AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ವರ್ಷದಲ್ಲಿ 6 ಹುಲಿಗಳ ಸಾವು: ರಾಜ್ಯ ಸರ್ಕಾರದ ವಿರುದ್ಧ ಸಂಸದ ಯದುವೀರ್​ ಕಿಡಿ

ಒಂದೇ ವರ್ಷದಲ್ಲಿ 6 ಹುಲಿಗಳ ಸಾವಾಗಿದ್ದರೂ ರಾಜ್ಯ ಸರ್ಕಾರ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ. ಹಿಂದೆ ನಡೆದ ಘಟನೆಗಳಿಂದಾದರೂ ಪಾಠ ಕಲಿತು, ಈ ರೀತಿಯ ಘಟನೆಗಳು ಮರುಕಳಿಸದಂತೆ ಸರ್ಕಾರ ಹಾಗೂ ಅಧಿಕಾರಿಗಳು ತೀವ್ರ ನಿಗಾ ವಹಿಸುತ್ತಾರೆ ಎಂದು ಭಾವಿಸಿದ್ದೇವು, ಅದು ಕೂಡ ಹುಸಿಯಾಗಿದೆ ಎಂದು ಸಂಸದ ಯದುವೀರ್ ಒಡೆಯರ್​​ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್​ ಮಾಡಿ ಕಿಡಿ ಕಾರಿದ್ದಾರೆ.

ಒಂದೇ ವರ್ಷದಲ್ಲಿ 6 ಹುಲಿಗಳ ಸಾವು: ರಾಜ್ಯ ಸರ್ಕಾರದ ವಿರುದ್ಧ ಸಂಸದ ಯದುವೀರ್​ ಕಿಡಿ
Yaduveer
ಪ್ರಸನ್ನ ಹೆಗಡೆ
|

Updated on: Oct 05, 2025 | 7:06 AM

Share

ಮೈಸೂರು, ಅಕ್ಟೋಬರ್​ 05: ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಆರೈಕೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಬೇಜವಾಬ್ದಾರಿತನದ ಆಡಳಿತದಿಂದ ಸಾಕಷ್ಟು ಪ್ರಾಣಿಗಳನ್ನು ಕಳೆದುಕೊಂಡಿದ್ದು,ಈ ವರ್ಷದಲ್ಲಿಯೇ 6 ಹುಲಿಗಳ ಹತ್ಯೆಯಾಗಿದೆ ಎಂದು ಮೈಸೂರು ಸಂಸದ ಯದುವೀರ್​ (Yaduveer Wadiyar) ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್​ ಮಾಡಿರುವ ಸಂಸದರು, ಇತ್ತೀಚೆಗೆ ಮಹದೇಶ್ವರಬೆಟ್ಟ ವನ್ಯಧಾಮದಲ್ಲಿ 5 ಹುಲಿಗಳಿಗೆ ವಿಷಹಾಕಿ ಕೊಲೆ ಮಾಡಲಾಗಿತ್ತು. ಅದರ ಬೆನ್ನಲ್ಲೇ ಮತ್ತೊಂದು ಘಟನೆ ನೋವಿನ ಸಂಗತಿ ಎಂದಿದ್ದಾರೆ.

ಸಂಸದ ಯದುವೀರ್​ ಪೋಸ್ಟ್​ ನಲ್ಲಿ ಏನಿದೆ?

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟ ವನ್ಯ ಧಾಮದಲ್ಲಿ ಹೆಣ್ಣು ಹುಲಿಯೊಂದನ್ನು ದುಷ್ಕರ್ಮಿ ಗಳು ಬರ್ಬರವಾಗಿ ಹತ್ಯೆ ಮಾಡುವ ಮೂಲಕ ಅಮಾನವೀಯ ಕೃತ್ಯ ಎಸಗಿದ್ದಾರೆ. ಇತ್ತೀಚೆಗೆ ಮಹದೇಶ್ವರಬೆಟ್ಟ ವನ್ಯಧಾಮದ ಹೂಗ್ಯಂ ಅರಣ್ಯ ಪ್ರದೇಶದಲ್ಲಿ 5 ಹುಲಿಗಳನ್ನು ವಿಷ ಪ್ರಾಶನ ಮಾಡುವ ಮೂಲಕ ಕೊಲ್ಲಲಾಗಿತ್ತು, ಅದರ ಬೆನ್ನಲ್ಲೇ ಮತ್ತೊಂದು ಹುಲಿಯನ್ನು ಕೊಲೆ ಮಾಡಿರುವುದು ಅತ್ಯಂತ ನೋವಿನ ಸಂಗತಿ. ಈ ವರ್ಷದಲ್ಲಿ 6 ಹುಲಿಗಳ ಹತ್ಯೆಯಾಗಿದ್ದರೂ ಸರ್ಕಾರ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ. ಹಿಂದೆ ನಡೆದ ಘಟನೆಗಳಿಂದಾದರೂ ಪಾಠ ಕಲಿತು, ಈ ರೀತಿಯ ಘಟನೆಗಳು ಮರುಕಳಿಸದಂತೆ ಸರ್ಕಾರ ಹಾಗೂ ಅಧಿಕಾರಿಗಳು ತೀವ್ರ ನಿಗಾ ವಹಿಸುತ್ತಾರೆ ಎಂದು ಭಾವಿಸಿದ್ದೇವು, ಅದು ಕೂಡ ಹುಸಿಯಾಗಿದೆ.

ಇದನ್ನೂ ಓದಿ: ಮಲೆಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಹತ್ಯೆ ಕೇಸ್​: ಇಬ್ಬರು ಶಂಕಿತರು ವಶಕ್ಕೆ

ವನ್ಯ ಜೀವಿಗಳ ಸಂರಕ್ಷಣೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲದೆ ಸರ್ಕಾರ ತನ್ನ ಕರ್ತವ್ಯವನ್ನು ನಿರ್ವಹಿಸಲು ನಾವು ಎಷ್ಟೇ ಮನವಿ ಮಾಡಿದರೂ ಮತ್ತೆ ಈ ರೀತಿಯ ಆವಾಂತರಗಳು ನಡೆಯುತ್ತಿರುವುದು ಬೇಸರ ತಂದಿದೆ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲು ವಿನಂತಿಸುತ್ತೇನೆ. ವನ್ಯಜೀವಿಗಳ ಸಂರಕ್ಷಣೆಯ ವಿಷಯದಲ್ಲಿ ಎಂದಿಗೂ ನಿರ್ಲಕ್ಷ್ಯ ಬೇಡ ಎಂದು ಸಂಸದ ಯದುವೀರ್​ ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು