AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಷಾಢ ಶುಕ್ರವಾರ ಚಾಮುಂಡೇಶ್ವರಿ ದರ್ಶನಕ್ಕೆ ಹಣ ವಸೂಲಿ: ಸರ್ಕಾರದ ನಡೆಗೆ ಭುಗಿಲೆದ್ದ ಆಕ್ರೋಶ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದಂದು ಚಾಮುಂಡೇಶ್ವರಿ ದರ್ಶನಕ್ಕೆ 2000 ರೂಪಾಯಿಗಳ ಟಿಕೆಟ್ ದರ ನಿಗದಿಪಡಿಸಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಬಿಜೆಪಿ ಮುಖಂಡ ಸುರೇಶ್ ಕುಮಾರ್ ಮತ್ತು ಕರ್ನಾಟಕ ಸೇನಾ ಪಡೆ ಈ ನಿರ್ಧಾರವನ್ನು ಖಂಡಿಸಿದೆ. ಇದು ಧಾರ್ಮಿಕ ಭಾವನೆಗಳನ್ನು ದುರುಪಯೋಗಪಡಿಸಿಕೊಳ್ಳುವ ಪ್ರಯತ್ನ ಎಂದು ಆರೋಪಿಸಿದೆ.ಸರ್ಕಾರ ಈ ನಿರ್ಧಾರವನ್ನು ಮರುಪರಿಶೀಲಿಸಬೇಕೆಂದು ಆಗ್ರಹಿಸಲಾಗಿದೆ.

ಆಷಾಢ ಶುಕ್ರವಾರ ಚಾಮುಂಡೇಶ್ವರಿ ದರ್ಶನಕ್ಕೆ ಹಣ ವಸೂಲಿ: ಸರ್ಕಾರದ ನಡೆಗೆ ಭುಗಿಲೆದ್ದ ಆಕ್ರೋಶ
ಚಾಮುಂಡೇಶ್ವರಿ ದೇವಸ್ಥಾನ
ವಿವೇಕ ಬಿರಾದಾರ
|

Updated on: Jun 16, 2025 | 4:31 PM

Share

ಬೆಂಗಳೂರು, ಜೂನ್​.16: ಮೈಸೂರಿನ (Mysore) ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ (Chamundeshwari) ಅಮ್ಮನವರಿಗೆ ಆಷಾಢ ಮಾಸದ (Ashada Masa) ಶುಕ್ರವಾರದಂದು ವಿಶೇಷ ಪೂಜೆಗಳು ನೆರವೇರುತ್ತವೆ. ಆಷಾಢ ಶುಕ್ರವಾರದಂದು ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆಯಲು ಸಾವಿರಾರು ಮಂದಿ ಭಕ್ತರು ಆಗಮಿಸುತ್ತಾರೆ. ಇದೇ ಮೊದಲ ಬಾರಿಗೆ ಆಷಾಢ ಶುಕ್ರವಾರದ ವಿಶೇಷ ದರ್ಶನಕ್ಕಾಗಿ ಚಾಮುಂಡಿ ಬೆಟ್ಟಕ್ಕೆ 2 ಸಾವಿರ ರೂ. ಟಿಕೆಟ್ ವ್ಯವಸ್ಥೆ ಮಾಡಲಾಗಿದೆ. ಸರ್ಕಾರದ ಈ ನಿರ್ಧಾರಕ್ಕೆ ಮಾಜಿ ಸಚಿವ, ಬಿಜೆಪಿ ಮುಖಂಡ ಸುರೇಶ್​ ಕುಮಾರ್ ಮತ್ತು ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಹಗಲು ದರೋಡೆ, ಕಾಂಗ್ರೆಸ್ ಸರ್ಕಾರ: ಸುರೇಶ್​ ಕುಮಾರ್

ಸಾಮಾಜಿಕ ಜಾಲತಾಣ ಫೇಸ್​ಬುಕ್​ನಲ್ಲಿ ಪೋಸ್ಟ್​ ಮಾಡಿದ ಸುರೇಶ್​ ಕುಮಾರ್ ಅವರು, “ಚಾಮುಂಡೇಶ್ವರಿ ಅಮ್ಮನವರ ದರ್ಶನಕ್ಕೆ 2000 ರೂ., ಹಗಲು ದರೋಡೆ, ಕಾಂಗ್ರೆಸ್ ಸರ್ಕಾರದ ಆಶೀರ್ವಾದ! ಇದು ಹಿಂದೂ ಭಕ್ತರ ಶ್ರದ್ಧೆಯ ‘ಪೆಸಾ ಪ್ಯಾಕೇಜ್’ ಅಲ್ಲದೆ ಮತ್ತೇನು? ಭಕ್ತಿಗೆ ತಕ್ಕಂತೆ ಪ್ಲಾನ್ ಹಾಕಿರುವ ಕಾಂಗ್ರೆಸ್ ಸರಕಾರದ ಈ ನಡೆ ಖಂಡನೀಯ. ಇದೇ ಧರ್ಮ ತಾರತಮ್ಯದ ಜೀವಂತ ಸಾಕ್ಷಿ. ಆಷಾಢ ಶುಕ್ರವಾರದ ಪವಿತ್ರತೆಯನ್ನು ಹಣದ ಸರದಾರಿಕೆ ಮಾಡಿರುವುದು ಧರ್ಮ ದ್ವೇಷಿ ಕಾಂಗ್ರೆಸ್ ಸರಕಾರದ ನಿಜ ಮುಖವಲ್ಲವೇ? ಹಿಂದು ಧರ್ಮ, ಭಕ್ತಿ, ನಂಬಿಕೆ ಇವೆಲ್ಲವನ್ನೂ ಲೆಕ್ಕಕೆ ತಗೊಳ್ಳದೆ ಭಕ್ತರಿಂದ ವಸೂಲಿ ಮಾಡುವ ಹೊಸ ಸೇಕ್ಯುಲರ್ ರಾಜಕೀಯವೋ?” ಎಂದು ಪ್ರಶ್ನಿಸಿದ್ದಾರೆ.

ಸುರೇಶ್​ ಕುಮಾರ್ ಪೋಸ್ಟ್​

ಇದನ್ನೂ ಓದಿ
Image
ಬಟ್ಟೆ ವ್ಯಾಪರಿಯನ್ನ ಮನೆಗೆ ಕರೆಸಿಕೊಂಡ ಯುವತಿ: ಲಾಕ್ ಆಗಿದ್ದು ಪೊಲೀಸಪ್ಪ
Image
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
Image
ಹುಲಿಯ ನಿರ್ಭೀತ ನಡಿಗೆ, ಗತ್ತು ನೋಡಿ ನೀವೂ ರೋಮಾಂಚಿತರಾಗುತ್ತೀರಿ!
Image
ಆಪರೇಷನ್ ವೇಳೆ ದಂಗಾದ ವೈದ್ಯರು, ಮಹಿಳೆ ದೇಹದಲ್ಲಿ 861 ಕಲ್ಲುಗಳು ಪತ್ತೆ

ಉಳ್ಳವರು, ಇಲ್ಲದವರು ಎಂದು ತಾರತಮ್ಯ: ಕರ್ನಾಟಕ ಸೇನಾ ಪಡೆ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸೇವಾ ಶುಲ್ಕ ಹೆಚ್ಚಳಕ್ಕೆ ಕರ್ನಾಟಕ ಸೇನಾ ಪಡೆ ವಿರೋಧ ವ್ಯಕ್ತಪಡಿಸಿದೆ. ಆಷಾಢ ಶುಕ್ರವಾರದಂದು ಚಾಮುಂಡೇಶ್ವರಿ ಅಮ್ಮನವರ ವಿಶೇಷ ದರ್ಶನಕ್ಕೆ 2,000 ರೂ. ನಿಗದಿ ಮಾಡುವ ಮೂಲಕ ಸರ್ಕಾರ ಉಳ್ಳವರು, ಇಲ್ಲದವರು ಅಂತ ತಾರತಮ್ಯ ಮಾಡುತ್ತಿದೆ ಎಂದು ಕರ್ನಾಟಕ ಸೇನಾ ಪಡೆ ಪ್ರತಿಭಟನೆ ನಡೆಸಿತು. ರಾಜ್ಯ ಸರ್ಕಾರ ಕೂಡಲೇ ಈ ನಿರ್ಧಾರ ಮರುಪರಿಶೀಲಿಸಬೇಕೆಂದು ಆಗ್ರಹಿಸಿದೆ.

ಇದನ್ನೂ ಓದಿ: ಆಷಾಢ ಮಾಸದಲ್ಲಿ ಈ ದಿನಗಳಂದು ಚಾಮುಂಡಿ ಬೆಟ್ಟಕ್ಕೆ ವಾಹನ ನಿರ್ಬಂಧ

ವಿಶೇಷ ದರ್ಶನ

ಇದೇ ಮೊದಲ ಬಾರಿಗೆ ವಿಶೇಷ ದರ್ಶನಕ್ಕಾಗಿ 2,000 ರೂ.ಗಳ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ. ಎಸಿ ಬಸ್‌ನಲ್ಲಿ ಬೆಟ್ಟಕ್ಕೆ ತೆರಳಬಹುದು. ಜತೆಗೆ ವಿಶೇಷ ದರ್ಶನದ ವ್ಯವಸ್ಥೆ ಇರಲಿದೆ. ಲಾಡು ಪ್ರಸಾದ, ಮರುಬಳಕೆ ಮಾಡಬಹುದಾದ ವಾಟರ್ ಬಾಟಲ್ ನೀಡಲಾಗುವುದು. ಸಾಮಾನ್ಯ (ಉಚಿತ) ಸರತಿ ಸಾಲು, 300 ರೂ. ಟಿಕೆಟ್ ಸಾಲು ಸಹ ಇರಲಿದೆ. ಯಾವುದೇ ತೊಂದರೆಯಾಗದಂತೆ ಹೊಸ ಕ್ಯೂ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್​ಸಿ ಮಹದೇವಪ್ಪ ತಿಳಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ