AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬಾನಿ ವಿರುದ್ಧ ರೈತರ ರಣಕಹಳೆ: ಮೈಸೂರಿನಲ್ಲಿ ಜಿಯೋ ಸಿಮ್​ಗೆ ಉಗಿದು..​ ವಾಪಸ್ ಮಾಡಿದ ಕೃಷಿಕರು

ಅರಮನೆ ನಗರಿಯಲ್ಲಿ ಸಹ ಅಂಬಾನಿ, ಅದಾನಿ ವಿರುದ್ಧ ರೈತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಂಬಾನಿಯನ್ನು ವಿರೋಧಿಸಿ ಇಂದು ರೈತರು ಜಿಯೋ ಕಂಪನಿಯ ಸಿಮ್ ಕಾರ್ಡ್​​ ವಾಪಸ್​ ಮಾಡಿದರು.

ಅಂಬಾನಿ ವಿರುದ್ಧ ರೈತರ ರಣಕಹಳೆ: ಮೈಸೂರಿನಲ್ಲಿ ಜಿಯೋ ಸಿಮ್​ಗೆ ಉಗಿದು..​ ವಾಪಸ್ ಮಾಡಿದ ಕೃಷಿಕರು
ಜಿಯೋ ಸಿಮ್​ಗೆ ಉಗಿದು..​ ವಾಪಸ್ ಮಾಡಿದ ಕೃಷಿಕರು
KUSHAL V
|

Updated on:Jan 09, 2021 | 8:27 PM

Share

ಮೈಸೂರು: ಕೇಂದ್ರ ಸರ್ಕಾರ ಜಾರಿ ಮಾಡಿರುವ 3 ಕಷಿ ಕಾಯ್ದೆಗಳನ್ನು ವಿರೋಧಿಸಿ ಪಂಜಾಬ್​ ರೈತರ ದೆಹಲಿ ಚಲೋ ಚಳುವಳಿಯ ಕಾವು ಆರುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಈ ನಡುವೆ, ಮುಕೇಶ್​ ಅಂಬಾನಿ ಪಂಜಾಬ್​ ಮತ್ತು ಹರಿಯಾಣ ರೈತರ ಕೆಂಗಣ್ಣಿಗೆ ಗುರಿಯಾಗಿದ್ದು ಉದ್ಯಮಿ ಒಡೆತನದ ಜಿಯೋ ಟೆಲಿಕಾಂ ಸಂಸ್ಥೆಯ ಮೊಬೈಲ್​ ಟವರ್​ಗಳನ್ನು ರೈತರು ಹಾನಿ ಮಾಡಿದ್ದ ಪ್ರಸಂಗಗಳು ವರದಿಯಾಗಿತ್ತು.

ಇದೀಗ, ಅರಮನೆ ನಗರಿಯಲ್ಲಿ ಸಹ ಅಂಬಾನಿ, ಅದಾನಿ ವಿರುದ್ಧ ರೈತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಂಬಾನಿಯನ್ನು ವಿರೋಧಿಸಿ ಇಂದು ರೈತರು ಜಿಯೋ ಕಂಪನಿಯ ಸಿಮ್ ಕಾರ್ಡ್​​ ವಾಪಸ್​ ಮಾಡಿದರು. ನಗರದ ದೇವರಾಜ ಅರಸು ರಸ್ತೆಯಲ್ಲಿರುವ ಜಿಯೋ ಮಳಿಗೆ ಮುಂದೆ ಧರಣಿ ಸಹ ನಡೆಸಿದರು. ಈ ವೇಳೆ, ಜಿಯೋ ಕಂಪನಿ ಸಿಮ್​ಗೆ ಉಗಿದು ಪ್ರತಿಭಟಿಸಿದ ರೈತರು ಬಳಿಕ ಅದನ್ನು ವಾಪಸ್​ ಮಾಡಿದರು.

ಅವೈಜ್ಞಾನಿಕ ಕಾಯ್ದೆ ಮೂಲಕ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಧರಣಿ ನಿರತ ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ, ರಿಲಾಯನ್ಸ್​ ಕಂಪನಿಗೆ ಲಾಭಮಾಡಿಕೊಡಲು ಇದು ಕೇಂದ್ರದ ಯತ್ನ. ಹಾಗಾಗಿ, ರಿಲಾಯನ್ಸ್​ ಕಂಪನಿಯನ್ನು ಬಾಯ್​ಕಾಟ್ ಮಾಡುತ್ತಿದ್ದೇವೆ. ಜಿಯೋ ಸಿಮ್​ ಹಿಂದಿರುಗಿಸಿ ಬೇರೆ ಸಿಮ್​ ಬಳಸುತ್ತೇವೆ ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಶಾಂತಕುಮಾರ್​ ಹೇಳಿದರು.

ಭತ್ತ ಬೆಳೆದಿದ್ದರೂ ಖರೀದಿ ಮಾಡದ ಸರ್ಕಾರ, ದಲ್ಲಾಳಿಗಳು: ಹತಾಶೆಯಿಂದ ರೈತ ಆತ್ಮಹತ್ಯೆಗೆ ಶರಣು

Published On - 5:44 pm, Sat, 9 January 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!