AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ ಮಹೋತ್ಸವದ ಕುರಿತು ಇಂದು ಮಹತ್ವದ ಸಭೆ

ನಾಡಹಬ್ಬ ಮೈಸೂರು ದಸರಾ 2023 ಕುರಿತು ಇಂದು (ಜುಲೈ 31) ಮಹತ್ವದ ನಡೆಯಲಿದ್ದು, ಸಭೆಯಲ್ಲಿ ಈ ಬಾರಿ ದಸರಾ ಹೇಗೆಲ್ಲ ಆಚರಿಸಬೇಕು? ಯಾರನ್ನು ಉದ್ಘಾಟನೆಗೆ ಆಹ್ವಾನಿಸಬೇಕೆಂಬ ಚರ್ಚೆಗಳು ನಡೆಯಲಿವೆ.

ಮೈಸೂರು ದಸರಾ ಮಹೋತ್ಸವದ ಕುರಿತು ಇಂದು ಮಹತ್ವದ ಸಭೆ
ಮೈಸೂರು ದಸರಾ ಸಂಗ್ರಹ ಚಿತ್ರ
ರಾಮ್​, ಮೈಸೂರು
| Edited By: |

Updated on:Aug 04, 2023 | 10:45 AM

Share

ಬೆಂಗಳೂರು/ಮೈಸೂರು, (ಜುಲೈ 31): ವಿಶ್ವ ವಿಖ್ಯಾತ ಮೈಸೂರು ದಸರಾ 2023 (Mysuru Dasara 2023) ಕುರಿತು ಇಂದು (ಜುಲೈ 31) ಹೈ ಪವರ್ ಕಮಿಟಿ ಸಭೆ ನಡೆಯಲಿದೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಇಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಮೈಸೂರು ಮಂಡ್ಯ ಚಾಮರಾಜನಗರ ಭಾಗದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಕರ್ನಾಟಕದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಈ ಬಾರಿಯೂ ಸಹ ಅದ್ದೂರಿಯಾಗಿ ದಸರಾ ಆಚರಣೆಗೆ ಚಿಂತನೆಗಳು ನಡೆದಿದ್ದು, ಇಂದಿನ ಸಭೆಯಲ್ಲಿ ಅಂತಿಮ ನಿರ್ಧಾರವಾಗಲಿದೆ.

ಇದನ್ನೂ ಓದಿ: Mysuru Dasara 2023: ದಸರಾ; ಆಗಸ್ಟ್ ಅಂತ್ಯದಲ್ಲಿ ಮೈಸೂರಿಗೆ ಗಜಪಯಣ

ಸಿದ್ದರಾಮಯ್ಯ ಎರಡನೇ ಭಾರಿ ಮುಖ್ಯಮಂತ್ರಿಯಾದ ಬಳಿಕ ಮೊದಲ ದಸರಾ ಆಗಿದ್ದು, ಇದರೊಂದಿಗೆ ಸಿದ್ದರಾಮಯ್ಯ ಸಿಎಂ ಆಗಿ 6ನೇ ಬಾರಿಗೆ ಮೈಸೂರು ದಸರಾದಲ್ಲಿ ಪಾಲ್ಗೊಳ್ಳಲಿದ್ದಾರೆ. ಇನ್ನು ಈ ಬಾರಿ ಮೈಸೂರು ದಸರಾವನ್ನು ಉದ್ಘಾಟನೆಗೆ ಯಾರನ್ನು ಆಹ್ವಾನಿಸುತ್ತಾರೆ ಎನ್ನುವ ಕುತೂಹಲ ಮೂಡಿಸಿದೆ.

ಹಿಂದಿನ ವರ್ಷದಂತೆ ಅಭಿಮನ್ಯುವೇ ಚಿನ್ನದ ಅಂಬಾರಿ ಹೊತ್ತು ಸಾಗುವ ನಿರೀಕ್ಷೆ ಇದೆ. ಅರ್ಜುನ ಈ ಬಾರಿಯ ದಸರಾ ಮೆರವಣಿಗೆ ಅವಕಾಶ ವಂಚಿತನಾಗುವ ಸಾಧ್ಯತೆ ಇದೆ. ಗೋಪಾಲಸ್ವಾಮಿ, ಗಜೇಂದ್ರ ಕೂಡ ಕೂಡ ಈ ಬಾರಿಯ ದಸರಾದಲ್ಲಿ ಪಾಲ್ಗೊಳ್ಳುವುದು ಅನುಮಾನ ಎನ್ನಲಾಗಿದೆ.

ಈ ಬಾರಿಯ ದಸರಾ ಅಕ್ಟೋಬರ್ 15ರಿಂದ ಆರಂಭವಾಗಲಿದ್ದು, ಅಕ್ಟೋಬರ್‌ 23ರಂದು ಆಯುಧ ಪೂಜೆ ಮತ್ತು ಅಕ್ಟೋಬರ್‌ 24ರಂದು ವಿಜಯದಶಮಿದಂದ ಜಂಬೂ ಸವಾರಿ ನಡೆಯಲಿದೆ. ಇದಕ್ಕಾಗಿ ಎಲ್ಲಾ ಸಕಲ ಸಿದ್ಧತೆಗಳು ಆರಂಭವಾಗಿವೆ. ಇನ್ನು ದಸರಾ ಆನೆಗಳ ಆರೋಗ್ಯದ ಮೇಲೆ ವಿಶೇಷ ಕಾಳಜಿವಹಿಸುವ ಉದ್ದೇಶದಿಂದ ಅರಣ್ಯ ಇಲಾಖೆ ಈ ಬಾರಿ ಹೆಣ್ಣಾನೆಗಳಿಗೆ ‘ಪ್ರೆಗ್ನೆನ್ಸಿ ಟೆಸ್ಟ್’ ಸಹ ನಡೆಸಿದೆ.

ಅಕ್ಟೋಬರ್ 24ರಂದು ವಿಜಯ ದಶಮಿಯಂದು ನಡೆಯಲಿರುವ ಜಂಬು ಸವಾರಿಯಲ್ಲಿ ಪಾಲ್ಗೊಳ್ಳಲು ಈಗಾಗಲೇ ಆನೆಗಳ ಪಟ್ಟಿ ಸಿದ್ಧಪಡಿಸಲಾಗಿದ್ದು, ಜಂಬೂ ಸವಾರಿಗಾಗಿ (Jamboo Savari) ಆನೆಗಳ ಮೊದಲ ತಂಡ ಆಗಸ್ಟ್​​ನಲ್ಲಿ ಮೈಸೂರಿಗೆ ಆಗಮಿಸಲಿವೆ ಎನ್ನಲಾಗಿದೆ. ಹಿಂದಿನ ವರ್ಷದಂತೆ ಅಭಿಮನ್ಯುವೇ ಚಿನ್ನದ ಅಂಬಾರಿ ಹೊತ್ತು ಸಾಗುವ ಸಾಧ್ಯತೆಗಳಿವೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:31 am, Mon, 31 July 23

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್