AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಾಂಗ ದಾನ, 5 ಜನರಿಗೆ ಬೆಳಕಾದ ಮೈಸೂರಿನ 17 ವರ್ಷದ ಬಾಲಕ

ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಮೆದುಳು ನಿಷ್ಕ್ರಯಗೊಂಡಿದ್ದ ಬಾಲಕನ ಅಂಗಾಂಗಳನ್ನು ಕುಟುಂಬಸ್ಥರು ದಾನ ಮಾಡುವ ಮೂಲಕ 5 ಜನರ ಬಾಳಿಗೆ ಬೆಳಕಾಗಿದ್ದಾರೆ.

ಅಂಗಾಂಗ ದಾನ, 5 ಜನರಿಗೆ ಬೆಳಕಾದ ಮೈಸೂರಿನ 17 ವರ್ಷದ ಬಾಲಕ
ಅಂಗಾಂಗ ದಾನ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Mar 03, 2023 | 10:18 AM

Share

ಮೈಸೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಮೆದುಳು ನಿಷ್ಕ್ರಯಗೊಂಡಿದ್ದ ಬಾಲಕನ ಅಂಗಾಂಗಳನ್ನು (Organ Donation) ಕುಟುಂಬಸ್ಥರು ದಾನ ಮಾಡುವ ಮೂಲಕ 5 ಜನರ ಬಾಳಿಗೆ ಬೆಳಕಾಗಿದ್ದಾರೆ. ಮೈಸೂರಿನ ರಾಜಕುಮಾರ್​​ ರಸ್ತೆಯಲ್ಲಿ 17 ವರ್ಷದ ಆಕಾಶ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಸಿಟಿ ಸ್ಕ್ಯಾನ್​ ಮಾಡಿದಾಗ ಮೆದುಳಿಗೆ ಗಂಭೀರವಾಗಿ ಪೆಟ್ಟು ಬಿದ್ದುರುವುದು ತಿಳಿಯುತ್ತದೆ. ನಂತರ ಅವರನ್ನು ಅಪೊಲೋ ಬಿಜಿಎಸ್​ ಆಸ್ಪತ್ರಗೆ ಸ್ಥಳಾಂತರಿಸಲಾಗುತ್ತದೆ.

ಅಪೊಲೋ ಬಿಜಿಎಸ್​ನಲ್ಲಿ ಚಿಕಿತ್ಸೆ ನೀಡುತ್ತಿರುವಾಗಲೇ, ಫೆ. 28 ರಾತ್ರಿ 11:30 ರ ಸುಮಾರಿಗೆ ಮೆದಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಹೇಳಿದ್ದಾರೆ. ಇನ್ನು ಆಕಾಶ ಅಪಘಾತಕ್ಕೂ ಮುನ್ನ ಆರೋಗ್ಯವಾಗಿದ್ದ ಹಿನ್ನೆಲೆ ಮತ್ತು ಮಾನವ ಅಂಗಾಗ ಕಸಿ ಕಾಯ್ದೆ ಅನುಸಾರ ಆಕಾಶ ಅವರನ್ನು ಎರಡು ಬಾರಿ ಪರಿಶೀಲಿಸಿದ ಬಳಿಕ ಆಕಾಶ ಅಂಗಾಂಗ ಪಡೆದುಕೊಳ್ಳಬಹುದು ಎಂದು ಸಾಬೀತಾಗಿದೆ. ಅಂಗಾಂಗ ದಾನದ ಬಗ್ಗೆ ಆಕಾಶ ಕುಟುಂಬಕ್ಕೆ ವೈದ್ಯರು ಮನವರಿಕೆ ಮಾಡಿದ ಬಳಿಕ ದಾನ ಮಾಡಲು ಒಪ್ಪಿಕೊಂಡಿದ್ದಾರೆ.

ಬುಧವಾರ (ಮಾರ್ಚ್​.1) ರಂದು ನಸುಕಿನ ಜಾವ 3:45ಕ್ಕೆ ಆಕಾಶ ಅವರ ಲಿವರ್​, ಕಿಡ್ನಿ, ಹೃದಯ ಕವಾಟಗಳು ಮತ್ತು ಕಾರ್ನಿಯಾಗಳನ್ನು ಆಕಾಶ್​​ ದಾನ ಮಾಡಿದ್ದಾರೆ. ಆಕಾಶ್​ ಅವರ ಲಿವರ್​ ಮತ್ತು ಎಡ ಮೂತ್ರಪಿಂಡವನ್ನು ಮೈಸೂರಿನ ಅಪೋಲೋ ಬಿಜಿಎಸ್ ಆಸ್ಪತ್ರೆಯಲ್ಲಿ ಕಸಿ ಮಾಡಲಾಗಿದ್ದು, ಬಲ ಮೂತ್ರಪಿಂಡವನ್ನು ಮೈಸೂರಿನ ಕ್ಲಿಯರ್‌ಮೆಡಿ ರೇಡಿಯಂಟ್ ಆಸ್ಪತ್ರೆಯಲ್ಲಿ ಕಸಿ ಮಾಡಲಾಗಿದೆ. ಹೃದಯ ಕವಾಟಗಳನ್ನು ಬೆಂಗಳೂರಿನ ಎನ್‌ಎಚ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೈಸೂರಿನ ಕೆಆರ್ ಆಸ್ಪತ್ರೆಗೆ ಕಾರ್ನಿಯಾಗಳನ್ನು ದಾನ ಮಾಡಲಾಗಿದೆ ಎಂದು ಮೈಸೂರಿನ ಅಪೋಲೋ ಬಿಜಿಎಸ್ ಆಸ್ಪತ್ರೆಗಳ ಉಪಾಧ್ಯಕ್ಷ ಮತ್ತು ಘಟಕದ ಮುಖ್ಯಸ್ಥ ಎನ್‌ಜಿ ಭರತೀಶ ರೆಡ್ಡಿ ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ