AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾದಲ್ಲಿ ಏರ್​ ಶೋ; ರಕ್ಷಣಾ ಸಚಿವ ರಾಜನಾಥ್​ ಸಿಂಗ್​ಗೆ ಸಿಎಂ ಸಿದ್ದರಾಮಯ್ಯ ಬರೆದ ಪತ್ರದಲ್ಲೇನಿದೆ?

Mysuru Dasara 2023; ಮೈಸೂರಿನಲ್ಲಿ ನಾಡಹಬ್ಬ ದಸರಾ ಸಂದರ್ಭದಲ್ಲಿ ಈ ಹಿಂದೆ ತಿಳಿಸಿದಂತೆ ‘ಏರ್‌ಶೋ' ಯೋಜಿಸಲು ಸಂಬಂಧಪಟ್ಟವರಿಗೆ ನಿರ್ದೇಶಿಸಲು ಈ ಮೂಲಕ ವಿನಂತಿಸಲಾಗಿದೆ ಎಂದು ಸಿಂಗ್ ಅವರಿಗೆ ಬರೆದ ಪತ್ರದಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರು ದಸರಾದಲ್ಲಿ ಏರ್​ ಶೋ; ರಕ್ಷಣಾ ಸಚಿವ ರಾಜನಾಥ್​ ಸಿಂಗ್​ಗೆ ಸಿಎಂ ಸಿದ್ದರಾಮಯ್ಯ ಬರೆದ ಪತ್ರದಲ್ಲೇನಿದೆ?
ಸಿಎಂ ಸಿದ್ದರಾಮಯ್ಯ & ರಾಜನಾಥ್​ ಸಿಂಗ್
Prajwal D'Souza
| Updated By: Digi Tech Desk|

Updated on:Aug 04, 2023 | 10:45 AM

Share

ನವದೆಹಲಿ: ಮುಂಬರುವ ಮೈಸೂರು ದಸರಾ (Mysuru Dasara) ಮಹೋತ್ಸವದ ಸಂದರ್ಭದಲ್ಲಿ ಏರ್​ ಶೋ (Air Show) ಪ್ರದರ್ಶನವನ್ನು ಆಯೋಜಿಸುವಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರಿಗೆ ಗುರುವಾರ ಮನವಿ ಮಾಡಿದ್ದಾರೆ. ಸಿಂಗ್ ಅವರನ್ನು ದೆಹಲಿಯಲ್ಲಿ ಗುರುವಾರ ಭೇಟಿಯಾದ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಈ ವರ್ಷ ಅಕ್ಟೋಬರ್ 15 ರಿಂದ 24 ರವರೆಗೆ ಮೈಸೂರು ದಸರಾ ನಡೆಯಲಿದೆ.

ಮೈಸೂರಿನಲ್ಲಿ ನಾಡಹಬ್ಬ ದಸರಾ ಸಂದರ್ಭದಲ್ಲಿ ಈ ಹಿಂದೆ ತಿಳಿಸಿದಂತೆ ‘ಏರ್‌ಶೋ’ ಯೋಜಿಸಲು ಸಂಬಂಧಪಟ್ಟವರಿಗೆ ನಿರ್ದೇಶಿಸಲು ಈ ಮೂಲಕ ವಿನಂತಿಸಲಾಗಿದೆ ಎಂದು ಸಿಂಗ್ ಅವರಿಗೆ ಬರೆದ ಪತ್ರದಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮುಂದುವರಿದು, ನಿಮ್ಮ ಸಮಯೋಚಿತ ಮಧ್ಯಪ್ರವೇಶದಿಂದ ದಸರಾ ಹಬ್ಬಕ್ಕೆ ಇನ್ನಷ್ಟು ರಂಗು ಮೂಡಲಿದೆ ಎಂದು ಉಲ್ಲೇಖಿಸಿದ್ದಾರೆ.

ಕೇಂದ್ರ ಸಚಿವರ ಜತೆಗಿನ ಭೇಟಿಯ ಛಾಯಾಚಿತ್ರಗಳನ್ನೂ ಮುಖ್ಯಮಂತ್ರಿ ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದಾರೆ.

ಮೈಸೂರು ದಸರಾ ಆಚರಣೆಯ ಉನ್ನತಾಧಿಕಾರ ಸಮಿತಿಯ ಸಭೆಯಲ್ಲಿ 2023ರ ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಬೇಕೆಂಬ ಜನರ ಆಶಯವನ್ನು ಸಮಿತಿಯ ಮುಂದೆ ಇಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

2017 ಮತ್ತು 2019 ರಲ್ಲಿ, ಮೈಸೂರಿನ ಟಾರ್ಚ್ ಲೈಟ್ ಪರೇಡ್ ಮೈದಾನದಲ್ಲಿ ಭಾರತೀಯ ವಾಯುಪಡೆಯು ಪ್ರದರ್ಶಿಸಿದ ವಿಶೇಷ ಏರ್ ಶೋ ಪ್ರವಾಸಿಗರು ಮತ್ತು ಕನ್ನಡಿಗರ ಗಮನವನ್ನು ಸೆಳೆದಿತ್ತು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಮೈಸೂರು ದಸರಾ ಮೆರವಣಿಗೆಯಲ್ಲಿ ಅನುರಣಿಸಲಿದೆ ಕಾಂಗ್ರೆಸ್ ಗ್ಯಾರಂಟಿ ಸ್ತಬ್ಧಚಿತ್ರ! ಏರ್​ ಶೋ ನಡೆಸಲು ಚಿಂತನೆ; ಸಿಎಂ ಸಿದ್ದರಾಮಯ್ಯ

ಈ ವರ್ಷ ಮೈಸೂರು ದಸರಾವನ್ನು ಅರ್ಥಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜಿಸಲಾಗುವುದು ಎಂದು ಸಿದ್ದರಾಮಯ್ಯ ಸೋಮವಾರ ದಸರಾ ಸಮಿತಿಯ ಸಭೆಯ ನಂತರ ಹೇಳಿದ್ದರು. ದಸರಾ ಸಾಂಪ್ರದಾಯಿಕ ಹಬ್ಬವಾಗಿದ್ದು, ಅದು ಜನರ ಹಬ್ಬವಾಗಬೇಕು ಎಂದು ಸಿದ್ದರಾಮಯ್ಯ ಹೇಳಿದ್ದರು.

ಜಂಬೂ ಸವಾರಿ, ಆನೆಗಳ ಮೆರವಣಿಗೆ, ಟೇಬಲ್ಲುಗಳು, ಬೆಳಕಿನ ಅಲಂಕಾರಗಳು, ಟಾರ್ಚ್​​ಲೈಟ್ ಮೆರವಣಿಗೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಮೈಸೂರು ದಸರಾದ ಕೆಲವು ಪ್ರಮುಖ ಆಕರ್ಷಣೆಗಳಾಗಿವೆ. ಇದು ಪ್ರಪಂಚದ ವಿವಿಧ ಭಾಗಗಳಿಂದ ಪ್ರವಾಸಿಗರನ್ನು ಆಕರ್ಷಿಸುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:57 pm, Thu, 3 August 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!