AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?

ದೇವರಾಜ ಅರಸು ರಸ್ತೆಯ ಕೆ ಆರ್ ವೃತ್ತದ ಬಾಟ ಶೋರೂಂ ಬಳಿಯಿಂದ ಎತ್ತಿಕೊಂಡು ಹೋಗಿದ್ದ ಬೆಕ್ಕನ್ನು ಯುವಕ ಮರಳಿ ಅದರ ಮಾಲೀಕರಿಗೆ ಒಪ್ಪಿಸಿದ್ದಾನೆ.

TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
ನಾಪತ್ತೆಯಾಗಿದ್ದ ಬೆಕ್ಕು
TV9 Web
| Updated By: Rakesh Nayak Manchi|

Updated on: Aug 06, 2022 | 11:38 AM

Share

ಮೈಸೂರು: ದೇವರಾಜ ಅರಸು ರಸ್ತೆಯ ಬಾಟ ಶೋರೂಂನಲ್ಲಿದ್ದ ಬೆಕ್ಕನ್ನು ಎತ್ತಿಕೊಂಡು ಹೋಗಿದ್ದ ಯುವಕ ವಾಪಸ್ ಮಾಲೀಕರಿಗೆ ಒಪ್ಪಿಸಿದ್ದಾನೆ. ಬೆಕ್ಕು ನೋಡಲು ಚೆನ್ನಾಗಿ ಕಂಡ ಹಿನ್ನೆಲೆ ಅದನ್ನು ಸಾಕಲೆಂದು ಮಂಡ್ಯದ ಯುವಕ ಜಿತೇಂದ್ರ ತನ್ನ ಮನೆಗೆ ಕೊಂಡೊಯ್ದಿದ್ದಾನೆ. ಬಳಿಕ ಟಿವಿ9 ಹಾಗೂ ಸಾಮಾಜಿಕ ಜಾಲತಾಣದಲ್ಲಿ ಬೆಕ್ಕಿನ ನಾಪತ್ತೆ ಸುದ್ದಿ ಓದಿ ಸತ್ಯಾಂಶ ತಿಳಿದು ಮಾಲೀಕರಿಗೆ ವಾಪಸ್ ತಂದು ಮಾಲೀಕರಿಗೆ ಒಪ್ಪಿಸಿದ್ದಾನೆ. ಆ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಜಾಹೀರಾತು ಫಲಪ್ರದವಾಗಿದ್ದು, ಬೆಕ್ಕು ಮರಳಿ ಮಾಲೀಕರ ಕೈ ಸೇರಿಕೊಂಡಿತು. ಅಲ್ಲದೆ, ಜಾಹೀರಾತಿನಲ್ಲಿ ಘೋಷಣೆ ಮಾಡಿದಂತೆ ಯುವಕನಿಗೆ ಮಾಲೀಕರು 5ಸಾವಿರ ರೂಪಾಯಿ ಬಹುಮಾನ ನೀಡಲು ಮುಂದಾದಾಗ ಜಿತೇಂದ್ರ ನಿರಾಕರಿಸಿದ್ದಾನೆ.

ಎರಡು ದಿನಗಳ ಹಿಂದೆ ದೇವರಾಜ ಅರಸು ರಸ್ತೆಯ ಕೆ ಆರ್ ವೃತ್ತದ ಬಾಟ ಶೋರೂಂನಿಂದ ಸೃಷ್ಟಿ ಎಂಬ ಹೆಸರಿನ ಬೆಕ್ಕು ನಾಪತ್ತೆಯಾಗಿತ್ತು. ಅದರಂತೆ ಮಾಲೀಕ ನಾಚಪ್ಪ ಅವರು ಸಾಮಾಜಿಕ ಜಾಲತಾಣದಲ್ಲಿ ಬೆಕ್ಕಿನ ಫೋಟೋಗಳ ಸಹಿತ ಅಪ್ಲೋಡ್ ಮಾಡಿ ಬೆಕ್ಕು ಕಾಣೆಯಾಗಿದೆ, ಹುಡುಕಿಕೊಟ್ಟವರಿಗೆ 5ಸಾವಿರ ಬಹುಮಾನ ನೀಡುವುದಾಗಿ ಬರೆದುಕೊಂಡಿದ್ದರು. ಅದಾದ ನಂತರ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದಾಗ ಯುವಕನೊಬ್ಬ ಬೆಕ್ಕನ್ನು ಎತ್ತಿಕೊಂಡು ಹೋಗುವ ದೃಶ್ಯಾವಳಿ ಸೆರೆಯಾಗಿದೆ. ಸದ್ಯ ಬೆಕ್ಕು ಮಾಲೀನ ಕೈಸೇರಿದೆ.

ಸಿಸಿಕ್ಯಾಮಾರದಲ್ಲಿ ಕಂಡಿದ್ದೇನು?

ಬೆಕ್ಕು ಕಳವಾದ ಸ್ಥಳದ ಸುತ್ತಮುತ್ತಲಿನ ಸಿಸಿ ಕ್ಯಾಮಾರಗಳನ್ನು ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಹೊರಭಾಗದಲ್ಲಿ ಬೆಕ್ಕೊಂದು ನಿಂತಿರುತ್ತದೆ. ಇದನ್ನು ನೋಡಿದ ಯುವಕನೊಬ್ಬ ಹತ್ತಿರಕ್ಕೆ ಬಂದು ತನ್ನ ಬಳಿ ಕರೆಯುತ್ತಾನೆ. ನಂತರ ಅದನ್ನು ಹಿಡಿದುಕೊಂಡು ಸಿಸಿ ಕ್ಯಾಮಾರ ಇದ್ದ ಕಡೆಯ ದಾರಿಯಿಂದ ಹೋಗುವ ದೃಶ್ಯಾವಳಿ ಸೆರೆಯಾಗಿದೆ.

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ