AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ವಿ.ವಿಯ ಬಿ.ಎಡ್​ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಪರೀಕ್ಷಾ ಶುಲ್ಕ ಕಡಿತಗೊಳಿಸಿದ ಆಡಳಿತ ಮಂಡಳಿ

ಜನವರಿ ತಿಂಗಳಲ್ಲಿ ಬಿ.ಎಡ್​ನ ಎರಡು ಹಾಗೂ ನಾಲ್ಕನೇ ಸೆಮಿಸ್ಟರ್​ ಪರೀಕ್ಷೆ ನಡೆಯಲಿದೆ. ಈ ಪರೀಕ್ಷಾ ಶುಲ್ಕವನ್ನು ಶೇ. 50 ಕಡಿಮೆ ಮಾಡುವ ಆದೇಶ ಹೊರಡಿಸಿದೆ. ಬಿ.ಎಡ್​ ಪರೀಕ್ಷಾ ಶುಲ್ಕ 1300 ರೂ. ಶುಲ್ಕ ಇದೆ. ರಿಯಾಯಿತಿ ಸಿಕ್ಕ ನಂತರ ಇದರ ಬೆಲೆ 650 ರೂಪಾಯಿ ಆಗಲಿದೆ.

ಮೈಸೂರು ವಿ.ವಿಯ ಬಿ.ಎಡ್​ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಪರೀಕ್ಷಾ ಶುಲ್ಕ ಕಡಿತಗೊಳಿಸಿದ ಆಡಳಿತ ಮಂಡಳಿ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Jan 02, 2021 | 9:51 PM

Share

ಮೈಸೂರು: ಕೊರೊನಾ ವೈರಸ್​ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ಪ್ರವೇಶ ಶುಲ್ಕ ಕಡಿಮೆ ಮಾಡುವಂತೆ ಪಾಲಕರಿಂದ ಆಗ್ರಹ ಕೇಳಿ ಬಂದಿತ್ತು. ಈ ಮಧ್ಯೆ, ಮೈಸೂರು ವಿಶ್ವವಿದ್ಯಾಲಯ ಬಿ.ಎಡ್​ ಪರೀಕ್ಷಾ ಶುಲ್ಕವನ್ನು ಕಡಿಮೆ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ.

ಜನವರಿ ತಿಂಗಳಲ್ಲಿ ಬಿ.ಎಡ್​ ಪದವಿಯ ಎರಡನೇ ಹಾಗೂ ನಾಲ್ಕನೇ ಸೆಮಿಸ್ಟರ್​ಗಳ​ ಪರೀಕ್ಷೆ ನಡೆಯಲಿದೆ. ಈಗ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಪರೀಕ್ಷಾ ಶುಲ್ಕವನ್ನು ಶೇ. 50ರಷ್ಟು ಕಡಿಮೆ ಮಾಡಿ ಆದೇಶ ಹೊರಡಿಸಿದೆ. ಸದ್ಯ,  ಬಿ.ಎಡ್​ ಪರೀಕ್ಷಾ ಶುಲ್ಕ 1,300 ರೂ. ಇದ್ದು ಇದೀಗ ರಿಯಾಯಿತಿ ನಂತರ 650 ರೂಪಾಯಿಗೆ ಇಳಿದಿದೆ.

ಪ್ರಾಯೋಗಿಕ ಪರೀಕ್ಷೆ ಸೇರಿ ಒಂದು ವಿಷಯಕ್ಕಾದರೆ ಪರೀಕ್ಷಾ ಶುಲ್ಕ 770 ರೂಪಾಯಿ ಇದೆ. ರಿಯಾಯಿತಿ ನಂತರ ಈ ಶುಲ್ಕ 385 ರೂಪಾಯಿ ಆಗಲಿದೆ. ಪ್ರಾಯೋಗಿಕ ಪರೀಕ್ಷೆ ಇಲ್ಲದ ವಿಷಯಕ್ಕೆ ಪರೀಕ್ಷಾ ಶುಲ್ಕ 440 ರೂಪಾಯಿ ಇದ್ದು, ರಿಯಾಯಿತಿ ಬಳಿಕ 220 ರೂಪಾಯಿ ಆಗಲಿದೆ. ಈ ಶುಲ್ಕ ಇಳಿಕೆ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಮಾತ್ರ ಅನ್ವಯ ಆಗಲಿದೆ ಎಂದು ವಿಶ್ವವಿದ್ಯಾಲಯ ಮಾಹಿತಿ ನೀಡಿದೆ.

CBSE ಪರೀಕ್ಷಾ ದಿನಾಂಕ ಪ್ರಕಟ: ಮೇ 4 ರಿಂದ ಪರೀಕ್ಷೆ ಆರಂಭ, ಜುಲೈ 15 ರೊಳಗೆ ಫಲಿತಾಂಶ ಪ್ರಕಟ

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ