ಮನೆಯಲ್ಲಿ ಈ ಹಾವು ಇದ್ದರೆ ಆರ್ಥಿಕ ಪ್ರಗತಿಯಾಗುತ್ತೆ ಎಂದು ಹಾವು ಮಾರಾಟಕ್ಕೆ ಯತ್ನ, ಅರೆಸ್ಟ್

ಎರಡು ತಲೆ ಹಾವೆಂದು ಜನರನ್ನು ನಂಬಿಸಿ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನಿಸುತ್ತಿದ್ದರು. ಈ ವೇಳೆ ಕಾರ್ಯಾಚರಣೆ ನಡೆಸುತ್ತಿದ್ದ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಮೋಸ ಮಾಡಿ ಹಾವು ಮಾರಾಟ ಮಾಡುತ್ತಿದ್ದ ಗ್ಯಾಂಗ್​ನನ್ನು ಸೆರೆ ಹಿಡಿದಿದ್ದಾರೆ.

ಮನೆಯಲ್ಲಿ ಈ ಹಾವು ಇದ್ದರೆ ಆರ್ಥಿಕ ಪ್ರಗತಿಯಾಗುತ್ತೆ ಎಂದು ಹಾವು ಮಾರಾಟಕ್ಕೆ ಯತ್ನ, ಅರೆಸ್ಟ್
ಎರಡು ತಲೆ ಹಾವೆಂದು ಜನರನ್ನು ನಂಬಿಸಿ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನಿಸುತ್ತಿದ್ದವರ ಬಂಧನ
ಆಯೇಷಾ ಬಾನು

Updated on: Dec 24, 2020 | 10:18 AM

ಮೈಸೂರು: ಹಾವು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರನ್ನು ಅರಣ್ಯ ಸಂಚಾರಿ ದಳ ಸಿಬ್ಬಂದಿ ಬಂಧಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕುಮಾರ್(32), ಶಿವಪ್ರಕಾಶ್(32), ರವೀಶ್(44), ಚಂದ್ರ(38) ಬಂಧಿತರು.

ಬಂಧಿತರು ಎರಡು ತಲೆ ಹಾವೆಂದು ಜನರನ್ನು ನಂಬಿಸಿ ಮಣ್ಣು ಮುಕ್ಕ ಹಾವು ಮಾರಾಟಕ್ಕೆ ಯತ್ನಿಸುತ್ತಿದ್ದರು. ಈ ವೇಳೆ ಕಾರ್ಯಾಚರಣೆ ನಡೆಸುತ್ತಿದ್ದ ಅರಣ್ಯ ಸಂಚಾರಿ ದಳದ ಸಿಬ್ಬಂದಿ ಮೋಸ ಮಾಡಿ ಹಾವು ಮಾರಾಟ ಮಾಡುತ್ತಿದ್ದ ಗ್ಯಾಂಗ್​ನನ್ನು ಸೆರೆ ಹಿಡಿದಿದ್ದಾರೆ. ಬಂಧಿತರಿಂದ ಒಂದು ಮಾರುತಿ ವ್ಯಾನ್, ಮೂರು ದ್ವಿಚಕ್ರ ವಾಹನ, ಬ್ಯಾಗ್‌ನಲ್ಲಿದ್ದ ಮಣ್ಣು ಮುಕ್ಕ ಹಾವು ವಶಕ್ಕೆ ಪಡೆಯಲಾಗಿದೆ.

ಮನೆಯಲ್ಲಿ ಈ ಹಾವು ಇದ್ದರೆ ಆರ್ಥಿಕ ಪ್ರಗತಿಯಾಗುತ್ತೆ. ಎಲ್ಲವೂ ಒಳಿತಾಗುತ್ತದೆ ಎಂದು ನಂಬಿಸಿ ವಂಚಿಸುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ರಕ್ಷಕನನ್ನೇ ಭಕ್ಷಿಸಿದ ಹಾವು: 1 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಉರಗ ತಜ್ಞ ಸ್ನೇಕ್ ಡ್ಯಾನಿ ಸಾವು

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us