AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

18 ವರ್ಷವಳಪಟ್ಟವರು ವಾಹನ ತಂದ್ರೆ ಪೆಟ್ರೋಲ್ ಹಾಕಲ್ಲ.. ಅಪ್ರಾಪ್ತರ ಬೈಕ್​ ರೈಡ್​ಗೆ ಪೊಲೀಸರ ಬ್ರೇಕ್

ಮೈಸೂರಲ್ಲಿ ಅಪ್ರಾಪ್ತರಿಗೆ ಪೆಟ್ರೋಲ್, ಡೀಸೆಲ್ ಹಾಕಬೇಡಿ ಎಂದು ಪೊಲೀಸರು ಪೆಟ್ರೋಲ್ ಬಂಕ್ ಮಾಲೀಕರಿಗೆ ಮನವಿ ಮಾಡಿಕೊಂಡಿದ್ದಾರೆ. ಅಪ್ರಾಪ್ತರು ಪೆಟ್ರೋಲ್ ಹಾಕಿಸಿಕೊಳ್ಳಲು ಬಂದರೆ ಮಾಹಿತಿ ನೀಡಿ. ಸಿಸಿಟಿವಿಯಲ್ಲಿ ನೋಂದಣಿ ಸಂಖ್ಯೆ, ಅಪ್ರಾಪ್ತನ ಫೋಟೋ ತೆಗೆದುಕೊಳ್ಳಿ ಎಂದು ತಿಳಿಸಿದ್ದಾರೆ.

18 ವರ್ಷವಳಪಟ್ಟವರು ವಾಹನ ತಂದ್ರೆ ಪೆಟ್ರೋಲ್ ಹಾಕಲ್ಲ.. ಅಪ್ರಾಪ್ತರ ಬೈಕ್​ ರೈಡ್​ಗೆ ಪೊಲೀಸರ ಬ್ರೇಕ್
ಡಿಸಿಪಿ ಗೀತಾ ಪ್ರಸನ್ನ
Follow us
ಆಯೇಷಾ ಬಾನು
| Updated By: Digi Tech Desk

Updated on:Feb 05, 2021 | 6:08 PM

ಮೈಸೂರು: ಇತ್ತೀಚಿನ ದಿನಗಳಲ್ಲಿ ಚಿಕ್ಕ ಚಿಕ್ಕ ಮಕ್ಕಳು ಸಹ ಬೈಕ್ ಓಡಿಸುವುದನ್ನು ಕಲ್ತಿರ್ತಾರೆ. ಲೆಸೆನ್ಸ್ ಇಲ್ಲ ಅಂದ್ರೂ ಗಾಡಿ ಓಡಿಸಿ ಮೋಜು ಮಸ್ತಿ ಮಾಡಲು ಹೋಗಿ ಎಡವಟ್ಟು ಮಾಡಿಕೊಳ್ಳುತ್ತಾರೆ. ಹಾಗಾಗಿ ಅಪ್ರಾಪ್ತರ ಬೈಕ್​ ರೈಡ್​ಗೆ ಬ್ರೇಕ್ ಹಾಕಲು ಪೊಲೀಸರು ಹೊಸ ಪ್ಲಾನ್ ಮಾಡಿಕೊಂಡಿದ್ದಾರೆ. ಮೈಸೂರಲ್ಲಿ ಅಪ್ರಾಪ್ತರಿಗೆ ಪೆಟ್ರೋಲ್, ಡೀಸೆಲ್ ಹಾಕಬೇಡಿ ಎಂದು ಪೊಲೀಸರು ಪೆಟ್ರೋಲ್ ಬಂಕ್ ಮಾಲೀಕರಿಗೆ ಮನವಿ ಮಾಡಿಕೊಂಡಿದ್ದಾರೆ. ಅಪ್ರಾಪ್ತರು ಪೆಟ್ರೋಲ್ ಹಾಕಿಸಿಕೊಳ್ಳಲು ಬಂದರೆ ಮಾಹಿತಿ ನೀಡಿ. ಸಿಸಿಟಿವಿಯಲ್ಲಿ ನೋಂದಣಿ ಸಂಖ್ಯೆ, ಅಪ್ರಾಪ್ತನ ಫೋಟೋ ತೆಗೆದುಕೊಳ್ಳಿ ಎಂದು ತಿಳಿಸಿದ್ದಾರೆ.

ಅಪ್ರಾಪ್ತರ ಬೈಕ್ ರೈಡ್​ನಿಂದ ಸಾಕಷ್ಟು ಸಾವು ನೋವುಗಳು ಸಂಭವಿಸುತ್ತಿವೆ. ಇತ್ತೀಚೆಗಷ್ಟೇ ಅಪ್ರಾಪ್ತ ಬಾಲಕನ ಬೈಕ್‌ ರೈಡ್‌ನಿಂದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದರು. ಈ ಎಲ್ಲಾ ಬೆಳವಣಿಗೆಯಿಂದ ಎಚ್ಚೆತ್ತ ಮೈಸೂರು ಸಂಚಾರಿ ಪೊಲೀಸರು ಈ ರೀತಿಯ ಪ್ಲಾನ್ ಮಾಡಿಕೊಂಡಿದ್ದಾರೆ. 18 ವರ್ಷದೊಳಗಿನವರು ಪೆಟ್ರೋಲ್ ಬಂಕ್​ಗೆ ವಾಹನ ತಂದರೆ ಅವರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ ಎಂದು ಈಗಾಗಲೇ ಡಿಸಿಪಿ ಗೀತಾ ಪ್ರಸನ್ನ ಸೂಚಿಸಿದ್ದಾರೆ.

ಅಪ್ರಾಪ್ತರು ಪೆಟ್ರೋಲ್, ಡೀಸೆಲ್ ಹಾಕಿಸಿಕೊಳ್ಳಲು ಬಂದ್ರೆ ಪೊಲೀಸರಿಗೆ ತಕ್ಷಣ ಮಾಹಿತಿ ಹೋಗುತ್ತೆ. ಬಳಿಕ ಅಪ್ರಾಪ್ತರಿಂದ ವಾಹನ ವಶಕ್ಕೆ ಪಡೆಯಲಾಗುತ್ತೆ. ಇಲ್ಲದಿದ್ದರೆ ಸಿಸಿ ಕ್ಯಾಮೆರಾ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು. ಬಂಕ್​ನಲ್ಲಿ ಅಳವಡಿಸಲಾದ ಸಿಸಿ ಕ್ಯಾಮೆರಾದಲ್ಲಿ ವಾಹನದ ನೊಂದಣಿ ಸಂಖ್ಯೆ, ಅಪ್ರಾಪ್ತನ ಫೋಟೋ ದಾಖಲಾಗುತ್ತೆ. ಈ ವೇಳೆ ಕುಟುಂಬದವರನ್ನು ಕರೆದು ಬುದ್ಧಿವಾದ ಹೇಳಿ ಅರಿವು ಮೂಡಿಸಲಾಗುತ್ತೆ. ಆಗಲೂ ಮಾತು ಕೇಳದಿದ್ದರೆ, ಅವರ ಮೇಲೆ ಪ್ರಕರಣ ದಾಖಲಾಗುತ್ತೆ ಎಂದು ಮೈಸೂರಿನಲ್ಲಿ ಡಿಸಿಪಿ ಗೀತಾ ಪ್ರಸನ್ನ ತಿಳಿಸಿದ್ದಾರೆ.

ಪೆಟ್ರೋಲ್, ಡಿಸೇಲ್​ ಬೆಲೆ ಏರಿಕೆ: ಸರ್ವ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

Published On - 11:17 am, Fri, 5 February 21

ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು
ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ
ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ