AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?

ದೇವರಾಜ ಅರಸು ರಸ್ತೆಯ ಕೆ ಆರ್ ವೃತ್ತದ ಬಾಟ ಶೋರೂಂ ಬಳಿಯಿಂದ ಎತ್ತಿಕೊಂಡು ಹೋಗಿದ್ದ ಬೆಕ್ಕನ್ನು ಯುವಕ ಮರಳಿ ಅದರ ಮಾಲೀಕರಿಗೆ ಒಪ್ಪಿಸಿದ್ದಾನೆ.

TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
ನಾಪತ್ತೆಯಾಗಿದ್ದ ಬೆಕ್ಕು
TV9 Web
| Edited By: Rakesh Nayak Manchi|

Updated on: Aug 06, 2022 | 11:38 AM

Share

ಮೈಸೂರು: ದೇವರಾಜ ಅರಸು ರಸ್ತೆಯ ಬಾಟ ಶೋರೂಂನಲ್ಲಿದ್ದ ಬೆಕ್ಕನ್ನು ಎತ್ತಿಕೊಂಡು ಹೋಗಿದ್ದ ಯುವಕ ವಾಪಸ್ ಮಾಲೀಕರಿಗೆ ಒಪ್ಪಿಸಿದ್ದಾನೆ. ಬೆಕ್ಕು ನೋಡಲು ಚೆನ್ನಾಗಿ ಕಂಡ ಹಿನ್ನೆಲೆ ಅದನ್ನು ಸಾಕಲೆಂದು ಮಂಡ್ಯದ ಯುವಕ ಜಿತೇಂದ್ರ ತನ್ನ ಮನೆಗೆ ಕೊಂಡೊಯ್ದಿದ್ದಾನೆ. ಬಳಿಕ ಟಿವಿ9 ಹಾಗೂ ಸಾಮಾಜಿಕ ಜಾಲತಾಣದಲ್ಲಿ ಬೆಕ್ಕಿನ ನಾಪತ್ತೆ ಸುದ್ದಿ ಓದಿ ಸತ್ಯಾಂಶ ತಿಳಿದು ಮಾಲೀಕರಿಗೆ ವಾಪಸ್ ತಂದು ಮಾಲೀಕರಿಗೆ ಒಪ್ಪಿಸಿದ್ದಾನೆ. ಆ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಜಾಹೀರಾತು ಫಲಪ್ರದವಾಗಿದ್ದು, ಬೆಕ್ಕು ಮರಳಿ ಮಾಲೀಕರ ಕೈ ಸೇರಿಕೊಂಡಿತು. ಅಲ್ಲದೆ, ಜಾಹೀರಾತಿನಲ್ಲಿ ಘೋಷಣೆ ಮಾಡಿದಂತೆ ಯುವಕನಿಗೆ ಮಾಲೀಕರು 5ಸಾವಿರ ರೂಪಾಯಿ ಬಹುಮಾನ ನೀಡಲು ಮುಂದಾದಾಗ ಜಿತೇಂದ್ರ ನಿರಾಕರಿಸಿದ್ದಾನೆ.

ಎರಡು ದಿನಗಳ ಹಿಂದೆ ದೇವರಾಜ ಅರಸು ರಸ್ತೆಯ ಕೆ ಆರ್ ವೃತ್ತದ ಬಾಟ ಶೋರೂಂನಿಂದ ಸೃಷ್ಟಿ ಎಂಬ ಹೆಸರಿನ ಬೆಕ್ಕು ನಾಪತ್ತೆಯಾಗಿತ್ತು. ಅದರಂತೆ ಮಾಲೀಕ ನಾಚಪ್ಪ ಅವರು ಸಾಮಾಜಿಕ ಜಾಲತಾಣದಲ್ಲಿ ಬೆಕ್ಕಿನ ಫೋಟೋಗಳ ಸಹಿತ ಅಪ್ಲೋಡ್ ಮಾಡಿ ಬೆಕ್ಕು ಕಾಣೆಯಾಗಿದೆ, ಹುಡುಕಿಕೊಟ್ಟವರಿಗೆ 5ಸಾವಿರ ಬಹುಮಾನ ನೀಡುವುದಾಗಿ ಬರೆದುಕೊಂಡಿದ್ದರು. ಅದಾದ ನಂತರ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದಾಗ ಯುವಕನೊಬ್ಬ ಬೆಕ್ಕನ್ನು ಎತ್ತಿಕೊಂಡು ಹೋಗುವ ದೃಶ್ಯಾವಳಿ ಸೆರೆಯಾಗಿದೆ. ಸದ್ಯ ಬೆಕ್ಕು ಮಾಲೀನ ಕೈಸೇರಿದೆ.

ಸಿಸಿಕ್ಯಾಮಾರದಲ್ಲಿ ಕಂಡಿದ್ದೇನು?

ಬೆಕ್ಕು ಕಳವಾದ ಸ್ಥಳದ ಸುತ್ತಮುತ್ತಲಿನ ಸಿಸಿ ಕ್ಯಾಮಾರಗಳನ್ನು ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಹೊರಭಾಗದಲ್ಲಿ ಬೆಕ್ಕೊಂದು ನಿಂತಿರುತ್ತದೆ. ಇದನ್ನು ನೋಡಿದ ಯುವಕನೊಬ್ಬ ಹತ್ತಿರಕ್ಕೆ ಬಂದು ತನ್ನ ಬಳಿ ಕರೆಯುತ್ತಾನೆ. ನಂತರ ಅದನ್ನು ಹಿಡಿದುಕೊಂಡು ಸಿಸಿ ಕ್ಯಾಮಾರ ಇದ್ದ ಕಡೆಯ ದಾರಿಯಿಂದ ಹೋಗುವ ದೃಶ್ಯಾವಳಿ ಸೆರೆಯಾಗಿದೆ.

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ