AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Mayor Election: ನಾಳೆ ನಡೆಯಬೇಕಿದ್ದ ಮೈಸೂರು ಪಾಲಿಕೆಯ ಮೇಯರ್ ಚುನಾವಣೆಗೆ ತಡೆ; ಜೂನ್ 21ರವರೆಗೆ ಚುನಾವಣೆ ಬೇಡ ಎಂದ ಹೈಕೋರ್ಟ್

ಕೊವಿಡ್-19 ಮಾರ್ಗಸೂಚಿ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್​ನ ಪಾಲಿಕೆ ಸದಸ್ಯ ಪ್ರದೀಪ್ ಚಂದ್ರ  ಅರ್ಜಿ ಸಲ್ಲಿಸಿದ್ದರು. ಜೂನ್ 21ರವರೆಗೆ ಪಾಲಿಕೆ ಮೇಯರ್​ ಚುನಾವಣೆ ಸೂಕ್ತವಲ್ಲ. ಬಳಿಕ ಪರಿಸ್ಥಿತಿ ಪರಾಮರ್ಶಿಸಿ ಚುನಾವಣೆ ದಿನಾಂಕ ನಿಗದಿಪಡಿಸಿ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಆದೇಶ ನೀಡಿದೆ.

Mysuru Mayor Election: ನಾಳೆ ನಡೆಯಬೇಕಿದ್ದ ಮೈಸೂರು ಪಾಲಿಕೆಯ ಮೇಯರ್ ಚುನಾವಣೆಗೆ ತಡೆ; ಜೂನ್ 21ರವರೆಗೆ ಚುನಾವಣೆ ಬೇಡ ಎಂದ ಹೈಕೋರ್ಟ್
ಮೈಸೂರು ಪಾಲಿಕೆ
TV9 Web
| Edited By: |

Updated on:Jun 10, 2021 | 11:08 PM

Share

ಬೆಂಗಳೂರು: ನಾಳೆ (ಜೂನ್ 11)  ನಡೆಯಬೇಕಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್​ ಚುನಾವಣೆಗೆ ಕರ್ನಾಟಕ ಹೈಕೋರ್ಟ್ ತಡೆ ಒಡ್ಡಿದೆ. ಕೊವಿಡ್-19 ಮಾರ್ಗಸೂಚಿ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್​ನ ಪಾಲಿಕೆ ಸದಸ್ಯ ಪ್ರದೀಪ್ ಚಂದ್ರ  ಅರ್ಜಿ ಸಲ್ಲಿಸಿದ್ದರು. ಜೂನ್ 21ರವರೆಗೆ ಪಾಲಿಕೆ ಮೇಯರ್​ ಚುನಾವಣೆ ಸೂಕ್ತವಲ್ಲ. ಬಳಿಕ ಪರಿಸ್ಥಿತಿ ಪರಾಮರ್ಶಿಸಿ ಚುನಾವಣೆ ದಿನಾಂಕ ನಿಗದಿಪಡಿಸಿ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಆದೇಶ ನೀಡಿದೆ.

ಮೈಸೂರಿನಲ್ಲಿ ಕೊವಿಡ್ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಪ್ರಾಕೃತಿಕ ವಿಕೋಪ ಕಾಯ್ದೆ ಅಡಿಯೂ ನಿರ್ಬಂಧವಿದೆ. ಚುನಾವಣೆ ನಡೆಸಿದರೆ ಪಾಲಿಕೆ ಸದಸ್ಯರು ಹಾಗೂ ಬೆಂಬಲಿಗರು ಒಂದೆಡೆ ಸೇರುತ್ತಾರೆ. ಹೀಗಾಗಿ ಚುನಾವಣೆಗೆ ತಡೆ ನೀಡುವಂತೆ ಅರ್ಜಿದಾರರ ಪರ ಎಲ್.ಎಂ.ಚಿದಾನಂದಯ್ಯ ಮನವಿ ಮಾಡಿದ್ದರು. ಈ ವಾದವನ್ನಾಲಿಸಿದ ಹೈಕೋರ್ಟ್​ ಜೂನ್ 21ರವರೆಗೆ ಪಾಲಿಕೆ ಮೇಯರ್​ ಚುನಾವಣೆ ಸೂಕ್ತವಲ್ಲ. ಬಳಿಕ ಪರಿಸ್ಥಿತಿ ಪರಾಮರ್ಶಿಸಿ ಚುನಾವಣೆ ದಿನಾಂಕ ನಿಗದಿಪಡಿಸಿ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಆದೇಶ ನೀಡಿದೆ.

ವಿಶೇಷ ಚೇತನರಿಗೆ ಕೊವಿಡ್ ಲಸಿಕೆ ನೀಡಿ ಈವರೆಗೂ ಕರ್ನಾಟಕದ ಶೇ.35.53ರಷ್ಟು ವಿಶೇಷ ಚೇತನರಿಗೆ ಮಾತ್ರ ಕೊವಿಡ್ ಲಸಿಕೆ ವಿತರಣೆ ಮಾಡಲಾಗಿದೆ. ಉಳಿದವರಿಗೂ ಲಸಿಕೆ ವಿತರಣೆ ನಡೆಸಲು ತುರ್ತು ಕ್ರಮ ಕೈಗೊಳ್ಳುವಂತೆ ಒದಗಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಈ ವೇಳೆ ಹೈಕೋರ್ಟ್​ಗೆ ಸ್ಲಂ​​ಗಳಲ್ಲಿ ಲಸಿಕೆ ವಿತರಣೆ ನಡೆಸಿರುವ ಬಗ್ಗೆ ಮಾಹಿತಿ ನೀಡಿದ ಬಿಬಿಎಂಪಿ ಪರ ವಕೀಲ ಶ್ರೀನಿಧಿ, ಈಗಾಗಲೇ ಸ್ಲಂಗಳಲ್ಲಿ ವಾಸಿಸುವ 10 ಲಕ್ಷ ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. 3ನೇ ಒಂದರಷ್ಟು ಸ್ಲಮ್ ನಿವಾಸಿಗಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.

ಕೆಲ ಕೊವಿಡ್ ಕೇರ್ ಸೆಂಟರ್​ಗಳನ್ನು ಮುಚ್ಚುವುದಾಗಿ ಬಿಬಿಎಂಪಿ ಆಯುಕ್ತರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಹೈಕೋರ್ಟ್, ಕೊವಿಡ್ ಹಾಗೂ ಟ್ರಯಾಸ್​​ ಸೆಂಟರ್ ಮುಚ್ಚಬೇಡಿ. ಮುಂದಿನ ಪರಿಸ್ಥಿತಿಗೆ ಸಿದ್ಧವಾಗಿರುವಂತೆ ಸಲಹೆ ನೀಡಿತು.

ಇದನ್ನೂ ಓದಿ: ಕಲಾವಿದ, ವಿಮರ್ಶಕನಾಗಿ ನನಗಿರುವ ಹಕ್ಕುಗಳಿಗೆ ಐಟಿ ನಿಯಮಗಳು ಧಕ್ಕೆ ತರುತ್ತವೆ: ಮದ್ರಾಸ್ ಹೈಕೋರ್ಟ್​ಗೆ ಸಂಗೀತ ಕಲಾವಿದ ಟಿ.ಎಂ.ಕೃಷ್ಣ ಅರ್ಜಿ

Work From Home: ತನ್ನ ಉದ್ಯೋಗಿಗಳಿಗೆ ಶಾಶ್ವತವಾಗಿ ವರ್ಕ್ ಫ್ರಂ ಹೋಂ ಅವಕಾಶ ನೀಡಿದ ಫೇಸ್​ಬುಕ್

(Mysuru mayor election which was scheduled for tomorrow was withheld by Karnataka High Court)

Published On - 5:52 pm, Thu, 10 June 21

Follow Us
TV9 Web
TV9 Web

TV9 Kannada

Read More
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ