AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Express: ಮೈಸೂರು ಚೆನ್ನೈ ಮಧ್ಯೆ ಇಂದಿನಿಂದ ಮತ್ತೊಂದು ವಂದೇ ಭಾರತ್ ಎಕ್ಸ್​ಪ್ರೆಸ್

ಮಾರ್ಚ್ 14 ರಿಂದ ಏಪ್ರಿಲ್ 4 ರ ನಡುವಣ ಅವಧಿಯಲ್ಲಿ ಬೆಂಗಳೂರಿನಿಂದ ಸಂಚರಿಸುತ್ತಿದ್ದ, ಮಾರ್ಚ್​ 12ರಂದು ಪ್ರಧಾನಿ ಮೋದಿ ಚಾಲನೆ ನೀಡಿದ್ದ ಮೈಸೂರು ಚೆನ್ನೈ ನಡವಣ ಎರಡನೇ ವಂದೇ ಭಾರತ್ ರೈಲು ಇಂದಿನಿಂದ ಪೂರ್ಣ ಪ್ರಮಾಣದ ಸಂಚಾರ ನಡೆಸಲಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಮೈಸೂರಿನಿಂದ ಬೆಳಿಗ್ಗೆ 6 ಗಂಟೆಗೆ ಹೊರಟು ಮತ್ತು ಮಧ್ಯಾಹ್ನ 12.20 ಕ್ಕೆ ಎಂಜಿಆರ್ ಚೆನ್ನೈ ತಲುಪಲಿದೆ.

Vande Bharat Express: ಮೈಸೂರು ಚೆನ್ನೈ ಮಧ್ಯೆ ಇಂದಿನಿಂದ ಮತ್ತೊಂದು ವಂದೇ ಭಾರತ್ ಎಕ್ಸ್​ಪ್ರೆಸ್
ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲು (ಸಂಗ್ರಹ ಚಿತ್ರ)
ಗಣಪತಿ ಶರ್ಮಾ
|

Updated on: Apr 05, 2024 | 6:58 AM

Share

ಬೆಂಗಳೂರು, ಏಪ್ರಿಲ್ 5: ಬೆಂಗಳೂರಿನ ಮೂಲಕ ಮೈಸೂರು ಮತ್ತು ಚೆನ್ನೈಗೆ ಸಂಪರ್ಕ ಕಲ್ಪಿಸುವ ಎರಡನೇ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲು ಶುಕ್ರವಾರ ಸಂಚಾರ ಆರಂಭಿಸಿದೆ. ಮೈಸೂರಿನಲ್ಲಿ ಪ್ರೀಮಿಯಂ ರೈಲನ್ನು ನಿರ್ವಹಿಸಲು ಅಗತ್ಯ ಸೌಲಭ್ಯಗಳನ್ನು ಸಿದ್ಧ ಮಾಡಿಕೊಳ್ಳಲಾಗಿದೆ ಎಂದು ನೈಋತ್ಯ ರೈಲ್ವೆ (SWR) ಗುರವಾರವೇ ತಿಳಿಸಿತ್ತು. ಈ ರೈಲಿಗೆ ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿ ಆನ್​ಲೈನ್ ಮೂಲಕ ಚಾಲನೆ ನೀಡಿದ್ದರು. ನಂತರ ರೈಲು ಭಾಗಶಃ ಸಂಚಾರ ಆರಂಭಿಸಿತ್ತು.

ವಂದೇ ಭಾರತ್ ರೈಲುಗಳನ್ನು ನಿರ್ವಹಿಸಲು ಮೈಸೂರಿನಲ್ಲಿ ಸೌಲಭ್ಯದ ಕೊರತೆಯಿಂದಾಗಿ ಮಾರ್ಚ್ 14 ರಿಂದ ಏಪ್ರಿಲ್ 4 ರ ನಡುವಣ ಅವಧಿಯಲ್ಲಿ ರೈಲು ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್​ಎಂವಿಟಿ) ಬೆಂಗಳೂರು ಬೈಯಪ್ಪನಹಳ್ಳಿ ಮತ್ತು ಚೆನ್ನೈ ಸೆಂಟ್ರಲ್ ನಡುವೆ ಸಂಚರಿಸುತ್ತಿತ್ತು. ಈ ರೈಲು ಬುಧವಾರ ಹೊರತುಪಡಿಸಿ ಪ್ರತಿ ದಿನ ಸಂಚರಿಸುತ್ತದೆ.

ಏಪ್ರಿಲ್ 5 ಮತ್ತು ಜುಲೈ 29 ರ ನಡುವೆ, ಬುಧವಾರದಂದು ಈ ರೈಲು ಸಂಚರಿಸುವುದಿಲ್ಲ. ಜುಲೈ 30 ರಿಂದ, ಇದು ಗುರುವಾರದಂದು ಕಾರ್ಯನಿರ್ವಹಿಸುವುದಿಲ್ಲ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ಇದು ಮೈಸೂರು ಮತ್ತು ಚೆನ್ನೈ ನಡುವಿನ ಎರಡನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಿದೆ. ಮೊದಲ (ರೈಲು ಸಂಖ್ಯೆ 20607/20608) ರೈಲು 2022 ರ ನವೆಂಬರ್​ ತಿಂಗಳಿನಿಂದ ಸಂಚರಿಸುತ್ತಿದೆ. ಇದು ಚೆನ್ನೈ ಸೆಂಟ್ರಲ್‌ನಿಂದ ಬೆಳಿಗ್ಗೆ 5.50 ಕ್ಕೆ ಹೊರಟು ಮಧ್ಯಾಹ್ನ 12.20 ಕ್ಕೆ ಮೈಸೂರು ತಲುಪುತ್ತದೆ. ಮೈಸೂರಿನಿಂದ ಮಧ್ಯಾಹ್ನ 1.05 ಕ್ಕೆ ಹೊರಟು ರಾತ್ರಿ 7.20 ಕ್ಕೆ ಚೆನ್ನೈ ಸೆಂಟ್ರಲ್ ತಲುಪುತ್ತದೆ.

ಇದನ್ನೂ ಓದಿ: ಮೈಸೂರು ಚೆನ್ನೈ ಮಧ್ಯೆ ಮತ್ತೊಂದು ವಂದೇ ಭಾರತ್ ಎಕ್ಸ್​ಪ್ರೆಸ್, ವೇಳಾಪಟ್ಟಿ ಇಲ್ಲಿದೆ

ರೈಲ್ವೇ ಸಚಿವಾಲಯದ ಅಧಿಸೂಚನೆಯ ಪ್ರಕಾರ, ರೈಲು ಸಂಖ್ಯೆ 20663 ಮೈಸೂರು-ಎಂಜಿಆರ್ ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ಮೈಸೂರಿನಿಂದ ಬೆಳಿಗ್ಗೆ 6 ಗಂಟೆಗೆ ಹೊರಟು ಮತ್ತು ಮಧ್ಯಾಹ್ನ 12.20 ಕ್ಕೆ ಎಂಜಿಆರ್ ಚೆನ್ನೈ ತಲುಪಲಿದೆ. ಚೆನ್ನೈ ಸೆಂಟ್ರಲ್‌ನಿಂದ ಸಂಜೆ 5 ಗಂಟೆಗೆ ಹೊರಟು ರಾತ್ರಿ 11.20 ಕ್ಕೆ ಮೈಸೂರು ತಲುಪುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?