AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahisha Dasara: ಮಹಿಷ ದಸರಾದಿಂದ ಮೈಸೂರು ಹೆಸರೇ ಬದಲಾವಣೆ..!

ಮಹಿಷ ದಸರಾ ಆಚರಣಾ ಸಮಿತಿಯಿಂದ ಆಹ್ವಾನ‌ ಪತ್ರಿಕೆ ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಮೈಸೂರು ಬದಲಿಗೆ ಮಹಿಷೂರು ಎಂದು ಮತ್ತು ಚಾಮುಂಡಿಬೆಟ್ಟಕ್ಕೆ ಮಹಿಷ ಬೆಟ್ಟ ಎಂದು ಹೆಸರಿಸಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಲಾಗಿದೆ. ಆ ಮೂಲಕ ಮಹಿಷ ದಸರಾ ಹೆಸರಿನಲ್ಲಿ ಈಗಾಗಲೇ ಸಂಘರ್ಷ ಶುರುವಾಗಿದೆ.

Mahisha Dasara: ಮಹಿಷ ದಸರಾದಿಂದ ಮೈಸೂರು ಹೆಸರೇ ಬದಲಾವಣೆ..!
ಮಹಿಷ ದಸರಾದಿಂದ ಮೈಸೂರು ಹೆಸರೇ ಬದಲಾವಣೆ..!
ದಿಲೀಪ್​, ಚೌಡಹಳ್ಳಿ
| Edited By: |

Updated on: Sep 26, 2024 | 10:38 PM

Share

ಮೈಸೂರು, ಸೆಪ್ಟೆಂಬರ್ 26: ವಿಶ್ವವಿಖ್ಯಾತ ದಸರಾ (Dasara) ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದೆ. ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಗೆ ತಾಲೀಮು ಚುರುಕುಗೊಳಿಸಲಾಗಿದೆ. ಈ ನಡುವೆ ಮಹಿಷ ದಸರಾ ಆಚರಣಾ ಸಮಿತಿಯಿಂದ ಮೈಸೂರು ಹೆಸರೇ ಬದಲಾವಣೆ ಮಾಡಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದೆ.

ಹೌದು. ಮಹಿಷ ದಸರಾ ಆಚರಣಾ ಸಮಿತಿಯಿಂದ ಆಹ್ವಾನ‌ ಪತ್ರಿಕೆ ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಮೈಸೂರು ಬದಲಿಗೆ ಮಹಿಷೂರು ಎಂದು ಮತ್ತು ಚಾಮುಂಡಿಬೆಟ್ಟಕ್ಕೆ ಮಹಿಷ ಬೆಟ್ಟ ಎಂದು ಹೆಸರಿಸಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಲಾಗಿದೆ.

ಸೆಪ್ಟೆಂಬರ್​ 29ರಂದು ಮಹಿಷ ದಸರಾ ಆಚರಣೆಗೆ ನಿರ್ಧಾರ ಮಾಡಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಮಹಿಷಾಸುರನಿಗೆ ಪುಷ್ಪಾರ್ಚನೆ ನಡೆಯಲಿದ್ದು, ನಂತರ ಪುರಭವನದ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ: ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?

ಈಗಾಗಲೇ ಮಹಿಷ ದಸರಾ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಚಾಮುಂಡಿ ಬೆಟ್ಟ ಚಲೋ ಮಾಡುವುದಾಗಿ ಪ್ರತಾಪ್ ಸಿಂಹ ಹೇಳಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮಹಿಷ ದಸರಾ ಹೆಸರಿನಲ್ಲಿ ಈಗಾಗಲೇ ಸಂಘರ್ಷ ಶುರುವಾಗಿದೆ.

ಪ್ರತಿ ವರ್ಷದಂತೆ ಈ ಬಾರಿ ಕೂಡ ಮಹಿಷ ದಸರಾ ವಿವಾದ ತಲೆ ಎತ್ತಿದೆ. ಈ ಬಾರಿಯು ಅದ್ದೂರಿಯಾಗಿ ಮಹಿಷ ದಸರಾವನ್ನು ಆಚರಣೆ ನಡೆಸಲು ದಲಿತ ಸಂಘಟನೆಗಳ ಒಕ್ಕೂಟ ಮುಂದಾಗಿವೆ. ಚಾಮರಾಜನಗರ ಜಿಲ್ಲೆಯಿಂದ ಸುಮಾರು 5 ಸಾವಿರ ಮಂದಿ ಈ ಕಾರ್ಯಕ್ರಮಕ್ಕೆ ತೆರಳಿದ್ದು ವಿಶೇಷ ಬಸ್ಸಿನ ವ್ಯವಸ್ಥೆಯನ್ನ ಮಾಡಲಾಗಿದೆ. ಇದರ ಜೊತೆಗೆ ರಾಜ್ಯಾದ್ಯಂತ ಸುಮಾರು 30 ಸಾವಿರ ಮಂದಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಅಸಲಿಗೆ ಈ ಮಹಿಷ ದಸರಾ ಎಂದರೇನು? ಇದನ್ನಯಾಕೆ ಆಚರಣೆ ಮಾಡಲಾಗುತ್ತೆಂದು ನೋಡುವುದಾದರೆ, ಕ್ರಿಸ್ತಪೂರ್ವ 3ನೇ ಶತಮಾನದಲ್ಲಿ ಆಳ್ವಿಕೆ ನಡೆಸುತ್ತಿದ್ದವರು ಮಹಿಷ ರಾಜರು. ಅವರು ರಾಕ್ಷಸಕುಲದವರಾದರೂ ದಕ್ಷಿಣ ಭಾರತದ ಮಹಿಷ ಮಂಡಲದಿಂದ ಹಿಡಿದು ವಿಂದ್ಯಾಪರ್ವತದ ವರೆಗೂ ಇವರ ಆಳ್ವಿಕೆಯಿತ್ತು.

ಇದನ್ನೂ ಓದಿ: ಮೈಸೂರು ಅರಮನೆಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ: ಯಾವಾಗ? ಇಲ್ಲಿದೆ ವಿವರ

ವೈದಿಕ ದಾಳಿಯನ್ನ ದಿಟ್ಟತನದಿಂದ ಎದುರಿಸಿ ಪ್ರಜೆಗಳ ಉದ್ದಾರಕ್ಕೆ ದುಡಿದವರು. ಹಾಗಾಗಿ ಇಂತ ಮಹಿಷ ಕುಲದವರ ಕೊಡುಗೆ ಮೈಸೂರಿಗೆ ಅಪಾರ ಪ್ರಮಾಣದಲ್ಲಿದ್ದು ವರ್ಷಕ್ಕೊಮ್ಮೆ ಮಹಿಷ ದಸರಾವನ್ನ ದಲಿತ ಸಂಘಟನೆಗಳ ಒಕ್ಕೂಟ ನೆವರೇರಿಸಿಕೊಂಡು ಬಂದಿದೆ. ಆದರೆ ಮಹಿಷ ದಸರಾ ಆಚರಣೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ವಿರೋಧ ವ್ಯಕ್ತ ಪಡಿಸಿದ್ದು ದಲಿತ ಸಂಘಟನೆಗಳ ಒಕ್ಕೂಟದ ಕೆಂಗಣ್ಣಿಗೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?