AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಟೆಸ್ಟ್ ಮಾಡಲು ಬಂದ ಸಿಬ್ಬಂದಿಗೆ ಮೈಸೂರು ಮಹಿಳೆ ಆವಾಜ್

ವೈದ್ಯರ ನಡಿಗೆ ಹಳ್ಳಿಯ ಕಡೆಗೆ ಕಾರ್ಯಕ್ರಮ ಹಿನ್ನೆಲೆ ಗ್ರಾಮಸ್ಥರ ಆರೋಗ್ಯ ತಪಾಸಣೆಗೆಂದು ಅಧಿಕಾರಿಗಳು ತೆರಳಿದ್ದರು. ಈ ವೇಳೆ ಅಧಿಕಾರಿಗಳೊಂದಿಗೆ ಆದಿವಾಸಿ ಮಹಿಳೆ ವಾಗ್ವಾದಕ್ಕಿಳಿದಿದ್ದರು. ಬೀರತಮ್ಮನಹಳ್ಳಿ ಆದಿವಾಸಿ ಹಾಡಿಯಲ್ಲಿ ಒಟ್ಟು 50ಕ್ಕೂ ಹೆಚ್ಚು ಕುಟುಂಬಗಳಿವೆ. 250ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಹಾಡಿ ಇದಾಗಿದೆ.

ಕೊವಿಡ್ ಟೆಸ್ಟ್ ಮಾಡಲು ಬಂದ ಸಿಬ್ಬಂದಿಗೆ ಮೈಸೂರು ಮಹಿಳೆ ಆವಾಜ್
ವೈದ್ಯರೊಂದಿಗೆ ವಾಗ್ವಾದಕ್ಕೆ ಇಳಿದ ಮಹಿಳೆ
TV9 Web
| Edited By: |

Updated on:Jun 02, 2021 | 11:50 AM

Share

ಮೈಸೂರು: ಆರೋಗ್ಯ ತಪಾಸಣೆ ಮಾಡಲು ಬಂದ ಸಿಬ್ಬಂದಿಗೆ ಮಹಿಳೆಯೊಬ್ಬರು ಧಮ್ಕಿ ಹಾಕಿರುವ ಘಟನೆ ನಡೆದಿದೆ. ಜಿಲ್ಲೆಯ ಹುಣಸೂರು ತಾಲೂಕಿನ ಬೀರತಮ್ಮನಹಳ್ಳಿ ಗಿರಿಜನ ಹಾಡಿಯ ಮಹಿಳೆ, ನಾವು ರಾಗಿ ಮುದ್ದೆ ತಿನ್ನೋರು. ನಮಗೆ ರೋಗ ಬರಲ್ಲ. ನೀವು ಟೆಸ್ಟ್ ಮಾಡಿ ರೋಗ ಕಂಡುಹಿಡಿಯುವುದು ಬೇಡ. ನಮಗೆ ರೋಗ ಬಂದರೆ ನಾವೇ ವಾಸಿ ಮಾಡಿಕೊಳ್ಳುತ್ತೇವೆ. ನೀವ್ಯಾರೂ ನಮ್ಮ ಹಾಡಿಗೆ ಕಾಲು ಇಡೋದು ಬೇಡ. ಇಲ್ಲಿಂದ ಮೊದಲು ವಾಪಸ್ ಹೋಗಿ ಎಂದು ಆವಾಜ್ ಹಾಕಿದ್ದಾರೆ.

ವೈದ್ಯರ ನಡಿಗೆ ಹಳ್ಳಿಯ ಕಡೆಗೆ ಕಾರ್ಯಕ್ರಮ ಹಿನ್ನೆಲೆ ಗ್ರಾಮಸ್ಥರ ಆರೋಗ್ಯ ತಪಾಸಣೆಗೆಂದು ಅಧಿಕಾರಿಗಳು ತೆರಳಿದ್ದರು. ಈ ವೇಳೆ ಅಧಿಕಾರಿಗಳೊಂದಿಗೆ ಆದಿವಾಸಿ ಮಹಿಳೆ ವಾಗ್ವಾದಕ್ಕಿಳಿದಿದ್ದರು. ಬೀರತಮ್ಮನಹಳ್ಳಿ ಆದಿವಾಸಿ ಹಾಡಿಯಲ್ಲಿ ಒಟ್ಟು 50ಕ್ಕೂ ಹೆಚ್ಚು ಕುಟುಂಬಗಳಿವೆ. 250ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಹಾಡಿ ಇದಾಗಿದೆ. ಈ ಪೈಕಿ ಕೇವಲ 7 ಮಂದಿ ತಪಾಸಣೆಗೆ ಒಳಗಾಗಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತದ ದಿಟ್ಟ ನಿರ್ಧಾರ ಉಡುಪಿ: ಮಹಾಮಾರಿ ಕೊರೊನಾ ಸೋಂಕನ್ನು ತಡೆಗಟ್ಟಲು ಜಿಲ್ಲಾಡಳಿತ ಮತ್ತೊಂದು ದಿಟ್ಟ ನಿರ್ಧಾರ ಮಾಡಿದೆ. ಕೊರೊನಾ ಪಾಸಿಟಿವ್ ಕೇಸ್ 50ಕ್ಕೂ ಹೆಚ್ಚಿರುವ ಗ್ರಾಮಗಳನ್ನು ಸಂಪೂರ್ಣ ಲಾಕ್​ಡೌಮ್​ ಮಾಡಲು ನಿರ್ಧರಿಸಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 165 ಗ್ರಾಮಗಳಲ್ಲಿ 33 ಗ್ರಾಮಗಳು ಸಂಪೂರ್ಣ ಲಾಕ್​ಡೌನ್​ ಆಗಲಿದೆ. ಮೆಡಿಕಲ್ ಶಾಪ್, ಕೃಷಿ ಚಟುವಟಿಕೆಗಳಿಗೆ ಮಾತ್ರ ಅವಕಾಶವಿದ್ದು, ಅನುಮತಿ ಪಡೆದ ಮದುವೆಗೆ ಅವಕಾಶ ನೀಡಲಾಗಿದೆ. ಗ್ರಾಮದ ಗಡಿಯಲ್ಲಿ ಬ್ಯಾರೀಗೇಟ್ ಅಳವಡಿಸಿ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತದೆ. 33 ಗ್ರಾಮಗಳಲ್ಲಿ 50ಕ್ಕೂ ಹೆಚ್ಚು ಪಾಸಿಟಿವ್ ಕೇಸ್ ಪತ್ತೆಯಾಗಿವೆ. ಈಗಾಗಲೇ ಜಿಲ್ಲೆಯಲ್ಲಿ 19 ಶೇಕಡಾ ಪಾಸಿಟಿವಿಟಿ ರೇಟ್ ಕಂಡುಬಂದಿದ್ದು, ಶೇ.5 ಕ್ಕೆ ಪಾಸಿಟಿವಿಟಿ ರೇಟ್ ಇಳಿಸುವ ಉದ್ದೇಶವನ್ನು ಜಿಲ್ಲಾಡಳಿತ ಹೊಂದಿದೆ.

ಇದನ್ನೂ ಓದಿ

ಚಿಕ್ಕಬಳ್ಳಾಪುರ: ಆಸ್ಪತ್ರೆಗಳಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗದೆ 8 ತಿಂಗಳ ಗರ್ಭಿಣಿ ಸಾವು

ಆನಂದಯ್ಯರ ಆಯುರ್ವೇದಿಕ್ ಔಷಧ ನೀಡಲು ಕೋರ್ಟ್ ಅಸ್ತು, ನಾಳೆಯಿಂದ ಕೊವಿಡ್‌ಗೆ ಔಷಧ ವಿತರಣೆ ಶುರು

(Mysore women gherao at Covid health workers who came for door step checkup video goes viral)

Published On - 11:28 am, Wed, 2 June 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ