AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬಿನಿ ಜಲಾಶಯದಿಂದ ನದಿಗೆ 1000 ಕ್ಯೂಸೆಕ್ ನೀರು ಬಿಡುಗಡೆ: ಎಲ್ಲಿಗೆ ಹರಿಯುತ್ತಿದ್ದಾಳೆ ಕಪಿಲೆ?

ರಾಜ್ಯದೆಲ್ಲೆಡೆ ಸದ್ಯ ಬರ ಆವರಿಸಿದೆ. ಜನರು ಕುಡಿಯುವ ನೀರಿಗಾಗಿ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದಿಂದ ಕಪಿಲೆ ನದಿಗೆ 1000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಆ ಮೂಲಕ ಕಪಿಲೆ ತಮಿಳುನಾಡು ಇಲ್ಲಾ ಬೆಂಗಳೂರಿಗೆ ಎಲ್ಲಿಗೆ ಹರಿಯುತ್ತಿದ್ದಾಳೆ ಎಂಬುವ ಪ್ರಶ್ನೆ ಮೂಡಿದೆ.

ಕಬಿನಿ ಜಲಾಶಯದಿಂದ ನದಿಗೆ 1000 ಕ್ಯೂಸೆಕ್ ನೀರು ಬಿಡುಗಡೆ: ಎಲ್ಲಿಗೆ ಹರಿಯುತ್ತಿದ್ದಾಳೆ ಕಪಿಲೆ?
ಕಬಿನಿ ಜಲಾಶಯ
ದಿಲೀಪ್​, ಚೌಡಹಳ್ಳಿ
| Edited By: |

Updated on: Mar 23, 2024 | 3:11 PM

Share

ಮೈಸೂರು, ಮಾರ್ಚ್​​ 23: ರಾಜ್ಯದೆಲ್ಲೆಡೆ ಸದ್ಯ ಬರ ಆವರಿಸಿದೆ. ಜನರು ಕುಡಿಯುವ ನೀರಿಗಾಗಿ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ  ಜಲಾಶಯ (Kabini Reservoir) ದಿಂದ ಕಪಿಲೆ ನದಿಗೆ 1000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಆ ಮೂಲಕ ಕಪಿಲೆ ತಮಿಳುನಾಡು ಅಥವಾ ಬೆಂಗಳೂರು ಎಲ್ಲಿಗೆ ಹರಿಯುತ್ತಿದ್ದಾಳೆ ಎನ್ನುವ ಪ್ರಶ್ನೆ ಮೂಡಿದೆ. ಸದ್ಯ ಜಲಾಶಯದಿಂದ ಪ್ರತಿನಿತ್ಯ 1 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿಸಲಾಗುತ್ತಿದೆ. 84 ಅಡಿ ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 66 ಅಡಿಗೆ ನೀರಿನ ಮಟ್ಟ ಕುಸಿದಿದೆ. ಹೀಗಾಗಿ ನೀರಿನ ಪ್ರಮಾಣ ಇದೀಗ ಸಾಕಷ್ಟು ಅನುಮಾನ ಮೂಡಿಸಿದೆ.

ಬೆಂಗಳೂರು, ಮೈಸೂರು ಮತ್ತು ಚಾಮರಾಜನಗರಕ್ಕೆ 500 ಕ್ಯೂಸೆಕ್​ ಕುಡಿಯುವ ನೀರಿಗೆ ಸಾಕಾಗುತ್ತದೆ. ಆದರೂ ಹೆಚ್ಚುವರಿಯಾಗಿ ಎಲ್ಲಿಗೆ ನೀರು ಹರಿಯುತ್ತಿದೆ ಎಂಬುವುದು ಸದ್ಯದ ಪ್ರಶ್ನೆ ಆಗಿದೆ.

ಇದನ್ನೂ ಓದಿ: ವರ್ಷಕ್ಕೆ ಎರಡು ಬಾರಿ ತುಂಬುವ ರಾಜ್ಯದ ಏಕೈಕ ಜಲಾಶಯ ಕಬಿನಿಯಲ್ಲಿ ದಿನೇ ದಿನೇ ನೀರಿನ ಮಟ್ಟ ಕುಸಿತ

ರಾಜ್ಯದಲ್ಲೆ ಮೊದಲು ತುಂಬುವ ಜಲಾಶಯವೆಂದರೆ ಅದು ಕಬಿನಿ. ವರ್ಷದಲ್ಲಿ ಎರಡು ಬಾರಿ ತುಂಬುವ ಜಲಾಶಯ ಎಂಬ ಹೆಗ್ಗಳಿಕೆ‌ ಕೂಡ ಇದೆ. ಆದರೆ ಈ ಜಲಾಶಯ ಬರಿದಾಗುವ ಲಕ್ಷಣ ಕಾಣುತ್ತಿದೆ. ರಾಜ್ಯದಲ್ಲಿ ಹಾಗೂ ನೆರೆ ರಾಜ್ಯ ಕೇರಳದ ವೈನಾಡು ಭಾಗದಲ್ಲಿ ಮಳೆ ಕೊರತೆ ಹಿನ್ನೆಲೆ ಇದೀಗಾ ಜಲಾಶಯಕ್ಕೆ ಒಳ ಹರಿವಿನ‌ ಪ್ರಮಾಣ ಸಂಪೂರ್ಣ ಕುಸಿದಿದೆ.

ಜೊತೆಗೆ ತಮಿಳುನಾಡಿಗೂ ನೀರು ಹರಿಸಿದ ಕಾರಣ ಜಲಾಶಯದ ನೀರಿನ ಮಟ್ಟ ಕುಸಿಯುತ್ತಿದೆ. ಇದರ ನಡುವೆ ಬೆಂಗಳೂರು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಕುಡಿಯುವ ನೀರಿಗೆ ಪ್ರತಿದಿನ 500 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ. ಈ‌ ಕಾರಣದಿಂದ ಸದ್ಯ ಜಲಾಶಯಕ್ಕೆ‌ ಒಳಹರಿವು ಇಲ್ಲದೆ, ದಿನೇ ದಿನೇ ಜಲಾಶಯ ಬರಿದಾಗುತ್ತಿದೆ.

ಇದನ್ನೂ ಓದಿ: ತಾಪಮಾನದಲ್ಲಿ ಗಣನೀಯ ಹೆಚ್ಚಳ; ಮೈಸೂರು ಮೃಗಾಲಯದಲ್ಲಿ ಪ್ರಾಣಿಗಳಿಗೆ ವಿಶೇಷ ವ್ಯವಸ್ಥೆ

ಒಂದೆರಡು ಅಡಿ ನೀರು ಕಡಿಮೆಯಾದರೆ ಬಲದಂಡೆ ನಾಲೆಯಿಂದ ನೀರು ಹರಿಸಲು ಸಾಧ್ಯವಾಗದ ಪರಿಸ್ಥಿತಿ ಇದೆ. ಒಂದು ವೇಳೆ ಜಾನುವಾರುಗಳಿಗೆ ನೀರು ಬೇಕು ನಾಲೆಗಳಿಗೆ ನೀರು ಹರಿಸಿ ಅಂದರೆ ನಾಲೆಗಳಿಗೆ ನೀರು ಹರಿಸಲು ಸಾಧ್ಯವಾಗದ ಸ್ಥಿತಿ ಎದುರಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್