AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಚೆಕ್ ದುರುಪಯೋಗ ಆರೋಪ: ಆರೋಗ್ಯಾಧಿಕಾರಿ ಸೇರಿ ಇಬ್ಬರ ವಿರುದ್ಧ ದೂರು

ವ್ಯವಹಾರದ ನಿಮಿತ್ತ ಭದ್ರತೆಗಾಗಿ ನೀಡಿದ್ದ 4.5 ಲಕ್ಷ ರೂ. ಚೆಕ್​ ಅನ್ನು ಬೌನ್ಸ್​​ಗೆ ಯತ್ನಿಸಿದ ಹಿನ್ನಲೆ ಪಾಲಿಕೆ ಹಿರಿಯ ಆರೋಗ್ಯಾಧಿಕಾರಿ ವೆಂಕಟೇಶ್ ಹಾಗೂ ಹಾಸನ ನಿವಾಸಿ ಕೇಶವಮೂರ್ತಿ ಎಂಬುವರಿಂದ ವಂಚನೆ ಮಾಡಿದ್ದು, ಸರಸ್ವತಿಪುರಂ ನಿವಾಸಿ ಮೀರಾ ಎಂಬುವವರಿಂದ ದೂರು ನೀಡಲಾಗಿದೆ. ಇಬ್ಬರ ವಿರುದ್ಧ ವಂಚನೆ ಕೇಸ್​ ದಾಖಲಿಸುವಂತೆ ಮೈಸೂರಿನ ಜೆಎಂಎಫ್​ಸಿ ನ್ಯಾಯಾಲಯದಿಂದ ಆದೇಶ ನೀಡಲಾಗಿದೆ.

ಮೈಸೂರು: ಚೆಕ್ ದುರುಪಯೋಗ ಆರೋಪ: ಆರೋಗ್ಯಾಧಿಕಾರಿ ಸೇರಿ ಇಬ್ಬರ ವಿರುದ್ಧ ದೂರು
ಮೈಸೂರು: ಚೆಕ್ ದುರುಪಯೋಗ ಆರೋಪ: ಆರೋಗ್ಯಾಧಿಕಾರಿ ಸೇರಿ ಇಬ್ಬರ ವಿರುದ್ಧ ದೂರು
ರಾಮ್​, ಮೈಸೂರು
| Edited By: |

Updated on: May 16, 2024 | 8:36 AM

Share

ಮೈಸೂರು, ಮೇ 16: ವ್ಯವಹಾರದ ನಿಮಿತ್ತ ಭದ್ರತೆಗಾಗಿ ನೀಡಿದ್ದ 4.5 ಲಕ್ಷ ರೂ. ಚೆಕ್ (Check)​​ ದುರುಪಯೋಗ ಆರೋಪ ಕೇಳಿಬಂದ ಹಿನ್ನೆಲೆ ಪಾಲಿಕೆ ಆರೋಗ್ಯಾಧಿಕಾರಿ ವಿರುದ್ಧ ಮೈಸೂರಿನ (Mysuru) ಸರಸ್ವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವ್ಯವಹಾರದ ನಿಮಿತ್ತ ನೀಡಿದ್ದ ಚೆಕ್​ನಲ್ಲಿ 4.5 ಲಕ್ಷ ರೂ. ನಮೂದಿಸಿಕೊಂಡು ಬೌನ್ಸ್​​ಗೆ ಯತ್ನಿಸಲಾಗಿದೆ. ಪಾಲಿಕೆ ಹಿರಿಯ ಆರೋಗ್ಯಾಧಿಕಾರಿ ವೆಂಕಟೇಶ್ ಹಾಗೂ ಹಾಸನ ನಿವಾಸಿ ಕೇಶವಮೂರ್ತಿ ಎಂಬುವರಿಂದ ವಂಚನೆ ಮಾಡಿದ್ದು, ಸರಸ್ವತಿಪುರಂ ನಿವಾಸಿ ಮೀರಾ ಎಂಬುವವರಿಂದ ದೂರು ನೀಡಲಾಗಿದೆ.

ಸದ್ಯ ಇಬ್ಬರ ವಿರುದ್ಧ ವಂಚನೆ ಕೇಸ್​ ದಾಖಲಿಸುವಂತೆ ಮೈಸೂರಿನ ಜೆಎಂಎಫ್​ಸಿ ನ್ಯಾಯಾಲಯದಿಂದ ಸರಸ್ವತಿಪುರಂ ಠಾಣಾ ಪೊಲೀಸರಿಗೆ ಆದೇಶ ನೀಡಲಾಗಿದೆ. ದೂರು ನೀಡಿರುವ ಮೀರಾ ಎಂಬುವವರು ಸರಸ್ವತಿಪುರಂನಲ್ಲಿ ಅನ್ನಪೂರ್ಣ ಆಫ್ ಸೆಟ್ ಮುದ್ರಣಾಲಯ ಇಟ್ಟುಕೊಂಡಿದ್ದಾರೆ.

ಸರಣಿ ಅಪಘಾತ: ಬೈಕ್​ ಸವಾರ ಸಾವು

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕಲ್ಲಹಳ್ಳಿ ಗೇಟ್ ಬಳಿ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಬಸ್​​ ಡಿಕ್ಕಿಯಾಗಿ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

ಇದನ್ನೂ ಓದಿ: ಸರ್ಕಾರಿ ಕೆಲಸ ಕೊಡಿಸುವುದಾಗಿ ಸಿಐಡಿ ಅಧಿಕಾರಿಗಳಿಂದಲೇ 40 ಲಕ್ಷ ರೂ. ವಂಚನೆ: ಕಾಂಗ್ರೆಸ್​ನ ಪಾಲು ಎಷ್ಟು ಎಂದ ಬಿಜೆಪಿ

ಬಸ್ ಹಿಂದೆ ಬರುತ್ತಿದ್ದ 2 ಕಾರು, ಮತ್ತೊಂದು ಬಸ್​ ಡಿಕ್ಕಿ ಹೊಡೆದಿದೆ. ಹಲವರಿಗೆ ಗಾಯಗಳಾಗಿದ್ದು, ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಡುಕರ ಅಡ್ಡೆಯಾದ ಕನ್ನಡ ಸಾಹಿತ್ಯ ಭವನ ಆವರಣ

ಕೊಪ್ಪಳ: ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿರುವ ಸಾಹಿತ್ಯ ಭವನ ಇದೀಗ ಕುಡುಕರ ಅಡ್ಡೆಯಾಗಿದೆ. ಪ್ರತಿನಿತ್ಯ ರಾತ್ರಿ ಪಾರ್ಟಿ ಮಾಡುತ್ತಿರುವ ಕುಡುಕರು. ಕುಡಿದು, ಬಾಟಲ್​ಗಳಿಂದ ಕಿಡಕಿ ಗಾಜುಗಳನ್ನು ಒಡೆದು ಹೋಗುತ್ತಿರು ದುಷ್ಕರ್ಮಿಗಳು.

ಇದನ್ನೂ ಓದಿ: ಮೈಸೂರು ಸರ್ಕಾರಿ ಆಸ್ಪತ್ರೆಯಲ್ಲಿ ನೀರು, ವಿದ್ಯುತ್ ಸಮಸ್ಯೆ; ಸರಿಯಾದ ಚಿಕಿತ್ಸೆ ಸಿಗದೆ ರೋಗಿಗಳ ಪರದಾಟ

ಈ ಬಗ್ಗೆ ಅನೇಕ ಬಾರಿ ಪೊಲೀಸರಿಗೆ ವಾಯು ವಿಹಾರಿಗಳು ದೂರು ನೀಡಿದ್ದಾರೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಅಂತ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More