AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ: ಗೋಲ್ಮಾಲ್ ಸಿಎಂ 4000 ಕೋಟಿ ಗುಳುಂ, ಆರ್ ಅಶೋಕ ವಾಗ್ದಾಳಿ

ವಾಲ್ಮೀಕಿ ನಿಗಮದ ಹಗರಣದ ನೆನಪು ಮಾಸುವ ಮುನ್ನವೇ ಸಿಎಂ ಸಿದ್ದರಾಮಯ್ಯ ತವರು ಮೈಸೂರಿನ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಬಹುಕೋಟಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಈ ವಿಚಾರವಾಗಿ ಇದೀಗ ಪ್ರತಿಪಕ್ಷ ನಾಯಕ ಆರ್ ಅಶೋಕ ಸಿಎಂ ಸಿದ್ದರಾಮಯ್ಯನವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಹಲವು ಪ್ರಶ್ನೆಗಳನ್ನೂ ಕೇಳಿದ್ದಾರೆ. ಅವುಗಳನ್ನು ಇಲ್ಲಿ ನೀಡಲಾಗಿದೆ.

ಮುಡಾ ಹಗರಣ: ಗೋಲ್ಮಾಲ್ ಸಿಎಂ 4000 ಕೋಟಿ ಗುಳುಂ, ಆರ್ ಅಶೋಕ ವಾಗ್ದಾಳಿ
ಸಿಎಂ ಸಿದ್ದರಾಮಯ್ಯ, ಆರ್ ಅಶೋಕ
ಗಣಪತಿ ಶರ್ಮಾ
|

Updated on: Jul 02, 2024 | 11:42 AM

Share

ಬೆಂಗಳೂರು, ಜುಲೈ 2: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MUDA) ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ನಾಯಕ ಆರ್ ಅಶೋಕ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ಗೋಲ್ಮಾಲ್ ಸಿಎಂ 4000 ಕೋಟಿ ಗುಳುಂ’ ಎಂದು ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ವ್ಯಂಗ್ಯವಾಡಿರುವ ಅಶೋಕ, ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ದಲಿತರ ಹಣವನ್ನ ಗುಳುಂ ಮಾಡಿರುವ ‘ಸಿದ್ಧ’ಹಸ್ತರು ಈಗ ಮೈಸೂರಿನ ಮುಡಾದಲ್ಲಿ 4,000 ಕೋಟಿ ರೂಪಾಯಿ ಗುಳುಂ ಮಾಡುವ ಮೂಲಕ ಮತ್ತೊಮ್ಮೆ ತಮ್ಮ ‘ಕೈ’ಚಳಕ ಪ್ರದರ್ಶನ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

ಗೋಲ್ಮಾಲ್ ಸಿಎಂ ಸಿದ್ದರಾಮಯ್ಯನವರೇ, ಈ ಪ್ರಶ್ನೆಗಳಿಗೆ ನಿಮ್ಮ ಬಳಿ ಉತ್ತರವಿದೆಯೇ ಎಂದು ಹಲವು ಪ್ರಶ್ನೆಗಳನ್ನೂ ಕೇಳಿದ್ದಾರೆ.

ಸಿದ್ದರಾಮಯ್ಯಗೆ ಆರ್ ಅಶೋಕ ಕೇಳಿರುವ ಪ್ರಶ್ನೆಗಳು

ಗೋಲ್ಮಾಲ್ ಸಿಎಂ ಸಿದ್ದರಾಮಯ್ಯನವರೇ, ತಮ್ಮ ಧರ್ಮ ಪತ್ನಿ ಅವರ ಹೆಸರಿನಲ್ಲೂ ನಿಯಮ ಬಾಹಿರವಾಗಿ ನಿವೇಶನ ವರ್ಗಾವಣೆ ಆಗಿರುವ ಸುದ್ದಿ ಹೊರಬಂದಿದೆಯಲ್ಲ ಇದನ್ನ ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ? ಆರೋಪ ಕೇಳಿಬಂದಿರುವ ಮುಡಾ ಅಧಿಕಾರಿಗಳನ್ನ ಅಮಾನತು ಮಾಡದೆ, ಕೇವಲ ವರ್ಗಾವಣೆ ಮಾಡಿ ಕೈತೊಳೆದುಕೊಂಡಿದ್ದೀರಲ್ಲ, ಯಾರನ್ನು ರಕ್ಷಣೆ ಮಾಡಲು ಹೊರಟಿದ್ದೀರಿ ಎಂದು ಅಶೋಕ್ ಪ್ರಶ್ನಿಸಿದ್ದಾರೆ.

4,000 ಕೋಟಿ ರೂಪಾಯಿ ಮೌಲ್ಯದ ಈ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣವನ್ನು ಅಸಲಿಗೆ ಸಿಬಿಐಗೆ ವಹಿಸಬೇಕು ಅಥವಾ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತನಿಖಾ ಆಯೋಗಕ್ಕೆ ನೀಡಬೇಕು. ಅದು ಬಿಟ್ಟು ತನಿಖೆಗೆ ಇಬ್ಬರು ಐಎಎಸ್ ಅಧಿಕಾರಿಗಳನ್ನ ನೇಮಿಸಿ ಪ್ರಕರಣವನ್ನ ಮುಚ್ಚಿಹಾಕಲು ಹೊರಟಿದ್ದೀರಲ್ಲ ಈ ಹಗರಣದಲ್ಲಿ ತಮ್ಮ ಪಾಲೆಷ್ಟು? 50:50 ಅನುಪಾತ ಹಂಚಿಕೆಗೆ ಅನುಮತಿ ನೀಡಿದ್ದು ಯಾರು? ಪರ್ಯಾಯ ನಿವೇಶನ ನೀಡುವಾಗ ಅದೇ ಬಡಾವಣೆ ಬಿಟ್ಟು ಲಾಭದ ಬಡಾವಣೆಗಳಲ್ಲಿ ಅವಕಾಶಕ್ಕೆ ಶಿಫಾರಸ್ಸು ಮಾಡಿದ್ದು ಯಾರು ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮೈಸೂರು ಮುಡಾದಲ್ಲಿ ಹಗರಣ: ನಿವೇಶನಗಳ ಹಂಚಿಕೆ ರದ್ದು, ಅಧಿಕಾರಿಗಳ ತಲೆದಂಡ

ಸಚಿವ ಸಂಪುಟದ ಅನುಮತಿ ಪಡೆಯದೆ ಮನಸ್ಸಿಗೆ ಬಂದಂತೆ ನಿವೇಶನ ನೀಡಲು ಅನುಮತಿ ನೀಡಿದ್ದು ಯಾರು? ನಿಮ್ಮ ತವರು ಜಿಲ್ಲೆಯಲ್ಲಿ, ಸ್ವಂತ ಊರಿನಲ್ಲಿ, ತಮ್ಮ ಆಪ್ತ ಸಚಿವರ ಇಲಾಖೆಯಲ್ಲಿ, ಇಂಥದ್ದೊಂದು ಬೃಹತ್ ಹಗರಣ ತಮ್ಮ ಗಮನಕ್ಕೆ ಬಾರದೆ, ತಮ್ಮ ಕೈವಾಡವಿಲ್ಲದೆ ನಡೆಯಲು ಸಾಧ್ಯವೇ ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಹಗರಣದ ಆರೋಪ ಕೇಳಿಬಂದ ಬೆನ್ನಲ್ಲೇ ಮುಡಾ ಆಯುಕ್ತ ದಿನೇಶ್ ಕುಮಾರ್, ಕಾರ್ಯದರ್ಶಿ ಮತ್ತು ಎಇಇ ವರ್ಗಾವಣೆ ಮಾಡಿ ಸಚಿವ ಭೈರತಿ ಸುರೇಶ್ ಸೋಮವಾರ ಮೌಖಿಕ ಆದೇಶ ಹೊರಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು