಿತ ಅಪ್ಲೋಡ್ ಮಾಡಿ ಬೆಕ್ಕು ಕಾಣೆಯಾಗಿದೆ, ಹುಡುಕಿಕೊಟ್ಟವರಿಗೆ 5ಸಾವಿರ ಬಹುಮಾನ ನೀಡುವುದಾಗಿ ಬರೆದುಕೊಂಡಿದ್ದರು. ಅದಾದ ನಂತರ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದಾಗ ಯುವಕನೊಬ್ಬ ಬೆಕ್ಕನ್ನು ಎತ್ತಿಕೊಂಡು ಹೋಗುವ ದೃಶ್ಯಾವಳಿ ಸೆರೆಯಾಗಿದೆ. ಸದ್ಯ ಬೆಕ್ಕು ಮಾಲೀನ ಕೈಸೇರಿದೆ.

ಸಿಸಿಕ್ಯಾಮಾರದಲ್ಲಿ ಕಂಡಿದ್ದೇನು?

ಬೆಕ್ಕು ಕಳವಾದ ಸ್ಥಳದ ಸುತ್ತಮುತ್ತಲಿನ ಸಿಸಿ ಕ್ಯಾಮಾರಗಳನ್ನು ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಹೊರಭಾಗದಲ್ಲಿ ಬೆಕ್ಕೊಂದು ನಿಂತಿರುತ್ತದೆ. ಇದನ್ನು ನೋಡಿದ ಯುವಕನೊಬ್ಬ ಹತ್ತಿರಕ್ಕೆ ಬಂದು ತನ್ನ ಬಳಿ ಕರೆಯುತ್ತಾನೆ. ನಂತರ ಅದನ್ನು ಹಿಡಿದುಕೊಂಡು ಸಿಸಿ ಕ್ಯಾಮಾರ ಇದ್ದ ಕಡೆಯ ದಾರಿಯಿಂದ ಹೋಗುವ ದೃಶ್ಯಾವಳಿ ಸೆರೆಯಾಗಿದೆ.

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?