AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಷಾಢ ಮಾಸದ ಕೊನೆ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ವಿಶೇಷ, ಪೂಜೆ ಅಲಂಕಾರ: ಹರಿದು ಬಂದ ಭಕ್ತ ಸಾಗರ

ಆಷಾಢ ಮಾಸದ ಕೊನೆ ಶುಕ್ರವಾರದಂದು ಲಕ್ಷ್ಮಿ ಪೂಜೆಗೆ ತುಂಬಾನೇ ಮಹತ್ವವಿದೆ, ಈ ದಿನ ಲಕ್ಷ್ಮಿಯನ್ನು ಪೂಜಿಸಿದರೆ ಸಂಪತ್ತು ವೃದ್ಧಿಸುವುದು ಎಂದು ಹೇಳಲಾಗುವುದು. ಈ ಹಿನ್ನೆಲೆ ಇಂದು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಸಡಗರ ಸಂಭ್ರಮ ಮೆನೆಮಾಡಿದೆ. ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ.

ಆಷಾಢ ಮಾಸದ ಕೊನೆ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ವಿಶೇಷ, ಪೂಜೆ ಅಲಂಕಾರ: ಹರಿದು ಬಂದ ಭಕ್ತ ಸಾಗರ
ಚಾಮುಂಡಿಬೆಟ್ಟ
Follow us
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on: Jul 14, 2023 | 7:02 AM

ಮೈಸೂರು: ಆಷಾಢ ಮಾಸದ (Ashad Masa) ಕೊನೆ ಶುಕ್ರವಾರದಂದು (Friday) ಲಕ್ಷ್ಮಿ (Laxmi) ಪೂಜೆಗೆ ತುಂಬಾನೇ ಮಹತ್ವವಿದೆ, ಈ ದಿನ ಲಕ್ಷ್ಮಿಯನ್ನು ಪೂಜಿಸಿದರೆ ಸಂಪತ್ತು ವೃದ್ಧಿಸುವುದು ಎಂದು ಹೇಳಲಾಗುವುದು. ಈ ಹಿನ್ನೆಲೆ ಇಂದು (ಜು.12) ಮೈಸೂರಿನ ಚಾಮುಂಡಿಬೆಟ್ಟದಲ್ಲಿ (Chamundi Hill) ಸಡಗರ ಸಂಭ್ರಮ ಮೆನೆಮಾಡಿದೆ. ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ (Chamundeshwari) ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ.

ಮುಂಜಾನೆ 3 ಗಂಟೆಯಿಂದಲೇ ಚಾಮುಂಡಿ ತಾಯಿಗೆ ವಿಶೇಷ ಪೂಜೆ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ಸೇವೆ ನಂತರ ಮಹಾಮಂಗಳಾರತಿ ನೆರವೇರಿತು. ದೇವಾಲಯದ ಆವರಣವನ್ನು ಹೂಗಳಿಂದ ವಿಶೇಷ ಅಲಂಕಾರ ಮಾಡಲಾಗಿದೆ. ಬೆಳಿಗ್ಗೆ 5.30 ರಿಂದ ಭಕ್ತರಿಗೆ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಇನ್ನು ನಾಲ್ಕನೇ ವಾರವೂ ಪಾಸ್ ವ್ಯವಸ್ಥೆಗೆ ಬ್ರೇಕ್ ಹಾಕಲಾಗಿದ್ದು, 300 ರೂ. ಹಾಗೂ 50 ರೂ. ಟಿಕೆಟ್ ಪಡೆದ ವಿಶೇಷ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 65 ವರ್ಷ ಮೇಲ್ಪಟ್ಟವರಿಗೆ 50 ರೂ. ಟಿಕೆಟ್ ಸಾಲಿನಲ್ಲಿ ನೇರ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಆಷಾಢ ಮಾಸದ ಮಹತ್ವ, ತಾಯಿ ಚಾಮುಂಡೇಶ್ವರಿಯ ಇತಿಹಾಸ ತಿಳಿಸಿದ ಅರ್ಚಕ

ಖಾಸಗಿ ವಾಹನಗಳಿಗೆ ಚಾಮುಂಡಿ ಬೆಟ್ಟಕ್ಕೆ ನಿರ್ಬಂಧಿಸಿದ ಹಿನ್ನೆಲೆ ಜಿಲ್ಲಾಡಳಿತದಿಂದ ಉಚಿತ ಬಸ್ ವ್ಯವಸ್ಥೆ ಮಾಡಿದೆ. ಇನ್ನು ಭಕ್ತರು ಮೆಟ್ಟುಲುಗಳ ಮೂಲಕ ತಾಯಿ ದರ್ಶನಕ್ಕೆ ಆಗಮಿಸುತ್ತಿದ್ದು, ಬೆಳಗ್ಗೆ‌ 5.30 ರಿಂದ ರಾತ್ರಿ 9.30ರವರೆಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಭಕ್ತರಿಗೆ ದಾಸೋಹ ಪ್ರಸಾದ ವಿತರಿಸಲಾಗುತ್ತಿದೆ.

ನೀವು ಆಷಾಢ ಕೊನೆಯ ಶುಕ್ರವಾರದಂದು ಲಕ್ಷ್ಮಿಗೆ ತುಪ್ಪದ ದೀಪ ಹಚ್ಚಿ ಈ ಮಂತ್ರಗಳನ್ನು ಹೇಳಿದರೆ ಹಣಕಾಸಿನ ಸಮಸ್ಯೆ ದೂರಾಗಿ ಸಂಪತ್ತು ವೃದ್ಧಿಸುವುದು.

ನಮಸ್ತೇಸ್ತು ಮಹಾಮಾಯೇ ಶ್ರೀಪೀಠೇ ಸುರ ಪೂಜಿತೇ| ಶಂಖಚಕ್ರ ಗದಾಹಸ್ತೇ ಮಹಾಲಕ್ಷ್ಮಿ ನಮೋಸ್ತುತೇ||

ಅರ್ಥ: ಹೇ ಮಹಾಮಾಯೇ ಸ್ವರೂಪಳೇ ಶ್ರೀ ಚಕ್ರವಾಸಿನಿ, ದೇವತೆಗಳಿಂದ ಪೂಜಿತಳಾಗಿರುವ ಶಂಖಚಕ್ರ ಗದೆಗಳನ್ನು ಧರಿಸಿದ ಶ್ರೀ ಮಹಾಲಕ್ಷ್ಮಿಯೇ ನಿನಗೆ ನಮಸ್ಕಾರಗಳು

ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ