AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

18 ವರ್ಷವಳಪಟ್ಟವರು ವಾಹನ ತಂದ್ರೆ ಪೆಟ್ರೋಲ್ ಹಾಕಲ್ಲ.. ಅಪ್ರಾಪ್ತರ ಬೈಕ್​ ರೈಡ್​ಗೆ ಪೊಲೀಸರ ಬ್ರೇಕ್

ಮೈಸೂರಲ್ಲಿ ಅಪ್ರಾಪ್ತರಿಗೆ ಪೆಟ್ರೋಲ್, ಡೀಸೆಲ್ ಹಾಕಬೇಡಿ ಎಂದು ಪೊಲೀಸರು ಪೆಟ್ರೋಲ್ ಬಂಕ್ ಮಾಲೀಕರಿಗೆ ಮನವಿ ಮಾಡಿಕೊಂಡಿದ್ದಾರೆ. ಅಪ್ರಾಪ್ತರು ಪೆಟ್ರೋಲ್ ಹಾಕಿಸಿಕೊಳ್ಳಲು ಬಂದರೆ ಮಾಹಿತಿ ನೀಡಿ. ಸಿಸಿಟಿವಿಯಲ್ಲಿ ನೋಂದಣಿ ಸಂಖ್ಯೆ, ಅಪ್ರಾಪ್ತನ ಫೋಟೋ ತೆಗೆದುಕೊಳ್ಳಿ ಎಂದು ತಿಳಿಸಿದ್ದಾರೆ.

18 ವರ್ಷವಳಪಟ್ಟವರು ವಾಹನ ತಂದ್ರೆ ಪೆಟ್ರೋಲ್ ಹಾಕಲ್ಲ.. ಅಪ್ರಾಪ್ತರ ಬೈಕ್​ ರೈಡ್​ಗೆ ಪೊಲೀಸರ ಬ್ರೇಕ್
ಡಿಸಿಪಿ ಗೀತಾ ಪ್ರಸನ್ನ
ಆಯೇಷಾ ಬಾನು
| Edited By: |

Updated on:Feb 05, 2021 | 6:08 PM

Share

ಮೈಸೂರು: ಇತ್ತೀಚಿನ ದಿನಗಳಲ್ಲಿ ಚಿಕ್ಕ ಚಿಕ್ಕ ಮಕ್ಕಳು ಸಹ ಬೈಕ್ ಓಡಿಸುವುದನ್ನು ಕಲ್ತಿರ್ತಾರೆ. ಲೆಸೆನ್ಸ್ ಇಲ್ಲ ಅಂದ್ರೂ ಗಾಡಿ ಓಡಿಸಿ ಮೋಜು ಮಸ್ತಿ ಮಾಡಲು ಹೋಗಿ ಎಡವಟ್ಟು ಮಾಡಿಕೊಳ್ಳುತ್ತಾರೆ. ಹಾಗಾಗಿ ಅಪ್ರಾಪ್ತರ ಬೈಕ್​ ರೈಡ್​ಗೆ ಬ್ರೇಕ್ ಹಾಕಲು ಪೊಲೀಸರು ಹೊಸ ಪ್ಲಾನ್ ಮಾಡಿಕೊಂಡಿದ್ದಾರೆ. ಮೈಸೂರಲ್ಲಿ ಅಪ್ರಾಪ್ತರಿಗೆ ಪೆಟ್ರೋಲ್, ಡೀಸೆಲ್ ಹಾಕಬೇಡಿ ಎಂದು ಪೊಲೀಸರು ಪೆಟ್ರೋಲ್ ಬಂಕ್ ಮಾಲೀಕರಿಗೆ ಮನವಿ ಮಾಡಿಕೊಂಡಿದ್ದಾರೆ. ಅಪ್ರಾಪ್ತರು ಪೆಟ್ರೋಲ್ ಹಾಕಿಸಿಕೊಳ್ಳಲು ಬಂದರೆ ಮಾಹಿತಿ ನೀಡಿ. ಸಿಸಿಟಿವಿಯಲ್ಲಿ ನೋಂದಣಿ ಸಂಖ್ಯೆ, ಅಪ್ರಾಪ್ತನ ಫೋಟೋ ತೆಗೆದುಕೊಳ್ಳಿ ಎಂದು ತಿಳಿಸಿದ್ದಾರೆ.

ಅಪ್ರಾಪ್ತರ ಬೈಕ್ ರೈಡ್​ನಿಂದ ಸಾಕಷ್ಟು ಸಾವು ನೋವುಗಳು ಸಂಭವಿಸುತ್ತಿವೆ. ಇತ್ತೀಚೆಗಷ್ಟೇ ಅಪ್ರಾಪ್ತ ಬಾಲಕನ ಬೈಕ್‌ ರೈಡ್‌ನಿಂದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದರು. ಈ ಎಲ್ಲಾ ಬೆಳವಣಿಗೆಯಿಂದ ಎಚ್ಚೆತ್ತ ಮೈಸೂರು ಸಂಚಾರಿ ಪೊಲೀಸರು ಈ ರೀತಿಯ ಪ್ಲಾನ್ ಮಾಡಿಕೊಂಡಿದ್ದಾರೆ. 18 ವರ್ಷದೊಳಗಿನವರು ಪೆಟ್ರೋಲ್ ಬಂಕ್​ಗೆ ವಾಹನ ತಂದರೆ ಅವರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ ಎಂದು ಈಗಾಗಲೇ ಡಿಸಿಪಿ ಗೀತಾ ಪ್ರಸನ್ನ ಸೂಚಿಸಿದ್ದಾರೆ.

ಅಪ್ರಾಪ್ತರು ಪೆಟ್ರೋಲ್, ಡೀಸೆಲ್ ಹಾಕಿಸಿಕೊಳ್ಳಲು ಬಂದ್ರೆ ಪೊಲೀಸರಿಗೆ ತಕ್ಷಣ ಮಾಹಿತಿ ಹೋಗುತ್ತೆ. ಬಳಿಕ ಅಪ್ರಾಪ್ತರಿಂದ ವಾಹನ ವಶಕ್ಕೆ ಪಡೆಯಲಾಗುತ್ತೆ. ಇಲ್ಲದಿದ್ದರೆ ಸಿಸಿ ಕ್ಯಾಮೆರಾ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು. ಬಂಕ್​ನಲ್ಲಿ ಅಳವಡಿಸಲಾದ ಸಿಸಿ ಕ್ಯಾಮೆರಾದಲ್ಲಿ ವಾಹನದ ನೊಂದಣಿ ಸಂಖ್ಯೆ, ಅಪ್ರಾಪ್ತನ ಫೋಟೋ ದಾಖಲಾಗುತ್ತೆ. ಈ ವೇಳೆ ಕುಟುಂಬದವರನ್ನು ಕರೆದು ಬುದ್ಧಿವಾದ ಹೇಳಿ ಅರಿವು ಮೂಡಿಸಲಾಗುತ್ತೆ. ಆಗಲೂ ಮಾತು ಕೇಳದಿದ್ದರೆ, ಅವರ ಮೇಲೆ ಪ್ರಕರಣ ದಾಖಲಾಗುತ್ತೆ ಎಂದು ಮೈಸೂರಿನಲ್ಲಿ ಡಿಸಿಪಿ ಗೀತಾ ಪ್ರಸನ್ನ ತಿಳಿಸಿದ್ದಾರೆ.

ಪೆಟ್ರೋಲ್, ಡಿಸೇಲ್​ ಬೆಲೆ ಏರಿಕೆ: ಸರ್ವ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

Published On - 11:17 am, Fri, 5 February 21

ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ