Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಟೆಸ್ಟ್ ಮಾಡಲು ಬಂದ ಸಿಬ್ಬಂದಿಗೆ ಮೈಸೂರು ಮಹಿಳೆ ಆವಾಜ್

ವೈದ್ಯರ ನಡಿಗೆ ಹಳ್ಳಿಯ ಕಡೆಗೆ ಕಾರ್ಯಕ್ರಮ ಹಿನ್ನೆಲೆ ಗ್ರಾಮಸ್ಥರ ಆರೋಗ್ಯ ತಪಾಸಣೆಗೆಂದು ಅಧಿಕಾರಿಗಳು ತೆರಳಿದ್ದರು. ಈ ವೇಳೆ ಅಧಿಕಾರಿಗಳೊಂದಿಗೆ ಆದಿವಾಸಿ ಮಹಿಳೆ ವಾಗ್ವಾದಕ್ಕಿಳಿದಿದ್ದರು. ಬೀರತಮ್ಮನಹಳ್ಳಿ ಆದಿವಾಸಿ ಹಾಡಿಯಲ್ಲಿ ಒಟ್ಟು 50ಕ್ಕೂ ಹೆಚ್ಚು ಕುಟುಂಬಗಳಿವೆ. 250ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಹಾಡಿ ಇದಾಗಿದೆ.

ಕೊವಿಡ್ ಟೆಸ್ಟ್ ಮಾಡಲು ಬಂದ ಸಿಬ್ಬಂದಿಗೆ ಮೈಸೂರು ಮಹಿಳೆ ಆವಾಜ್
ವೈದ್ಯರೊಂದಿಗೆ ವಾಗ್ವಾದಕ್ಕೆ ಇಳಿದ ಮಹಿಳೆ
Follow us
TV9 Web
| Updated By: sandhya thejappa

Updated on:Jun 02, 2021 | 11:50 AM

ಮೈಸೂರು: ಆರೋಗ್ಯ ತಪಾಸಣೆ ಮಾಡಲು ಬಂದ ಸಿಬ್ಬಂದಿಗೆ ಮಹಿಳೆಯೊಬ್ಬರು ಧಮ್ಕಿ ಹಾಕಿರುವ ಘಟನೆ ನಡೆದಿದೆ. ಜಿಲ್ಲೆಯ ಹುಣಸೂರು ತಾಲೂಕಿನ ಬೀರತಮ್ಮನಹಳ್ಳಿ ಗಿರಿಜನ ಹಾಡಿಯ ಮಹಿಳೆ, ನಾವು ರಾಗಿ ಮುದ್ದೆ ತಿನ್ನೋರು. ನಮಗೆ ರೋಗ ಬರಲ್ಲ. ನೀವು ಟೆಸ್ಟ್ ಮಾಡಿ ರೋಗ ಕಂಡುಹಿಡಿಯುವುದು ಬೇಡ. ನಮಗೆ ರೋಗ ಬಂದರೆ ನಾವೇ ವಾಸಿ ಮಾಡಿಕೊಳ್ಳುತ್ತೇವೆ. ನೀವ್ಯಾರೂ ನಮ್ಮ ಹಾಡಿಗೆ ಕಾಲು ಇಡೋದು ಬೇಡ. ಇಲ್ಲಿಂದ ಮೊದಲು ವಾಪಸ್ ಹೋಗಿ ಎಂದು ಆವಾಜ್ ಹಾಕಿದ್ದಾರೆ.

ವೈದ್ಯರ ನಡಿಗೆ ಹಳ್ಳಿಯ ಕಡೆಗೆ ಕಾರ್ಯಕ್ರಮ ಹಿನ್ನೆಲೆ ಗ್ರಾಮಸ್ಥರ ಆರೋಗ್ಯ ತಪಾಸಣೆಗೆಂದು ಅಧಿಕಾರಿಗಳು ತೆರಳಿದ್ದರು. ಈ ವೇಳೆ ಅಧಿಕಾರಿಗಳೊಂದಿಗೆ ಆದಿವಾಸಿ ಮಹಿಳೆ ವಾಗ್ವಾದಕ್ಕಿಳಿದಿದ್ದರು. ಬೀರತಮ್ಮನಹಳ್ಳಿ ಆದಿವಾಸಿ ಹಾಡಿಯಲ್ಲಿ ಒಟ್ಟು 50ಕ್ಕೂ ಹೆಚ್ಚು ಕುಟುಂಬಗಳಿವೆ. 250ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಹಾಡಿ ಇದಾಗಿದೆ. ಈ ಪೈಕಿ ಕೇವಲ 7 ಮಂದಿ ತಪಾಸಣೆಗೆ ಒಳಗಾಗಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತದ ದಿಟ್ಟ ನಿರ್ಧಾರ ಉಡುಪಿ: ಮಹಾಮಾರಿ ಕೊರೊನಾ ಸೋಂಕನ್ನು ತಡೆಗಟ್ಟಲು ಜಿಲ್ಲಾಡಳಿತ ಮತ್ತೊಂದು ದಿಟ್ಟ ನಿರ್ಧಾರ ಮಾಡಿದೆ. ಕೊರೊನಾ ಪಾಸಿಟಿವ್ ಕೇಸ್ 50ಕ್ಕೂ ಹೆಚ್ಚಿರುವ ಗ್ರಾಮಗಳನ್ನು ಸಂಪೂರ್ಣ ಲಾಕ್​ಡೌಮ್​ ಮಾಡಲು ನಿರ್ಧರಿಸಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 165 ಗ್ರಾಮಗಳಲ್ಲಿ 33 ಗ್ರಾಮಗಳು ಸಂಪೂರ್ಣ ಲಾಕ್​ಡೌನ್​ ಆಗಲಿದೆ. ಮೆಡಿಕಲ್ ಶಾಪ್, ಕೃಷಿ ಚಟುವಟಿಕೆಗಳಿಗೆ ಮಾತ್ರ ಅವಕಾಶವಿದ್ದು, ಅನುಮತಿ ಪಡೆದ ಮದುವೆಗೆ ಅವಕಾಶ ನೀಡಲಾಗಿದೆ. ಗ್ರಾಮದ ಗಡಿಯಲ್ಲಿ ಬ್ಯಾರೀಗೇಟ್ ಅಳವಡಿಸಿ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತದೆ. 33 ಗ್ರಾಮಗಳಲ್ಲಿ 50ಕ್ಕೂ ಹೆಚ್ಚು ಪಾಸಿಟಿವ್ ಕೇಸ್ ಪತ್ತೆಯಾಗಿವೆ. ಈಗಾಗಲೇ ಜಿಲ್ಲೆಯಲ್ಲಿ 19 ಶೇಕಡಾ ಪಾಸಿಟಿವಿಟಿ ರೇಟ್ ಕಂಡುಬಂದಿದ್ದು, ಶೇ.5 ಕ್ಕೆ ಪಾಸಿಟಿವಿಟಿ ರೇಟ್ ಇಳಿಸುವ ಉದ್ದೇಶವನ್ನು ಜಿಲ್ಲಾಡಳಿತ ಹೊಂದಿದೆ.

ಇದನ್ನೂ ಓದಿ

ಚಿಕ್ಕಬಳ್ಳಾಪುರ: ಆಸ್ಪತ್ರೆಗಳಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗದೆ 8 ತಿಂಗಳ ಗರ್ಭಿಣಿ ಸಾವು

ಆನಂದಯ್ಯರ ಆಯುರ್ವೇದಿಕ್ ಔಷಧ ನೀಡಲು ಕೋರ್ಟ್ ಅಸ್ತು, ನಾಳೆಯಿಂದ ಕೊವಿಡ್‌ಗೆ ಔಷಧ ವಿತರಣೆ ಶುರು

(Mysore women gherao at Covid health workers who came for door step checkup video goes viral)

Published On - 11:28 am, Wed, 2 June 21

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್