Delta Plus Variant: ಮೈಸೂರಿನಲ್ಲಿ ಈವರೆಗೆ ನಾಲ್ವರು ಡೆಲ್ಟಾ ಸೋಂಕಿತರು ಪತ್ತೆ, ಸಾರ್ವಜನಿಕರು ಆತಂಕಪಡುವ ಅವಶ್ಯಕತೆಯಿಲ್ಲ: ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪ್ರಸಾದ್

ಯಾರಲ್ಲೂ ಗಂಭೀರ ಸ್ವರೂಪದ ರೋಗಲಕ್ಷಣಗಳು ಕಂಡು ಬಂದಿಲ್ಲ. ಸದ್ಯ ಈ ಎಲ್ಲಾ ಸೋಂಕಿತರು ಗುಣಮುಖರಾಗಿದ್ದಾರೆ. ಹೋಂ ಐಸೋಲೇಷನ್​ನಲ್ಲಿ ಎಲ್ಲ ಕೊವಿಡ್ ಸೋಂಕಿತರಿಗೂ ವೈದ್ಯಕೀಯ ಶಿಷ್ಟಾಚಾರ ಪಾಲನೆ‌ಮಾಡಲಾಗಿದೆ. : ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪ್ರಸಾದ್

Delta Plus Variant: ಮೈಸೂರಿನಲ್ಲಿ ಈವರೆಗೆ ನಾಲ್ವರು ಡೆಲ್ಟಾ ಸೋಂಕಿತರು ಪತ್ತೆ, ಸಾರ್ವಜನಿಕರು ಆತಂಕಪಡುವ ಅವಶ್ಯಕತೆಯಿಲ್ಲ: ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪ್ರಸಾದ್
ಮೈಸೂರು ಮಹಾನಗರ ಪಾಲಿಕೆ
Follow us
| Updated By: guruganesh bhat

Updated on:Jun 24, 2021 | 3:47 PM

ಮೈಸೂರು: ಜಿಲ್ಲೆಯಲ್ಲಿ ನಾಲ್ವರಿಗೆ ಡೆಲ್ಟಾ ಪ್ರಭೇದ ಪತ್ತೆಯಾಗಿದೆ. ಇವುಗಳಲ್ಲಿ 3 ಡೆಲ್ಟಾ ಸ್ಟ್ರೇನ್ ವೇರಿಯಂಟ್,‌ 1 ಒಂದು ಡೆಲ್ಟಾ ಪ್ಲಸ್ ಪ್ರಬೇಧ ಎಂದು ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪ್ರಸಾದ್ ಮಾಹಿತಿ ನೀಡಿದ್ದಾರೆ. ಯಾರಲ್ಲೂ ಗಂಭೀರ ಸ್ವರೂಪದ ರೋಗಲಕ್ಷಣಗಳು ಕಂಡು ಬಂದಿಲ್ಲ. ಸದ್ಯ ಈ ಎಲ್ಲಾ ಸೋಂಕಿತರು ಗುಣಮುಖರಾಗಿದ್ದಾರೆ. ಹೋಂ ಐಸೋಲೇಷನ್​ನಲ್ಲಿ ಎಲ್ಲ ಕೊವಿಡ್ ಸೋಂಕಿತರಿಗೂ ವೈದ್ಯಕೀಯ ಶಿಷ್ಟಾಚಾರ ಪಾಲನೆ‌ಮಾಡಲಾಗಿದೆ. ಈ ವಿಚಾರವಾಗಿ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆಯಿಲ್ಲ ಎಂದು ಅವರು ತಿಳಿಸಿದ್ದಾರೆ.

ರೂಪಾಂತರಿ ವೈರಸ್ ಡೆಲ್ಟಾ ಪ್ಲಸ್ ದಾಳಿಗೆ ಭಾರತದಲ್ಲಿ ಮೊದಲ ಬಲಿಯಾಗಿದೆ. ಜಿನೋಮ್ ಟೆಸ್ಟ್ ವರದಿ ಬರುವುದಕ್ಕೂ ಮುನ್ನವೇ ಮಧ್ಯಪ್ರದೇಶದಲ್ಲಿ ಡೆಲ್ಟಾ ಪ್ಲಸ್ ಸೋಂಕಿಗೆ ಮಹಿಳೆ ಮೃತಪಟ್ಟಿದ್ದಾರೆ. ಈ ಬಗ್ಗೆ ಜೂನ್ 23ರಂದು ಬುಧವಾರ ವರದಿಯಾಗಿದೆ. ಉಜ್ಜೈನಿಯಲ್ಲಿ ಸಂಗ್ರಹಿಸಿರುವ ಸ್ಯಾಂಪಲ್ನಲ್ಲಿ ಕೊರೊನಾ ಸೋಂಕಿತೆಗೆ ಡೆಲ್ಟಾ ಪ್ಲಸ್ ಪ್ರಭೇದ ತಗುಲಿರುವುದು ಬಹಿರಂಗವಾಗಿದೆ.

ಭಾರತದಲ್ಲಿ ಎಷ್ಟು ಕೇಸ್ ಬಂದಿವೆ? ಭಾರತದಲ್ಲಿ ಇದುವರೆಗೂ 40 ಡೆಲ್ಟಾ ಪ್ಲಸ್ ಪ್ರಭೇದದ ಕೇಸ್ ಪತ್ತೆಯಾಗಿದೆ. ಮಹಾರಾಷ್ಟ್ರದಲ್ಲಿ 21, ಮಧ್ಯಪ್ರದೇಶದಲ್ಲಿ 5, ಕೇರಳದಲ್ಲಿ 3, ಆಂಧ್ರ, ಜಮ್ಮು ಕಾಶ್ಮೀರದಲ್ಲಿ ತಲಾ 1 ಕೇಸ್ ಪತ್ತೆಯಾಗಿವೆ. ಹಾಗೂ ತಮಿಳುನಾಡು, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ಪ್ರಭೇದದ ವೈರಸ್ ಪತ್ತೆಯಾಗಿವೆ.

ಡೆಲ್ಟಾ ಪ್ಲಸ್ ನಿಜಕ್ಕೂ ಎಷ್ಟು ಆತಂಕಕಾರಿ? ಗುಣಲಕ್ಷಣಗಳೇನು? ಡೆಲ್ಟಾ ಪ್ಲಸ್ ಪ್ರಭೇದದ ವೈರಸ್ ಅನ್ನು ಕೇಂದ್ರ ಸರ್ಕಾರ ಕಳವಳಕಾರಿ ಪ್ರಭೇದ ಎಂದು ಹೇಳಿದೆ. ಕಳವಳಕಾರಿ ಪ್ರಭೇದದ ವೈರಸ್ ಮೇಲೆ ತೀವ್ರ ನಿಗಾ ವಹಿಸಲಾಗುತ್ತೆ. ಡೆಲ್ಟಾ ಪ್ಲಸ್ ಪ್ರಭೇದ ವೇಗವಾಗಿ ಹರಡುತ್ತೆ ಎಂದು ಕೇಂದ್ರ ಹೇಳಿದೆ. ಡೆಲ್ಟಾ ಪ್ಲಸ್ ಪ್ರಭೇದದ ವೈರಸ್ ಶ್ವಾಸಕೋಶಕ್ಕೆ ಹಾನಿ ಮಾಡಬಲ್ಲದು. ಡೆಲ್ಟಾ ಪ್ಲಸ್ ಪ್ರಭೇದದ ವೈರಸ್ ವಿರುದ್ಧ ಮಾನೋಕ್ಲೋನಲ್ ಆ್ಯಂಟಿಬಾಡಿ ಕಾಕ್ ಟೈಲ್ ಪರಿಣಾಮಕಾರಿ ಅಲ್ಲ. ಡೆಲ್ಟಾ ಪ್ಲಸ್ ಪ್ರಭೇದದ ವೈರಸ್ ದೇಹದಲ್ಲಿರುವ ವೈರಸ್ ವಿರುದ್ಧದ ಪ್ರತಿಕಾಯಗಳು, ಲಸಿಕೆಯಿಂದ ತಪ್ಪಿಸಿಕೊಳ್ಳಬಹುದು ಎಂದು ತಿಳಿಸಿದೆ.

ಇದನ್ನೂ ಓದಿ: Delta Plus Variant ಕೊರೊನಾ ಲಸಿಕೆಗಿದೆಯಂತೆ ಡೆಲ್ಟಾ ಪ್ಲಸ್ ಓಡಿಸುವ ಶಕ್ತಿ.. ಲಸಿಕೆ ಪಡೆದ್ರೆ ಸೋಂಕಿನಿಂದ ಮುಕ್ತ

ಕೊವಿಡ್ ಲಸಿಕೆ ನೀಡಿದ ಬಳಿಕ ಕಾಲೇಜು ಆರಂಭ; ಡಾ.ಸಿ.ಎನ್.ಅಶ್ವತ್ಥ್ ನಾರಾಯಣ

( 4 Delta plus variant found in Mysuru till today)

Published On - 3:42 pm, Thu, 24 June 21

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!