ಕೊರೊನಾ ನಿಯಮಾವಳಿ ಪಾಲಿಸದವರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ದೂರು ದಾಖಲು

ಬೇಕರಿ, ಟೀ ಸ್ಟಾಲ್, ಪ್ರಾವಿಜನ್ ಸ್ಟೋರ್ ಮಾಲೀಕರ ಮೇಲೆ ಕೇಸ್ ಹಾಕಲಾಗಿದ್ದು, ವಿಪತ್ತುಗಳ ನಿರ್ವಹಣಾ ಕಾಯ್ದೆ 2005ರ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಅಂಗಡಿ ಬಳಿ ಜನರನ್ನು ಗುಂಪು ಸೇರಿಸಿಕೊಂಡು ಮಾಸ್ಕ್ ಧರಿಸದೆ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಕಾರಣ ದೂರು ದಾಖಲಿಸಲಾಗಿದೆ.

ಕೊರೊನಾ ನಿಯಮಾವಳಿ ಪಾಲಿಸದವರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ದೂರು ದಾಖಲು
ಸಂಗ್ರಹ ಚಿತ್ರ
Follow us
|

Updated on:Apr 09, 2021 | 9:32 AM

ಮೈಸೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಭೀತಿ ದಿನೇ ದಿನೇ ಹೆಚ್ಚಾಗುತ್ತಿರುವ ಕಾರಣ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಮೈಸೂರು ನಗರ ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ನಗರದದಲ್ಲಿ ದೈಹಿಕ ಅಂತರ ಕಾಪಾಡಿಕೊಳ್ಳದ ಹಾಗೂ ಮಾಸ್ಕ್ ಧರಿಸದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗುತ್ತಿದ್ದು, ಈಗಾಗಲೇ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಬೇಕರಿ, ಟೀ ಸ್ಟಾಲ್, ಪ್ರಾವಿಜನ್ ಸ್ಟೋರ್ ಮಾಲೀಕರ ಮೇಲೆ ಕೇಸ್ ಹಾಕಲಾಗಿದ್ದು, ವಿಪತ್ತುಗಳ ನಿರ್ವಹಣಾ ಕಾಯ್ದೆ 2005ರ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಅಂಗಡಿ ಬಳಿ ಜನರನ್ನು ಗುಂಪು ಸೇರಿಸಿಕೊಂಡು ಮಾಸ್ಕ್ ಧರಿಸದೆ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಕಾರಣ ದೂರು ದಾಖಲಿಸಲಾಗಿದ್ದು, ಕೊರೊನಾ ನಿಯಮ ಉಲ್ಲಂಘಿಸಿದ್ದಕ್ಕೆ ಪ್ರಕರಣ ದಾಖಲಿಸಲು ನ್ಯಾಯಾಲಯಕ್ಕೂ ಮನವಿ ಸಲ್ಲಿಸಲಾಗಿದೆ.

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೊನಾ ಸೋಂಕಿನ ಆತಂಕ ಹೆಚ್ಚಾಗಿದ್ದು, ನಗರದಲ್ಲಿಂದು 6,034 ಕೊವಿಡ್ ಪ್ರಕರಣಗಳು ಪತ್ತೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಕೊರೊನಾ ನಿಯಮಾವಳಿಗಳನ್ನು ಜನರು ಕಟ್ಟುನಿಟ್ಟಾಗಿ ಪಾಲಿಸಬೇಕೆಂಬ ಸಲುವಾಗಿ ಬಿಬಿಎಂಪಿ ಮಾರ್ಷಲ್​ಗಳು ಮಾಸ್ಕ್ ಹಾಕದವರ ವಿರುದ್ಧ ದಂಡ ಪ್ರಯೋಗ ಆರಂಭಿಸಿದ್ದಾರೆ. ಕೆ.ಆರ್.ಮಾರುಕಟ್ಟೆಯಲ್ಲಿ ಮಾಸ್ಕ್ ಹಾಕದವರಿಗೆ ದಂಡ ವಿಧಿಸಲಾಗುತ್ತಿದ್ದು, ದಂಡಕ್ಕೆ ವ್ಯಾಪಾರಿಗಳು ತೀವ್ರ ಬೇಸರ ವ್ಯಕ್ತಪಡಿಸಿ ನಮಗೆ ವ್ಯಾಪಾರವೇ ಆಗ್ತಿಲ್ಲ, ದಂಡ ಎಲ್ಲಿಂದ ಕಟ್ಟೋದು. ಟೀ ಕುಡಿಯೋಕೆ ಹೋಗ್ತಿದ್ದೀವಿ, ಟಿಫನ್​ ತಿಂದು ಬರ್ತಿದ್ದೀವಿ ಎಂದರೂ ನಮ್ಮನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.

ಕಲಬುರಗಿ: ಜಿಲ್ಲೆಯಲ್ಲಿ ಕಳೆದ ಎಂಟು ದಿನದಲ್ಲಿ 1500 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಪೈಕಿ 16 ಜನ ಸಾವಿಗೀಡಾಗಿದ್ದು, ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸದ್ಯ ಜಿಲ್ಲೆಯಲ್ಲಿ 1600 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರನ್ನು ನಿಯಂತ್ರಿಸಲು ಜಿಲ್ಲಾಡಳಿತ ಹರಸಾಹಸಪಡುತ್ತಿದೆ.

ಇದನ್ನೂ ಓದಿ: ಸಿಎಂಗಳಿಗೆ ಪಿಎಂ ಕೊಟ್ಟ 5 ಟಿಪ್ಸ್​: ಕೊರೊನಾ ಸೋಂಕು ತಡೆಗೆ ರಾಜ್ಯಗಳಿಗೆ ನರೇಂದ್ರ ಮೋದಿ ಕೊಟ್ಟ ಮುಖ್ಯ ಸಲಹೆಗಳಿವು 

CM BS Yediyurappa Speech LIVE: ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ವರೆಗೆ ಕೊರೊನಾ​ ಕರ್ಫ್ಯೂ

(Mysuru Police put case on people who breaks Covid 19 rules)

Published On - 8:27 am, Fri, 9 April 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ