AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ: ಎರಡು ದಿನ ಹೊರತು ಪಡಿಸಿ 18 ದಿನ ರಜೆ, ಮಕ್ಕಳಿಗೆ ಹಬ್ಬವೋ ಹಬ್ಬ!

Dasara School Holiday: ಕರ್ನಾಟಕ ಶಿಕ್ಷಣ ಇಲಾಖೆ ನಾಡಹಬ್ಬ ದಸರಾ ಮಹೋತ್ಸವ ಹಿನ್ನೆಲೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ 18 ದಿನ ರಜೆ ಘೋಷಿಸಿ ಆದೇಶ ಹೊರಡಿಸಿದೆ. ಆ ಮೂಲಕ ಶಾಲಾ ಮಕ್ಕಳಿಗೆ ಭರ್ಜರಿ ರಜೆ ನೀಡಲಾಗಿದೆ. ಆದರೆ ಗಾಂಧಿ ಜಯಂತಿ ಮತ್ತು ಶಾಸ್ತ್ರಿ ಜಯಂತಿ ಆಚರಣೆಗೆ ಕಡ್ಡಾಯವಾಗಿ ಶಾಲೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಮೈಸೂರು ದಸರಾ: ಎರಡು ದಿನ ಹೊರತು ಪಡಿಸಿ 18 ದಿನ ರಜೆ, ಮಕ್ಕಳಿಗೆ ಹಬ್ಬವೋ ಹಬ್ಬ!
ದಸರಾ ಮಹೋತ್ಸವ
Vinay Kashappanavar
| Edited By: |

Updated on: Sep 19, 2025 | 1:02 PM

Share

ಬೆಂಗಳೂರು, ಸೆಪ್ಟೆಂಬರ್​ 19: ಮೈಸೂರು ವಿಶ್ವವಿಖ್ಯಾತ ದಸರಾಗೆ (Mysuru Dasara) ಸಜ್ಜಾಗಿದೆ. ಚಿನ್ನದ ಅಂಬಾರಿ ಹೊತ್ತು ಮೆರೆಯೋಕೆ ಗಜಪಡೆಯೂ ರೆಡಿಯಾಗಿದೆ. ಅರಮನೆಯಲ್ಲಿ ಖಾಸಗಿ ದರ್ಬಾರ್​ಗೆ ಕೌಂಟ್​ಡೌನ್ ಕೂಡ ಶುರುವಾಗಿದೆ. ಹೀಗಿರುವಾಗಲೇ ನಾಡಹಬ್ಬ ದಸರಾ ಮಹೋತ್ಸವವನ್ನು ಮಕ್ಕಳು ಸಹ ನೋಡಿ ಕಣ್ತುಂಬಿಕೊಳ್ಳಲಿ ಎಂದು ಶಿಕ್ಷಣ ಇಲಾಖೆ ನಾಳೆಯಿಂದ 18 ದಿನ ಸರ್ಕಾರಿ ಶಾಲೆಗಳಿಗೆ ಹಬ್ಬದ ರಜೆ (Holiday) ಘೋಷಣೆ ಮಾಡಿದೆ.

ಎರಡು ದಿನ ಹೊರತು ಪಡಿಸಿ 18 ದಿನ ರಜೆ

ಈ ಬಗ್ಗೆ ಶಿಕ್ಷಣ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದ್ದು, ನಾಳೆಯಿಂದ ಅಂದರೆ ಸೆ. 20 ರಿಂದ ಅಕ್ಟೋಬರ್ 7ರವರೆಗೆ ಸರ್ಕಾರಿ ಶಾಲೆಗಳಿಗೆ ಒಟ್ಟು 18 ದಿನ ಹಬ್ಬದ ರಜೆ ಘೋಷಿಸಿದೆ. ಆದರೆ ಕಡ್ಡಾಯವಾಗಿ ಅಕ್ಟೋಬರ್ 2ರಂದು ನಡೆಯಲಿರುವ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮಗಳಿಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಗಜಪಡೆ ತಾಲೀಮು, ವಜ್ರಖಚಿತ ಸಿಂಹಾಸನ ಜೋಡಣೆ: ಇಲ್ಲಿವೆ ಮೈಸೂರು ದಸರಾ ಸಂಭ್ರಮದ ಚಿತ್ರಗಳು

ಇದನ್ನೂ ಓದಿ
Image
ಮೈಸೂರು ದಸರಾ ಗೋಲ್ಡ್​ ಕಾರ್ಡ್​, ಟಿಕೆಟ್​ ದರ ಎಷ್ಟು? ಖರೀದಿ ಹೇಗೆ?ಇಲ್ಲಿದೆ
Image
ಬಾನು ಮುಷ್ತಾಕ್​ರಿಂದ ದಸರಾ ಉದ್ಘಾಟನೆ ತಡೆಗೆ ಹೈಕೋರ್ಟ್ ಮೆಟ್ಟಿಲೇರಿದ ಸಿಂಹ
Image
ರಾಜೇಶ್ ಕೃಷ್ಣನ್ ಕಂಠ ಸಿರಿಯಲ್ಲಿ ಮೊಳಗಿತು ದಸರಾ ಹಾಡು: ವಿಡಿಯೋ ಇಲ್ಲಿದೆ
Image
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ

ರಾಜ್ಯ ಶಿಕ್ಷಣ ಇಲಾಖೆ ಹೊರಡಿಸಿರುವ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ 18 ದಿನ ರಜೆ ನೀಡಲಾಗಿದೆ. ಆ ಮೂಲಕ ರಾಜ್ಯದ ಶಾಲಾ ಮಕ್ಕಳಿಗೆ ಈ ಬಾರಿ ಭರ್ಜರಿ ರಜೆ ನೀಡಲಾಗಿದೆ. ಈ ರಜೆ ಮಕ್ಕಳಲ್ಲಿ ಹಬ್ಬದ ಸಂಭ್ರಮ ದುಪ್ಪಟ್ಟು ಮಾಡಿದೆ.

ವಿಶ್ವವಿಖ್ಯಾತ ಮೈಸೂರು ದಸರಾ ಅಂದರೆ ಅದು ರಾಜ ಪರಂಪರೆ, ಗತಕಾಲದ ವೈಭವ. ಅಷ್ಟೇ ಅಲ್ಲ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಉತ್ಸವ. ಸೆಪ್ಟೆಂಬರ್ 22ರಂದು ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಿಗೆ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಚಾಲನೆ ಸಿಗುತ್ತಿದೆ.

ಅಂದಿನಿಂದ ಅಕ್ಟೋಬರ್ 2ವರೆಗೆ ಅಂದರೆ 11 ದಿನಗಳ ಕಾಲ ದಸರಾ ಕಲರವ ಜೋರಾಗಿರಲಿದೆ. ಸರ್ಕಾರ ಈ ಬಾರಿ ದಸರಾ ಉದ್ಘಾಟನೆಗೆ ಅಂತರರಾಷ್ಟ್ರೀಯ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ವಿಜೇತೆ ಕನ್ನಡತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದೆ.

ಇದನ್ನೂ ಓದಿ: ಮೈಸೂರು ದಸರಾ ಗೋಲ್ಡ್​ ಕಾರ್ಡ್​, ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ ವಿವರ

ಇನ್ನು ಸರ್ಕಾರದಿಂದ 11 ದಿನಗಳ ದಸರಾ ಮಹೋತ್ಸವ ಆಚರಣೆ ಮಾಡಲಾಗುತ್ತಿದೆ. ಅಕ್ಟೋಬರ್ 2ರಂದು ಜಂಬೂ ಸವಾರಿ ಕಣ್ತುಂಬಿಕೊಳ್ಳಲು ನಾಡಿನ ಜನತೆ ಕಾತುರರಾಗಿ ಕಾಯುತ್ತಿದ್ದಾರೆ. ಅಂಬಾರಿ ಹೊರುವ ಅಭಿಮನ್ಯುಗೆ ಮರದ ಅಂಬಾರಿ ಕಟ್ಟಿ ತಾಲೀಮು ನಡೆಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ