AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಅವಧೂತ ದತ್ತಪೀಠದಿಂದ ಭಾರತೀಯ ಸೇನೆಗೆ ₹ 25 ಲಕ್ಷ ದೇಣಿಗೆ, ಚೆಕ್ ಸ್ವೀಕರಿಸಿದ ಸಂಸದ ಯದುವೀರ್

ಮೈಸೂರಿನ ಅವಧೂತ ದತ್ತಪೀಠದಿಂದ ಭಾರತೀಯ ಸೇನೆಗೆ ₹ 25 ಲಕ್ಷ ದೇಣಿಗೆ, ಚೆಕ್ ಸ್ವೀಕರಿಸಿದ ಸಂಸದ ಯದುವೀರ್

ಅರುಣ್​ ಕುಮಾರ್​ ಬೆಳ್ಳಿ
|

Updated on: May 26, 2025 | 10:14 AM

Share

ಭಾರತೀಯ ಸೇನಾನಿಧಿಗೆ ಅವಧೂತ ದತ್ತಪೀಠ ದೇಣಿಗೆಯನ್ನು ನೀಡುತ್ತಿರೋದು ಇದು ಮೊದಲ ಸಲವೇನಲ್ಲ, ಕಾರ್ಯಕ್ರಮದ ನಿರೂಪಕರು ಹೇಳುವಂತೆ ಇದು ದತ್ತಪೀಠದ ಪರಂಪರೆಯಾಗಿ ಬೆಳೆದಿದೆ. ಚೆಕ್ ಸ್ವೀಕರಿಸಿ ಮಾತಾಡಿದ ಸಂಸದ ಯದುವೀರ್, ದತ್ತ ವಿಜಯಾನಂದ ಶ್ರೀಗಳಿಗೆ ಧನ್ಯವಾದ ಮತ್ತು ಕೃತಜ್ಞತೆಯನ್ನು ಸಲ್ಲಿಸಿ ಚೆಕ್ ಅನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸುವುದಾಗಿ ಹೇಳಿದರು.

ಮೈಸೂರು, ಮೇ 26: ಭಾರತೀಯ ಸೇನೆಯ (Indian armed forces) ಸೇವೆಯನ್ನು ಎಷ್ಟು ಕೊಂಡಾಡಿದರೂ ಸಾಲದು. ಸೇನೆಯಿಂದಾಗೇ ನಾವೆಲ್ಲ ಮನೆಗಳಲ್ಲಿ ನೆಮ್ಮದಿಯಿಂದ ನಿದ್ರೆ ಮಾಡೋದು. ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಶ್ರೀ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಆಶ್ರಮ-ಅವಧೂತ ದತ್ತಪೀಠ ಇದನ್ನು ಬಹಳ ಚೆನ್ನಾಗಿ ಅರ್ಥಮಾಡಿಕೊಂಡಿದೆ. ನಿನ್ನೆ ದತ್ತ ವೆಂಕಟೇಶ್ವರ ಕ್ಷೇತ್ರದ 26ನೇ ಬ್ರಹ್ಮೋತ್ಸವ ಆಚರಿಸಿದ ಬಳಿಕ ದತ್ತ ವಿಜಯಾನಂದ ಶ್ರೀ ಅವರು ಭಾರತೀಯ ಸೇನಾನಿಧಿಗೆ ರೂ. 25 ಲಕ್ಷ ದೇಣಿಗೆಯನ್ನು ನೀಡಿದರು. ಸರ್ಕಾರದ ಪರವಾಗಿ ಮೈಸೂರಿನ ಸಂಸದ ಯದುವೀರ್ ಕೃಷ್ಣದತ್ ಒಡೆಯರ್ ಚೆಕ್ ಅನ್ನು ಸ್ವೀಕರಿಸಿದರು.

ಇದನ್ನೂ ಓದಿ:  ಮೈಸೂರು ಸ್ಯಾಂಡಲ್ ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ 

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More