AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ 10 ವರ್ಷದ ಸೇವೆಯಲ್ಲಿ ನಾನು ಎಂದು ಈ ರೀತಿ ಕೆಲಸ ಮಾಡಿಲ್ಲ; ಆರೋಪ ಸರಿಯಲ್ಲ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಣ್ಣೀರು

ನಮ್ಮದೇ ಜಿಲ್ಲೆಯಲ್ಲಿ ಈ ರೀತಿ ಆಗಿದ್ದರೆ ಹೇಗಾದರೂ ಸರಿಯೇ ಯಾರನ್ನಾದರೂ ಸಂಪರ್ಕಿಸಿ ಆಕ್ಸಿಜನ್ ಪಡೆಯುತ್ತಿದ್ದೆವು. ಅವರು ಆ ಕೆಲಸ ಮಾಡಿಲ್ಲ. ನಾವು ಜನರ ಪ್ರಾಣ ಉಳಿಸಲು 24/7 ಕೆಲಸ ಮಾಡುತ್ತಿದ್ದೇವೆ. ಈ ರೀತಿ ಹೇಳಿದರೆ ನಮಗೂ ನೋವಾಗುತ್ತದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಆರೋಪಕ್ಕೆ ಮೈಸೂರು ಡಿಸಿ ಭಾವುಕರಾದರು.

ನನ್ನ 10 ವರ್ಷದ ಸೇವೆಯಲ್ಲಿ ನಾನು ಎಂದು ಈ ರೀತಿ ಕೆಲಸ ಮಾಡಿಲ್ಲ; ಆರೋಪ ಸರಿಯಲ್ಲ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಣ್ಣೀರು
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 05, 2021 | 1:36 PM

Share

ಮೈಸೂರು: ಚಾಮರಾಜನಗರದಲ್ಲಾದ ಸರಣಿ ಸಾವಿನಿಂದಾಗಿ ನೋವಾಗಿದೆ. ಈ ವಿಚಾರದಲ್ಲಿ ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿವೆ. ಇದರಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ ಎಂದು ಮೈಸೂರಿನಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ. ನನ್ನ 10 ವರ್ಷದ ಸರ್ವಿಸ್‌ನಲ್ಲಿ ಇಂತಹ ಕೆಲಸ ಮಾಡಿಲ್ಲ. ಸತ್ತವರ ಸಮ್ಮುಖದಲ್ಲಿ ಯಾರೂ ಆರೋಪಗಳನ್ನು ಮಾಡಬಾರದು. ಆರೋಪ ಮಾಡಿದರೆ ನಮ್ಮ ಮೇಲೆ ತಪ್ಪು ಅಭಿಪ್ರಾಯ ಬರುತ್ತೆ. ಚಾಮರಾಜನಗರ ಜಿಲ್ಲಾಧಿಕಾರಿಎಂ ಆರ್​ ರವಿ ಸುಳ್ಳು ಹೇಳಿದ್ದಾರೆ. ಕಷ್ಟ ಕಾಲದಲ್ಲೂ ರಿಸ್ಕ್ ತೆಗೆದುಕೊಂಡು ಆಕ್ಸಿಜನ್ ಕಳಿಸಿದ್ದೇನೆ ಎಂದು ಹೇಳುತ್ತಾ ಭಾವುಕರಾದ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಕಣ್ಣೀರಾದರು.

ಆಸ್ಪತ್ರೆಯಲ್ಲಿದ್ದ 40 ಆಕ್ಸಿಜನ್ ಸಿಲಿಂಡರ್ ಕಳುಹಿಸಿದ್ದೇವೆ. ಯಾರೂ ಆಸ್ಪತ್ರೆಯಿಂದ ಆಕ್ಸಿಜನ್ ಕಳಿಸಿ ರಿಸ್ಕ್ ತೆಗೆದುಕೊಳ್ಳಲ್ಲ. ಆದರೆ ನಿಮಗಾಗಿ ನಾನು ಅಂತಹ ರಿಸ್ಕ್ ತೆಗೆದುಕೊಂಡಿದ್ದೇನೆ. ಇದು ಮಾನವೀಯತೆ ಅಲ್ವಾ ಎಂದು ಡಿಸಿ M.R.ರವಿಗೆ ಡಿಸಿ ರೋಹಿಣಿ ಸಿಂಧೂರಿ ಪ್ರಶ್ನೆ ಹಾಕಿದ್ದಾರೆ. ಮೊದಲೇ ಆಕ್ಸಿಜನ್ ಬೇಕೆಂದು ನಮಗೆ ಕೇಳಿದ್ರೆ ಕಳಿಸುತ್ತಿದ್ದೆ. ಚಾಮರಾಜನಗರ ಜಿಲ್ಲಾಧಿಕಾರಿ ಸರಿಯಾಗಿ ನಿರ್ವಹಣೆ ಮಾಡದೆ, ರಾಜ್ಯಮಟ್ಟದ ಉನ್ನತಾಧಿಕಾರಿಗಳ ಗಮನಕ್ಕೆ ತಾರದೆ ನಮ್ಮ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದೂ ರೋಹಿಣಿ ಝಾಡಿಸಿದ್ದಾರೆ.

ಅವರು ಮಾಧ್ಯಮದಲ್ಲಿ ಹೇಳಿಕೆ ನೀಡದಿದ್ದರೆ ನಾನು ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಿರಲಿಲ್ಲ. ಅವರು ಅಸತ್ಯವಾದ ವಿಚಾರಗಳನ್ನು ಹೇಳಿದ್ದಾರೆ. ಅದಕ್ಕೆ ಈ ಸ್ಪಷ್ಟೀಕರಣ ನೀಡುತ್ತಿದ್ದೇನೆ. ತನಿಖೆಯಲ್ಲಿ ಎಲ್ಲವೂ ಗೊತ್ತಾಗಲಿದೆ. ಚಾಮರಾಜನಗರ ಸ್ಪಂದಿಸಿಲ್ಲ ಸತ್ಯಕ್ಕೆ ದೂರವಾದ ಮಾತು.

ನಮ್ಮದೇ ಜಿಲ್ಲೆಯಲ್ಲಿ ಈ ರೀತಿ ಆಗಿದ್ದರೆ ಹೇಗಾದರೂ ಸರಿಯೇ ಯಾರನ್ನಾದರೂ ಸಂಪರ್ಕಿಸಿ ಆಕ್ಸಿಜನ್ ಪಡೆಯುತ್ತಿದ್ದೆವು. ಅವರು ಆ ಕೆಲಸ ಮಾಡಿಲ್ಲ. ನಾವು ಜನರ ಪ್ರಾಣ ಉಳಿಸಲು 24/7 ಕೆಲಸ ಮಾಡುತ್ತಿದ್ದೇವೆ. ಈ ರೀತಿ ಹೇಳಿದರೆ ನಮಗೂ ನೋವಾಗುತ್ತದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಆರೋಪಕ್ಕೆ ಮೈಸೂರು ಡಿಸಿ ಭಾವುಕರಾದರು.

(mysuru dc rohini sindhuri cries foul at chamatajanagar dc ravi over alleged failure in oxygen supply) Also Read: ರಾಜ್ಯ ಮಟ್ಟದ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸದೆ, ಪಕ್ಕದ ಜಿಲ್ಲಾಧಿಕಾರಿಯನ್ನ ದೂಷಿಸುವುದು ಸರ್ವತಾ ಸಾಧುವಲ್ಲ: ರೋಹಿಣಿ

Published On - 1:31 pm, Wed, 5 May 21

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು