AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jamboo Savari 2021: ಮೈಸೂರು ಅರಮನೆಯಲ್ಲಿ ವಿಜಯದಶಮಿ ಸಂಭ್ರಮ; ಇಂದು ಸಂಜೆ ಐತಿಹಾಸಿಕ ದಸರಾ ಜಂಬೂಸವಾರಿ

Mysuru Dasara 2021: ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ. ಕೊರೊನಾ ಹಿನ್ನೆಲೆ ಜಂಬೂಸವಾರಿ ಮೈಸೂರು ಅರಮನೆ ಆವರಣಕ್ಕೆ ಸೀಮಿತವಾಗಿರಲಿದೆ..

Jamboo Savari 2021: ಮೈಸೂರು ಅರಮನೆಯಲ್ಲಿ ವಿಜಯದಶಮಿ ಸಂಭ್ರಮ; ಇಂದು ಸಂಜೆ ಐತಿಹಾಸಿಕ ದಸರಾ ಜಂಬೂಸವಾರಿ
ಮೈಸೂರು ದಸರಾ ಜಂಬೂ ಸವಾರಿ (ಸಂಗ್ರಹ ಚಿತ್ರ)
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 15, 2021 | 7:26 AM

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysore Dasara)ಉತ್ಸವ ಇಂದು ಕೊನೆಯಾಗಲಿದೆ. ಮೈಸೂರು ಅರಮನೆಯಲ್ಲಿಂದು ವಿಜಯದಶಮಿ (Vijayadashami) ಹಬ್ಬದ ಸಂಭ್ರಮ ಮನೆ ಮಾಡಿದೆ. ಐತಿಹಾಸಿಕ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದ್ದು, ಇಂದು ಸಂಜೆ ಜಂಬೂ ಸವಾರಿ (Jambu Savarai 2021) ಮೆರವಣಿಗೆ ನಡೆಯಲಿದೆ. ಮೈಸೂರು ಅರಮನೆಯಲ್ಲಿ (Mysuru Palace) ಇಂದು ಮುಂಜಾನೆಯಿಂದಲೇ ಪೂಜಾ ಕೈಂಕರ್ಯಗಳು ಆರಂಭವಾಗಿವೆ. ಆನೆ, ಕುದುರೆ, ಹಸುಗಳು ಕಲ್ಯಾಣ ಮಂಟಪಕ್ಕೆ ಆಗಮಿಸಿವೆ.

ಇಂದು ಬೆಳಗ್ಗೆ 6.13ರಿಂದ 6.32ರವರೆಗೆ ಪೂಜಾ ಕೈಂಕರ್ಯಗಳು ನಡೆದಿದ್ದು, 7.20ರಿಂದ ವಿಜಯದಶಮಿ‌ ಮೆರವಣಿಗೆ ಆರಂಭವಾಗಲಿದೆ. ಅರಮನೆಯ ಮುಖ್ಯದ್ವಾರದಿಂದ ಭುವನೇಶ್ವರಿ ದೇವಾಲಯದವರೆಗೂ ಮೆರವಣಿಗೆ ನಡೆಯಲಿದೆ. ಬೆಳ್ಳಿ ಪಲ್ಲಕ್ಕಿ, ಆನೆ, ಹಸು, ಕುದುರೆಯ ಮೆರವಣಿಗೆ ಸಾಗಲಿದೆ. ವಿಜಯದಶಮಿ‌ ಮೆರವಣಿಗೆಯಲ್ಲಿ ಸಾಗಲಿರುವ ಯುವರಾಜ ಯದುವೀರ್ ಒಡೆಯರ್ ದೇಗುಲದ ಆವರಣದಲ್ಲಿ ಬನ್ನಿಮರಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಒಂದು ಗಂಟೆ ಕಾಲ‌ ಪೂಜೆ ಸಲ್ಲಿಸಲಿರುವ ಯದುವೀರ್ ಪೂಜೆ ನಂತರ ಮೆರವಣಿಗೆ ಮೂಲಕ ಅರಮನೆಗೆ ವಾಪಸ್ ತೆರಳಲಿದ್ದಾರೆ. ಈ‌ ಮೂಲಕ ಮೈಸೂರು ಅರಮನೆ ದಸರಾ ಕಾರ್ಯಕ್ರಮಕ್ಕೆ ತೆರೆ ಬೀಳಲಿದೆ.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಈ ಬಾರಿಯೂ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಲಿದೆ. ಆದರೆ ಈ ಬಾರಿ ಉತ್ಸವ ಮೂರ್ತಿ ಮೆರವಣಿಗೆ ಇರಲಿದೆ. ಚಾಮುಂಡಿ ಬೆಟ್ಟದಲ್ಲಿ ಉತ್ಸವ ಮೂರ್ತಿಗೆ ಇಂದು ಬೆಳಗ್ಗೆ 8 ಗಂಟೆಗೆ ಮೈಸೂರು ಉಸ್ತುವಾರಿ ಸಚಿವ ಎಸ್​.ಟಿ. ಸೋಮಶೇಖರ್ ಪೂಜೆ ಸಲ್ಲಿಸಲಿದ್ದಾರೆ. ಪೂಜೆ ಸಲ್ಲಿಕೆ ಬಳಿಕ ಅಲಂಕೃತ ವಾಹನದಲ್ಲಿ ಮೆರವಣಿಗೆ ಮೂಲಕ ಉತ್ಸವ ಮೂರ್ತಿಯನ್ನು ಮೈಸೂರು ಅರಮನೆಗೆ ಕರೆತರಲಾಗುವುದು.

ನಾದಸ್ವರ, ವಿವಿಧ ಕಲಾತಂಡಗಳ ಜೊತೆಗೆ ಮೆರವಣಿಗೆ ನಡೆಯಲಿದ್ದು, ನಾದಸ್ವರ ತಂಡ, ಪೊಲೀಸ್ ಬ್ಯಾಂಡ್, ಅಶ್ವದಳ, ಚಂಡೆ, ಭಜನಾ ತಂಡ, ವೇದಘೋಷ, ನವದುರ್ಗೆಯರ ಮೆರವಣಿಗೆ ಇರಲಿದೆ. ಚಾಮುಂಡಿಬೆಟ್ಟದಿಂದ ತಾವರಕಟ್ಟೆ, ಇಟ್ಟಿಗೆಗೂಡು, ಹಾರ್ಡಿಂಜ್ ವೃತ್ತದ ಮೂಲಕ ಅರಮನೆಗೆ ಮೆರವಣಿಗೆ ಆಗಮಿಸಲಿದೆ. ಇದೇ ಮೊದಲ ಬಾರಿಗೆ ಚಾಮುಂಡೇಶ್ವರಿ ಮೂರ್ತಿ ಮೆರವಣಿಗೆ ನಡೆಸಲಾಗುತ್ತಿದೆ.

ಜಂಬೂಸವಾರಿಗೆ ಸಿಎಂ ಚಾಲನೆ: ನಾಡಹಬ್ಬ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ. ಕೊರೊನಾ ಹಿನ್ನೆಲೆ ಈ ಬಾರಿಯೂ ಸರಳವಾಗಿ ಜಂಬೂಸವಾರಿ ನಡೆಸಲಾಗುತ್ತದೆ. ಜಂಬೂಸವಾರಿ ಮೈಸೂರು ಅರಮನೆ ಆವರಣಕ್ಕೆ ಸೀಮಿತವಾಗಿರಲಿದೆ. ಜೋಡಿ ನಂದಿಧ್ವಜ ಸ್ತಂಭಕ್ಕೆ ಪೂಜೆ ಸಲ್ಲಿಸಲಿರುವ ಸಿಎಂ ಬಸವರಾಜ ಬೊಮ್ಮಾಯಿ ಸಂಜೆ 4.36ರಿಂದ 4.46ರ ಶುಭ ಮೀನ ಲಗ್ನದಲ್ಲಿ ಕೋಟೆ ಆಂಜನೇಯ ಸ್ವಾಮಿ ದೇಗುಲದ ಬಳಿ ಪೂಜೆ ಸಲ್ಲಿಸಲಿದ್ದಾರೆ. ಇದಾದ ನಂತರ ಜಂಬೂಸವಾರಿಗೆ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಇಂದು ಸಂಜೆ 5ರಿಂದ 5.30ರ ಶುಭ ಲಗ್ನದಲ್ಲಿ ಚಾಮುಂಡೇಶ್ವರಿ ದೇವಿಗೆ ಸಿಎಂ ಬಸವರಾಜ ಬೊಮ್ಮಾಯಿ ಪುಷ್ಪಾರ್ಚನೆ ಮಾಡಲಿದ್ದಾರೆ. ಬಳಿಕ ಯದುವೀರ ಕೃಷ್ಣದತ್ತ ಒಡೆಯರ್ ಚಿನ್ನದ ಅಂಬಾರಿಯಲ್ಲಿರುವ ದೇವಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಸಚಿವ ಸೋಮಶೇಖರ್, ಮೇಯರ್ ಸುನಂದಾ ಪಾಲನೇತ್ರ, ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ದಸರಾ ಬಳಿಕ ಕೊರೊನಾ ನಿಯಮ ಸಡಿಲಿಕೆ ಬಗ್ಗೆ ನಿರ್ಧಾರ; ಸಿಎಂ ಬಸವರಾಜ ಬೊಮ್ಮಾಯಿ

ಆಫ್ರಿಕಾದ ಜೀವನಶೈಲಿಗೆ ವೇದಿಕೆಯಾದ ದಸರಾ ಬೊಂಬೆಗಳು; ದಂಪತಿ ವಿಶೇಷ ಆಸಕ್ತಿಗೆ ಸಾಕ್ಷಿಯಾದ ದಸರಾ

Published On - 7:20 am, Fri, 15 October 21

ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್