AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahisha Dasara: ಮಹಿಷ ದಸರಾದಿಂದ ಮೈಸೂರು ಹೆಸರೇ ಬದಲಾವಣೆ..!

ಮಹಿಷ ದಸರಾ ಆಚರಣಾ ಸಮಿತಿಯಿಂದ ಆಹ್ವಾನ‌ ಪತ್ರಿಕೆ ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಮೈಸೂರು ಬದಲಿಗೆ ಮಹಿಷೂರು ಎಂದು ಮತ್ತು ಚಾಮುಂಡಿಬೆಟ್ಟಕ್ಕೆ ಮಹಿಷ ಬೆಟ್ಟ ಎಂದು ಹೆಸರಿಸಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಲಾಗಿದೆ. ಆ ಮೂಲಕ ಮಹಿಷ ದಸರಾ ಹೆಸರಿನಲ್ಲಿ ಈಗಾಗಲೇ ಸಂಘರ್ಷ ಶುರುವಾಗಿದೆ.

Mahisha Dasara: ಮಹಿಷ ದಸರಾದಿಂದ ಮೈಸೂರು ಹೆಸರೇ ಬದಲಾವಣೆ..!
ಮಹಿಷ ದಸರಾದಿಂದ ಮೈಸೂರು ಹೆಸರೇ ಬದಲಾವಣೆ..!
ದಿಲೀಪ್​, ಚೌಡಹಳ್ಳಿ
| Edited By: |

Updated on: Sep 26, 2024 | 10:38 PM

Share

ಮೈಸೂರು, ಸೆಪ್ಟೆಂಬರ್ 26: ವಿಶ್ವವಿಖ್ಯಾತ ದಸರಾ (Dasara) ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದೆ. ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಗೆ ತಾಲೀಮು ಚುರುಕುಗೊಳಿಸಲಾಗಿದೆ. ಈ ನಡುವೆ ಮಹಿಷ ದಸರಾ ಆಚರಣಾ ಸಮಿತಿಯಿಂದ ಮೈಸೂರು ಹೆಸರೇ ಬದಲಾವಣೆ ಮಾಡಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದೆ.

ಹೌದು. ಮಹಿಷ ದಸರಾ ಆಚರಣಾ ಸಮಿತಿಯಿಂದ ಆಹ್ವಾನ‌ ಪತ್ರಿಕೆ ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಮೈಸೂರು ಬದಲಿಗೆ ಮಹಿಷೂರು ಎಂದು ಮತ್ತು ಚಾಮುಂಡಿಬೆಟ್ಟಕ್ಕೆ ಮಹಿಷ ಬೆಟ್ಟ ಎಂದು ಹೆಸರಿಸಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಲಾಗಿದೆ.

ಸೆಪ್ಟೆಂಬರ್​ 29ರಂದು ಮಹಿಷ ದಸರಾ ಆಚರಣೆಗೆ ನಿರ್ಧಾರ ಮಾಡಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಮಹಿಷಾಸುರನಿಗೆ ಪುಷ್ಪಾರ್ಚನೆ ನಡೆಯಲಿದ್ದು, ನಂತರ ಪುರಭವನದ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ: ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?

ಈಗಾಗಲೇ ಮಹಿಷ ದಸರಾ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಚಾಮುಂಡಿ ಬೆಟ್ಟ ಚಲೋ ಮಾಡುವುದಾಗಿ ಪ್ರತಾಪ್ ಸಿಂಹ ಹೇಳಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮಹಿಷ ದಸರಾ ಹೆಸರಿನಲ್ಲಿ ಈಗಾಗಲೇ ಸಂಘರ್ಷ ಶುರುವಾಗಿದೆ.

ಪ್ರತಿ ವರ್ಷದಂತೆ ಈ ಬಾರಿ ಕೂಡ ಮಹಿಷ ದಸರಾ ವಿವಾದ ತಲೆ ಎತ್ತಿದೆ. ಈ ಬಾರಿಯು ಅದ್ದೂರಿಯಾಗಿ ಮಹಿಷ ದಸರಾವನ್ನು ಆಚರಣೆ ನಡೆಸಲು ದಲಿತ ಸಂಘಟನೆಗಳ ಒಕ್ಕೂಟ ಮುಂದಾಗಿವೆ. ಚಾಮರಾಜನಗರ ಜಿಲ್ಲೆಯಿಂದ ಸುಮಾರು 5 ಸಾವಿರ ಮಂದಿ ಈ ಕಾರ್ಯಕ್ರಮಕ್ಕೆ ತೆರಳಿದ್ದು ವಿಶೇಷ ಬಸ್ಸಿನ ವ್ಯವಸ್ಥೆಯನ್ನ ಮಾಡಲಾಗಿದೆ. ಇದರ ಜೊತೆಗೆ ರಾಜ್ಯಾದ್ಯಂತ ಸುಮಾರು 30 ಸಾವಿರ ಮಂದಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಅಸಲಿಗೆ ಈ ಮಹಿಷ ದಸರಾ ಎಂದರೇನು? ಇದನ್ನಯಾಕೆ ಆಚರಣೆ ಮಾಡಲಾಗುತ್ತೆಂದು ನೋಡುವುದಾದರೆ, ಕ್ರಿಸ್ತಪೂರ್ವ 3ನೇ ಶತಮಾನದಲ್ಲಿ ಆಳ್ವಿಕೆ ನಡೆಸುತ್ತಿದ್ದವರು ಮಹಿಷ ರಾಜರು. ಅವರು ರಾಕ್ಷಸಕುಲದವರಾದರೂ ದಕ್ಷಿಣ ಭಾರತದ ಮಹಿಷ ಮಂಡಲದಿಂದ ಹಿಡಿದು ವಿಂದ್ಯಾಪರ್ವತದ ವರೆಗೂ ಇವರ ಆಳ್ವಿಕೆಯಿತ್ತು.

ಇದನ್ನೂ ಓದಿ: ಮೈಸೂರು ಅರಮನೆಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ: ಯಾವಾಗ? ಇಲ್ಲಿದೆ ವಿವರ

ವೈದಿಕ ದಾಳಿಯನ್ನ ದಿಟ್ಟತನದಿಂದ ಎದುರಿಸಿ ಪ್ರಜೆಗಳ ಉದ್ದಾರಕ್ಕೆ ದುಡಿದವರು. ಹಾಗಾಗಿ ಇಂತ ಮಹಿಷ ಕುಲದವರ ಕೊಡುಗೆ ಮೈಸೂರಿಗೆ ಅಪಾರ ಪ್ರಮಾಣದಲ್ಲಿದ್ದು ವರ್ಷಕ್ಕೊಮ್ಮೆ ಮಹಿಷ ದಸರಾವನ್ನ ದಲಿತ ಸಂಘಟನೆಗಳ ಒಕ್ಕೂಟ ನೆವರೇರಿಸಿಕೊಂಡು ಬಂದಿದೆ. ಆದರೆ ಮಹಿಷ ದಸರಾ ಆಚರಣೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ವಿರೋಧ ವ್ಯಕ್ತ ಪಡಿಸಿದ್ದು ದಲಿತ ಸಂಘಟನೆಗಳ ಒಕ್ಕೂಟದ ಕೆಂಗಣ್ಣಿಗೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್