AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲು ಪ್ರಯಾಣಿಕರ ಗಮನಕ್ಕೆ; ಮೈಸೂರು – ತಾಳಗುಪ್ಪ ಪ್ಯಾಸೆಂಜರ್ ರೈಲು ಸಂಚಾರ ಆರಂಭ, ವೇಳಾಪಟ್ಟಿ ಹೀಗಿದೆ

16222 ಸಂಖ್ಯೆಯ ರೈಲು ಜುಲೈ 25ರಿಂದ ಆರಂಭಗೊಂಡು, ಪ್ರತಿದಿನ ಮಧ್ಯಾಹ್ನ 2 ಗಂಟೆಗೆ ಮೈಸೂರಿನಿಂದ ಹೊರಡುತ್ತದೆ. ಅದೇ ದಿನ ರಾತ್ರಿ ರೈಲು 11.30 ಗಂಟೆಗೆ ತಾಳಗುಪ್ಪ ತಲುಪಲಿದೆ.

ರೈಲು ಪ್ರಯಾಣಿಕರ ಗಮನಕ್ಕೆ; ಮೈಸೂರು - ತಾಳಗುಪ್ಪ ಪ್ಯಾಸೆಂಜರ್ ರೈಲು ಸಂಚಾರ ಆರಂಭ, ವೇಳಾಪಟ್ಟಿ ಹೀಗಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 20, 2022 | 11:46 AM

Share

ಶಿವಮೊಗ್ಗ: ಕೊರೊನಾ (Coronavirus) ಎರಡನೇ ಅಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆ ಮೈಸೂರು – ತಾಳಗುಪ್ಪ ಪ್ಯಾಸೆಂಜರ್ ರೈಲು (Passenger Rail) ಸಂಚಾರ ಸ್ಥಗಿತಗೊಂಡಿತ್ತು. ಆದರೆ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದ ಹಿನ್ನೆಲೆ ರೈಲು ಸಂಚಾರ ಮತ್ತೆ ಆರಂಭವಾಗಲಿದೆ. ಇದೇ ಜುಲೈ 25ರಿಂದ ಪ್ಯಾಸೆಂಜರ್ ರೈಲು ಸಂಚಾರ ಆರಂಭವಾಗಲಿದ್ದು, ಮಧ್ಯಾಹ್ನ 2 ಗಂಟೆಗೆ ಮೈಸೂರಿನಿಂದ ಹೊರಡುವ ರೈಲು, ರಾತ್ರಿ 11.30ಕ್ಕೆ ತಾಳಗುಪ್ಪ ತಲುಪುತ್ತದೆ. ಇನ್ನು ಮಾರನೇ ದಿನ ಬೆಳಿಗ್ಗೆ 6.10ಕ್ಕೆ ತಾಳಗುಪ್ಪದಿಂದ ಹೊರಡುವ ರೈಲು, ಮಧ್ಯಾಹ್ನ 3.35 ಕ್ಕೆ ಮೈಸೂರು ತಲುಪುತ್ತದೆ. ರೈಲಿನಲ್ಲಿ 12 ಬೋಗಿಗಳು ಇರಲಿವೆ. ಇದರಲ್ಲಿ 10 ಸೆಕೆಂಡ್ ಕ್ಲಾಸ್ ಬೋಗಿಗಳು ಹಾಗೂ 2 ಲಗೇಜ್ ಕಮ್ ಬ್ರೇಕ್ ವ್ಯಾನ್ ಬೋಗಿಗಳು.

16222 ಸಂಖ್ಯೆಯ ರೈಲು ಜುಲೈ 25ರಿಂದ ಆರಂಭಗೊಂಡು, ಪ್ರತಿದಿನ ಮಧ್ಯಾಹ್ನ 2 ಗಂಟೆಗೆ ಮೈಸೂರಿನಿಂದ ಹೊರಡುತ್ತದೆ. ಅದೇ ದಿನ ರಾತ್ರಿ ರೈಲು 11.30 ಗಂಟೆಗೆ ತಾಳಗುಪ್ಪ ತಲುಪಲಿದೆ. ಇನ್ನು 16221 ಸಂಖ್ಯೆಯ ರೈಲು ಜುಲೈ 26ರಿಂದ ಆರಂಭಗೊಂಡು ಪ್ರತಿದಿನ ತಾಳಗುಪ್ಪಾದಿಂದ ಬೆಳಿಗ್ಗೆ 06.10 ಕ್ಕೆ ಹೊರಡುತ್ತದೆ. ಹಾಗೇ, ರೈಲು ಅದೇ ದಿನ ಮಧ್ಯಾಹ್ನ 03.35 ಕ್ಕೆ ಮೈಸೂರು ತಲುಪಲಿದೆ. ಮುಂದಿನ ಆದೇಶದವರೆಗೆ ಇದೇ ವೇಳಾಪಟ್ಟಿಯಲ್ಲಿ ರೈಲುಗಳು ಸಂಚರಿಸಲಿವೆ.

ಇದನ್ನೂ ಓದಿ: Sonia Gandhi: ನಾಳೆ ಇಡಿ ವಿಚಾರಣೆಗೆ ಸೋನಿಯಾ ಗಾಂಧಿ ಹಾಜರು; ಬೆಂಗಳೂರು ಸೇರಿ ದೇಶಾದ್ಯಂತ ಕಾಂಗ್ರೆಸ್​ ಪ್ರತಿಭಟನೆಗೆ ಸಜ್ಜು

ಇದನ್ನೂ ಓದಿ
Image
Gold Price Today: ಬೆಂಗಳೂರು ಸೇರಿ ಹಲವೆಡೆ ಚಿನ್ನದ ಬೆಲೆ ಏರಿಕೆ; ಬೆಳ್ಳಿ ದರ 400 ರೂ. ಕುಸಿತ
Image
High BP: ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಸಹಕಾರಿ ಫೈಬರ್ ಭರಿತ ಆಹಾರಗಳು: ಇಲ್ಲಿದೆ ಆಹಾರಗಳ ಪಟ್ಟಿ
Image
Siddhanth Kapoor: ಬೆಂಗಳೂರಿನಲ್ಲಿ ಡ್ರಗ್ಸ್​ ಪಾರ್ಟಿ ಪ್ರಕರಣ; ನಟಿ ಶ್ರದ್ಧಾ ಕಪೂರ್​ ಸೋದರ ಸಿದ್ಧಾಂತ್​ಗೆ ನೋಟಿಸ್ ಸಾಧ್ಯತೆ
Image
ದೇವೇಗೌಡರು, ಕುಮಾರಸ್ವಾಮಿಗೆ ಅವಕಾಶ ಮಾಡಿಕೊಟ್ಟಿದ್ದೀರಿ, ನನಗೂ ಅವಕಾಶ ಮಾಡಿಕೊಡಿ; ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಿಕೆ ಶಿವಕುಮಾರ್

ರೈಲುಗಳು ಸಂಚರಿಸುವ ಸ್ಥಳಗಳು ಮತ್ತು ಸಮಯ ಹೀಗಿದೆ: 1. 16222 ಸಂಖ್ಯೆಯ ರೈಲು:

ಮೈಸೂರು – ಮಧ್ಯಾಹ್ನ 2 ಗಂಟೆಗೆ ಹೊರಡುತ್ತದೆ. ಹಾಸನ – 4.28, ಅರಸೀಕೆರೆ – ಸಂಜೆ 6 ಗಂಟೆ, ಬೀರೂರು- 7 ಗಂಟೆ, ತರೀಕೆರೆ – 7.39, ಭದ್ರಾವತಿ – 8.03, ಶಿವಮೊಗ್ಗ – 8.45, ಆನಂದಪುರ – 10.14, ಸಾಗರ- 10.44, ತಾಳಗುಪ್ಪ- 11.30.

2. 16221 ಸಂಖ್ಯೆಯ ರೈಲು: ತಾಳಗುಪ್ಪ – ಬೆಳಿಗ್ಗೆ 6.10, ಸಾಗರ – 6.34, ಆನಂದಪುರ- 7.06, ಶವಮೊಗ್ಗ – 8.15, ಭದ್ರಾವತಿ – 8.43, ತರೀಕೆರೆ – 9.13, ಬೀರೂರು – 10.03, ಕಡೂರು – 10.15, ಅರಸೀಕೆರೆ- 11.15, ಹಾಸನ – 12.28, ಮೈಸೂರು – 3.35.

ಇದನ್ನೂ ಓದಿ: Chamarajanagara News: ಹುಟ್ಟುಹಬ್ಬದ ಪ್ರಯುಕ್ತ ಬಿರಿಯಾನಿ ಊಟ: ತಂಗಳು ಬಿರಿಯಾನಿ ಸೇವಿಸಿ 25 ಕೂಲಿ ಕಾರ್ಮಿಕರು ಅಸ್ವಸ್ಥ

Published On - 11:45 am, Wed, 20 July 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್