AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಜಿಲ್ಲೆಯಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆಗೆ 39 ಮುಸ್ಲಿಂ ವಿದ್ಯಾರ್ಥಿನಿಯರು ಗೈರು; ಶಿಕ್ಷಣ ಇಲಾಖೆ ಮೂಲಗಳಿಂದ ಮಾಹಿತಿ

ಮೈಸೂರು ಜಿಲ್ಲೆಯಲ್ಲಿ 36,151 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ಇದರಲ್ಲಿ 35,517 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಪುನರಾವರ್ತಿತ ಹಾಗೂ ಖಾಸಗಿಯಾಗಿ ಪರೀಕ್ಷೆ ಕಟ್ಟಿದವರ ಮಾಹಿತಿ ಲಭ್ಯವಾಗಿಲ್ಲ

ಮೈಸೂರು ಜಿಲ್ಲೆಯಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆಗೆ 39 ಮುಸ್ಲಿಂ ವಿದ್ಯಾರ್ಥಿನಿಯರು ಗೈರು; ಶಿಕ್ಷಣ ಇಲಾಖೆ ಮೂಲಗಳಿಂದ ಮಾಹಿತಿ
ಪ್ರಾತಿನಿಧಿಕ ಚಿತ್ರ
TV9 Web
| Updated By: sandhya thejappa|

Updated on:Mar 28, 2022 | 2:32 PM

Share

ಮೈಸೂರು: ರಾಜ್ಯದಲ್ಲಿ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ (SSLC Examination) ಆರಂಭವಾಗಿದೆ. ಮೊದಲ ದಿನವಾದ ಇಂದು ಕನ್ನಡ (Kannada) ವಿಷಯ ಪರೀಕ್ಷೆ ನಡೆದಿದೆ. ಜಿಲ್ಲೆಯಲ್ಲಿ ಮೊದಲ ದಿನ 634 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದು, ಇದರಲ್ಲಿ 39 ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿಲ್ಲ ಎಂದು ಶಿಕ್ಷಣ ಇಲಾಖೆ ಮೂಲಗಳಿಂದ ತಿಳಿದುಬಂದಿದೆ. ಜಿಲ್ಲೆಯಲ್ಲಿ 36,151 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ಇದರಲ್ಲಿ 35,517 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಪುನರಾವರ್ತಿತ ಹಾಗೂ ಖಾಸಗಿಯಾಗಿ ಪರೀಕ್ಷೆ ಕಟ್ಟಿದವರ ಮಾಹಿತಿ ಲಭ್ಯವಾಗಿಲ್ಲ. ಯಾವ ಕಾರಣಕ್ಕೆ ಪರೀಕ್ಷೆಗೆ ಬಂದಿಲ್ಲ ಅಂತ ಶಿಕ್ಷಣ ಇಲಾಖೆ ಮಾಹಿತಿ ಕಲೆ ಹಾಕುತ್ತಿದೆ.

ಪರೀಕ್ಷೆಗೆ ಗೈರಾದ ಬಹುತೇಕ ವಿದ್ಯಾರ್ಥಿನಿಯರು ಶಾಲೆಗೂ ಬಂದಿರಲಿಲ್ಲ ಎಂದು ಶಿಕ್ಷಣ ಇಲಾಖೆ ಸರ್ಕಾರಕ್ಕೆ ಮಾಹಿತಿ ನೀಡಿದೆ. ಹಿಜಾಬ್ ಅಥವಾ ಯಾವ ಕಾರಣಕ್ಕೆ ಪರೀಕ್ಷೆಗೆ ಗೈರಾಗಿದ್ದಾರೆ? ಎಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಟಿವಿ9ಗೆ ಡಿಡಿಪಿಐ ರಾಮಚಂದ್ರ ರಾಜೇ ಅರಸ್ ಹೇಳಿಕೆ ನೀಡಿದರು.

ಮಂಡ್ಯದಲ್ಲಿ ಒಟ್ಟು 21,109 ವಿದ್ಯಾರ್ಥಿಗಳ ಹೆಸರು ಪರೀಕ್ಷೆಗೆ ನೋಂದಣಿಯಾಗಿತ್ತು. ಈ ಪೈಕಿ 20,673 ಪರಿಕ್ಷೆಗೆ ಹಾಜರಾಗಿದ್ದಾರೆ. 436 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. ಹಿಜಾಬ್ ಕಾರಣದಿಂದ ಗೈರಾಗಿಲ್ಲ. ಆರೋಗ್ಯ ಕಾರಣ ಹಾಜರಾಗಿಲ್ಲ. ಕೆಲ ಮಕ್ಕಳು ಶಾಲೆ ಬಿಟ್ಟಿರುವ ಕಾರಣ ಹಾಜರಾಗಿಲ್ಲ.

ಕೊಪ್ಪಳ ಜಿಲ್ಲೆಯಾದ್ಯಂತ 737 ಜನ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಗಂಗಾವತಿ 404, ಕೊಪ್ಪಳ 155, ಕುಷ್ಟಗಿ 86 ಹಾಗೂ ಯಲಬುರ್ಗಾದಲ್ಲಿ 92 ವಿದ್ಯಾರ್ಥಿಗಳು ಗೈರಾಗಿದ್ದಾರೆ ಅಂತ ಡಿಡಿಪಿಐ ದೊಡ್ಡಬಸಪ್ಪ ನಿರಲಕೇರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ

4 ತಿಂಗಳ ಹಸುಗೂಸಿನೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ತಾಯಿ; ಮಗುವಿನ ಆರೈಕೆ ಮಾಡಿ ಮಾನವೀಯತೆ ಮೆರೆದ ಆಶಾ ಕಾರ್ಯಕರ್ತೆ

 ‘ಕೆಜಿಎಫ್​ ಚಾಪ್ಟರ್​ 2’ ಟ್ರೇಲರ್​ಗೆ ಕೋಟಿಕೋಟಿ ವೀಕ್ಷಣೆ; ಯಶ್ ಅವರನ್ನು ತಡೆಯುವವರೇ ಇಲ್ಲ

Published On - 2:28 pm, Mon, 28 March 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!