ಹೊಸ ಜಿಲ್ಲೆ ಮಾಡ್ತೇನೆ ಎಂದ ವಿಶ್ವನಾಥ್ರಿಂದ ನೀತಿಸಂಹಿತೆ ಉಲ್ಲಂಘನೆ: ಕಾಂಗ್ರೆಸ್
ಮೈಸೂರು: ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಹುಣಸೂರನ್ನು ಜಿಲ್ಲೆ ಮಾಡುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಇದು ನೀತಿಸಂಹಿತೆಯ ಉಲ್ಲಂಘನೆಯಾಗಿದೆ. ಈ ವಿಚಾರವಾಗಿ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಮುಖಂಡರು ಎಸಿ ಡಾ.ವೆಂಕಟರಾಜುಗೆ ದೂರು ನೀಡಿದ್ದಾರೆ. ವಿಜಯನಗರದಲ್ಲಿ ಸಾವಿರಾರು ಸೀರೆ ಪತ್ತೆ ವಿಚಾರ ಸಂಬಂಧ ದಾಖಲೆಗಳ ಸಮೇತ ಕಾಂಗ್ರೆಸ್ ನಿಯೋಗ ದೂರು ನೀಡಿದೆ. ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದೂರು ಸಲ್ಲಿಕೆಯಾಗಿದೆ. ಬಿಜೆಪಿಯಿಂದ ಹುಣಸೂರು ಉಪ ಚುನಾವಣೆಗಾಗಿ ಹಂಚಲು ತಂದಿದ್ದ […]

ಮೈಸೂರು: ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಹುಣಸೂರನ್ನು ಜಿಲ್ಲೆ ಮಾಡುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಇದು ನೀತಿಸಂಹಿತೆಯ ಉಲ್ಲಂಘನೆಯಾಗಿದೆ. ಈ ವಿಚಾರವಾಗಿ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಮುಖಂಡರು ಎಸಿ ಡಾ.ವೆಂಕಟರಾಜುಗೆ ದೂರು ನೀಡಿದ್ದಾರೆ.
ವಿಜಯನಗರದಲ್ಲಿ ಸಾವಿರಾರು ಸೀರೆ ಪತ್ತೆ ವಿಚಾರ ಸಂಬಂಧ ದಾಖಲೆಗಳ ಸಮೇತ ಕಾಂಗ್ರೆಸ್ ನಿಯೋಗ ದೂರು ನೀಡಿದೆ. ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದೂರು ಸಲ್ಲಿಕೆಯಾಗಿದೆ. ಬಿಜೆಪಿಯಿಂದ ಹುಣಸೂರು ಉಪ ಚುನಾವಣೆಗಾಗಿ ಹಂಚಲು ತಂದಿದ್ದ 30,000 ಸೀರೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸೀರೆ ಚೀಲಗಳ ಮೇಲೆ ಯೋಗೇಶ್ವರ್ ಹಾಗೂ ಬಿಜೆಪಿ ನಾಯಕರ ಫೋಟೊಗಳಿವೆ. ಆದರೆ ವಿಜಯನಗರದ ಗಂಗಣ್ಣ ಎಂಬುವವರ ಮೇಲೆ ಎಫ್ ಐಆರ್ ದಾಖಲಾಗಿದೆ. ಅಧಿಕಾರಿಗಳು ಸಹ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಚುನಾವಣಾ ಆಯೋಗ ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸುವ ಬಗ್ಗೆ ಅನುಮಾನವಿದೆ ಎಂದು ಕಾಂಗ್ರೆಸ್ ಮುಖಂಡರು ಅತಂಕ ವ್ಯಕ್ತಪಡಿಸಿದ್ದಾರೆ.
Published On - 5:30 pm, Sat, 16 November 19