AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬಿನಿ ಜಲಾಶಯದಿಂದ ನದಿಗೆ 1000 ಕ್ಯೂಸೆಕ್ ನೀರು ಬಿಡುಗಡೆ: ಎಲ್ಲಿಗೆ ಹರಿಯುತ್ತಿದ್ದಾಳೆ ಕಪಿಲೆ?

ರಾಜ್ಯದೆಲ್ಲೆಡೆ ಸದ್ಯ ಬರ ಆವರಿಸಿದೆ. ಜನರು ಕುಡಿಯುವ ನೀರಿಗಾಗಿ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದಿಂದ ಕಪಿಲೆ ನದಿಗೆ 1000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಆ ಮೂಲಕ ಕಪಿಲೆ ತಮಿಳುನಾಡು ಇಲ್ಲಾ ಬೆಂಗಳೂರಿಗೆ ಎಲ್ಲಿಗೆ ಹರಿಯುತ್ತಿದ್ದಾಳೆ ಎಂಬುವ ಪ್ರಶ್ನೆ ಮೂಡಿದೆ.

ಕಬಿನಿ ಜಲಾಶಯದಿಂದ ನದಿಗೆ 1000 ಕ್ಯೂಸೆಕ್ ನೀರು ಬಿಡುಗಡೆ: ಎಲ್ಲಿಗೆ ಹರಿಯುತ್ತಿದ್ದಾಳೆ ಕಪಿಲೆ?
ಕಬಿನಿ ಜಲಾಶಯ
ದಿಲೀಪ್​, ಚೌಡಹಳ್ಳಿ
| Edited By: |

Updated on: Mar 23, 2024 | 3:11 PM

Share

ಮೈಸೂರು, ಮಾರ್ಚ್​​ 23: ರಾಜ್ಯದೆಲ್ಲೆಡೆ ಸದ್ಯ ಬರ ಆವರಿಸಿದೆ. ಜನರು ಕುಡಿಯುವ ನೀರಿಗಾಗಿ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ  ಜಲಾಶಯ (Kabini Reservoir) ದಿಂದ ಕಪಿಲೆ ನದಿಗೆ 1000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಆ ಮೂಲಕ ಕಪಿಲೆ ತಮಿಳುನಾಡು ಅಥವಾ ಬೆಂಗಳೂರು ಎಲ್ಲಿಗೆ ಹರಿಯುತ್ತಿದ್ದಾಳೆ ಎನ್ನುವ ಪ್ರಶ್ನೆ ಮೂಡಿದೆ. ಸದ್ಯ ಜಲಾಶಯದಿಂದ ಪ್ರತಿನಿತ್ಯ 1 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿಸಲಾಗುತ್ತಿದೆ. 84 ಅಡಿ ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 66 ಅಡಿಗೆ ನೀರಿನ ಮಟ್ಟ ಕುಸಿದಿದೆ. ಹೀಗಾಗಿ ನೀರಿನ ಪ್ರಮಾಣ ಇದೀಗ ಸಾಕಷ್ಟು ಅನುಮಾನ ಮೂಡಿಸಿದೆ.

ಬೆಂಗಳೂರು, ಮೈಸೂರು ಮತ್ತು ಚಾಮರಾಜನಗರಕ್ಕೆ 500 ಕ್ಯೂಸೆಕ್​ ಕುಡಿಯುವ ನೀರಿಗೆ ಸಾಕಾಗುತ್ತದೆ. ಆದರೂ ಹೆಚ್ಚುವರಿಯಾಗಿ ಎಲ್ಲಿಗೆ ನೀರು ಹರಿಯುತ್ತಿದೆ ಎಂಬುವುದು ಸದ್ಯದ ಪ್ರಶ್ನೆ ಆಗಿದೆ.

ಇದನ್ನೂ ಓದಿ: ವರ್ಷಕ್ಕೆ ಎರಡು ಬಾರಿ ತುಂಬುವ ರಾಜ್ಯದ ಏಕೈಕ ಜಲಾಶಯ ಕಬಿನಿಯಲ್ಲಿ ದಿನೇ ದಿನೇ ನೀರಿನ ಮಟ್ಟ ಕುಸಿತ

ರಾಜ್ಯದಲ್ಲೆ ಮೊದಲು ತುಂಬುವ ಜಲಾಶಯವೆಂದರೆ ಅದು ಕಬಿನಿ. ವರ್ಷದಲ್ಲಿ ಎರಡು ಬಾರಿ ತುಂಬುವ ಜಲಾಶಯ ಎಂಬ ಹೆಗ್ಗಳಿಕೆ‌ ಕೂಡ ಇದೆ. ಆದರೆ ಈ ಜಲಾಶಯ ಬರಿದಾಗುವ ಲಕ್ಷಣ ಕಾಣುತ್ತಿದೆ. ರಾಜ್ಯದಲ್ಲಿ ಹಾಗೂ ನೆರೆ ರಾಜ್ಯ ಕೇರಳದ ವೈನಾಡು ಭಾಗದಲ್ಲಿ ಮಳೆ ಕೊರತೆ ಹಿನ್ನೆಲೆ ಇದೀಗಾ ಜಲಾಶಯಕ್ಕೆ ಒಳ ಹರಿವಿನ‌ ಪ್ರಮಾಣ ಸಂಪೂರ್ಣ ಕುಸಿದಿದೆ.

ಜೊತೆಗೆ ತಮಿಳುನಾಡಿಗೂ ನೀರು ಹರಿಸಿದ ಕಾರಣ ಜಲಾಶಯದ ನೀರಿನ ಮಟ್ಟ ಕುಸಿಯುತ್ತಿದೆ. ಇದರ ನಡುವೆ ಬೆಂಗಳೂರು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಕುಡಿಯುವ ನೀರಿಗೆ ಪ್ರತಿದಿನ 500 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ. ಈ‌ ಕಾರಣದಿಂದ ಸದ್ಯ ಜಲಾಶಯಕ್ಕೆ‌ ಒಳಹರಿವು ಇಲ್ಲದೆ, ದಿನೇ ದಿನೇ ಜಲಾಶಯ ಬರಿದಾಗುತ್ತಿದೆ.

ಇದನ್ನೂ ಓದಿ: ತಾಪಮಾನದಲ್ಲಿ ಗಣನೀಯ ಹೆಚ್ಚಳ; ಮೈಸೂರು ಮೃಗಾಲಯದಲ್ಲಿ ಪ್ರಾಣಿಗಳಿಗೆ ವಿಶೇಷ ವ್ಯವಸ್ಥೆ

ಒಂದೆರಡು ಅಡಿ ನೀರು ಕಡಿಮೆಯಾದರೆ ಬಲದಂಡೆ ನಾಲೆಯಿಂದ ನೀರು ಹರಿಸಲು ಸಾಧ್ಯವಾಗದ ಪರಿಸ್ಥಿತಿ ಇದೆ. ಒಂದು ವೇಳೆ ಜಾನುವಾರುಗಳಿಗೆ ನೀರು ಬೇಕು ನಾಲೆಗಳಿಗೆ ನೀರು ಹರಿಸಿ ಅಂದರೆ ನಾಲೆಗಳಿಗೆ ನೀರು ಹರಿಸಲು ಸಾಧ್ಯವಾಗದ ಸ್ಥಿತಿ ಎದುರಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ