AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಾಂಗ ದಾನ, 5 ಜನರಿಗೆ ಬೆಳಕಾದ ಮೈಸೂರಿನ 17 ವರ್ಷದ ಬಾಲಕ

ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಮೆದುಳು ನಿಷ್ಕ್ರಯಗೊಂಡಿದ್ದ ಬಾಲಕನ ಅಂಗಾಂಗಳನ್ನು ಕುಟುಂಬಸ್ಥರು ದಾನ ಮಾಡುವ ಮೂಲಕ 5 ಜನರ ಬಾಳಿಗೆ ಬೆಳಕಾಗಿದ್ದಾರೆ.

ಅಂಗಾಂಗ ದಾನ, 5 ಜನರಿಗೆ ಬೆಳಕಾದ ಮೈಸೂರಿನ 17 ವರ್ಷದ ಬಾಲಕ
ಅಂಗಾಂಗ ದಾನ
ವಿವೇಕ ಬಿರಾದಾರ
|

Updated on: Mar 03, 2023 | 10:18 AM

Share

ಮೈಸೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಮೆದುಳು ನಿಷ್ಕ್ರಯಗೊಂಡಿದ್ದ ಬಾಲಕನ ಅಂಗಾಂಗಳನ್ನು (Organ Donation) ಕುಟುಂಬಸ್ಥರು ದಾನ ಮಾಡುವ ಮೂಲಕ 5 ಜನರ ಬಾಳಿಗೆ ಬೆಳಕಾಗಿದ್ದಾರೆ. ಮೈಸೂರಿನ ರಾಜಕುಮಾರ್​​ ರಸ್ತೆಯಲ್ಲಿ 17 ವರ್ಷದ ಆಕಾಶ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಸಿಟಿ ಸ್ಕ್ಯಾನ್​ ಮಾಡಿದಾಗ ಮೆದುಳಿಗೆ ಗಂಭೀರವಾಗಿ ಪೆಟ್ಟು ಬಿದ್ದುರುವುದು ತಿಳಿಯುತ್ತದೆ. ನಂತರ ಅವರನ್ನು ಅಪೊಲೋ ಬಿಜಿಎಸ್​ ಆಸ್ಪತ್ರಗೆ ಸ್ಥಳಾಂತರಿಸಲಾಗುತ್ತದೆ.

ಅಪೊಲೋ ಬಿಜಿಎಸ್​ನಲ್ಲಿ ಚಿಕಿತ್ಸೆ ನೀಡುತ್ತಿರುವಾಗಲೇ, ಫೆ. 28 ರಾತ್ರಿ 11:30 ರ ಸುಮಾರಿಗೆ ಮೆದಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಹೇಳಿದ್ದಾರೆ. ಇನ್ನು ಆಕಾಶ ಅಪಘಾತಕ್ಕೂ ಮುನ್ನ ಆರೋಗ್ಯವಾಗಿದ್ದ ಹಿನ್ನೆಲೆ ಮತ್ತು ಮಾನವ ಅಂಗಾಗ ಕಸಿ ಕಾಯ್ದೆ ಅನುಸಾರ ಆಕಾಶ ಅವರನ್ನು ಎರಡು ಬಾರಿ ಪರಿಶೀಲಿಸಿದ ಬಳಿಕ ಆಕಾಶ ಅಂಗಾಂಗ ಪಡೆದುಕೊಳ್ಳಬಹುದು ಎಂದು ಸಾಬೀತಾಗಿದೆ. ಅಂಗಾಂಗ ದಾನದ ಬಗ್ಗೆ ಆಕಾಶ ಕುಟುಂಬಕ್ಕೆ ವೈದ್ಯರು ಮನವರಿಕೆ ಮಾಡಿದ ಬಳಿಕ ದಾನ ಮಾಡಲು ಒಪ್ಪಿಕೊಂಡಿದ್ದಾರೆ.

ಬುಧವಾರ (ಮಾರ್ಚ್​.1) ರಂದು ನಸುಕಿನ ಜಾವ 3:45ಕ್ಕೆ ಆಕಾಶ ಅವರ ಲಿವರ್​, ಕಿಡ್ನಿ, ಹೃದಯ ಕವಾಟಗಳು ಮತ್ತು ಕಾರ್ನಿಯಾಗಳನ್ನು ಆಕಾಶ್​​ ದಾನ ಮಾಡಿದ್ದಾರೆ. ಆಕಾಶ್​ ಅವರ ಲಿವರ್​ ಮತ್ತು ಎಡ ಮೂತ್ರಪಿಂಡವನ್ನು ಮೈಸೂರಿನ ಅಪೋಲೋ ಬಿಜಿಎಸ್ ಆಸ್ಪತ್ರೆಯಲ್ಲಿ ಕಸಿ ಮಾಡಲಾಗಿದ್ದು, ಬಲ ಮೂತ್ರಪಿಂಡವನ್ನು ಮೈಸೂರಿನ ಕ್ಲಿಯರ್‌ಮೆಡಿ ರೇಡಿಯಂಟ್ ಆಸ್ಪತ್ರೆಯಲ್ಲಿ ಕಸಿ ಮಾಡಲಾಗಿದೆ. ಹೃದಯ ಕವಾಟಗಳನ್ನು ಬೆಂಗಳೂರಿನ ಎನ್‌ಎಚ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೈಸೂರಿನ ಕೆಆರ್ ಆಸ್ಪತ್ರೆಗೆ ಕಾರ್ನಿಯಾಗಳನ್ನು ದಾನ ಮಾಡಲಾಗಿದೆ ಎಂದು ಮೈಸೂರಿನ ಅಪೋಲೋ ಬಿಜಿಎಸ್ ಆಸ್ಪತ್ರೆಗಳ ಉಪಾಧ್ಯಕ್ಷ ಮತ್ತು ಘಟಕದ ಮುಖ್ಯಸ್ಥ ಎನ್‌ಜಿ ಭರತೀಶ ರೆಡ್ಡಿ ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!