AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳುವಾಗಿದ್ದ 9 ಲಕ್ಷ ಮೌಲ್ಯದ 50 ಮೊಬೈಲ್​ ಜಪ್ತಿ, ವಾರಸುದಾರರಿಗೆ ಹಸ್ತಾಂತರ: ಎಸ್​ಪಿ ಸೀಮಾ ಲಾಟ್ಕರ್

ಮೈಸೂರು ಜಿಲ್ಲೆಯಲ್ಲಿ ಕಳುವಾಗಿದ್ದ 9 ಲಕ್ಷ ಮೌಲ್ಯದ 50 ಮೊಬೈಲ್​ ಜಪ್ತಿ ಮಾಡಿದ್ದು, 5 ಲಕ್ಷ ರೂ. ಮೌಲ್ಯದ 30 ಮೊಬೈಲ್​ ವಾರಸುದಾರರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಸೀಮಾಲಾಟ್ಕರ್​ ಹೇಳಿದರು.

ಕಳುವಾಗಿದ್ದ 9 ಲಕ್ಷ ಮೌಲ್ಯದ 50 ಮೊಬೈಲ್​ ಜಪ್ತಿ, ವಾರಸುದಾರರಿಗೆ ಹಸ್ತಾಂತರ: ಎಸ್​ಪಿ ಸೀಮಾ ಲಾಟ್ಕರ್
ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಸೀಮಾಲಾಟ್ಕರ್​
ಗಂಗಾಧರ​ ಬ. ಸಾಬೋಜಿ
|

Updated on:May 23, 2023 | 7:09 PM

Share

ಮೈಸೂರು: ಜಿಲ್ಲೆಯಲ್ಲಿ ಕಳುವಾಗಿದ್ದ 9 ಲಕ್ಷ ಮೌಲ್ಯದ 50 ಮೊಬೈಲ್​ ಜಪ್ತಿ (seized) ಮಾಡಿದ್ದು, 5 ಲಕ್ಷ ರೂ. ಮೌಲ್ಯದ 30 ಮೊಬೈಲ್​ ವಾರಸುದಾರರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಸೀಮಾಲಾಟ್ಕರ್​ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, CEIR ಪೋರ್ಟ್ ಮೂಲಕ ಮೊಬೈಲ್​ ಮಾಲೀಕರು ದೂರು ದಾಖಲಿಸಿದ್ದರು. ಕೇರಳ, ಮಹಾರಾಷ್ಟ್ರ, ತೆಲಂಗಾಣದಲ್ಲಿ ಮೊಬೈಲ್​ ಜಪ್ತಿ ಮಾಡಿದ್ದೇವೆ. ಮೇ 18ರಂದು ಡ್ರಾಪ್ ಕೇಳುವ ನೆಪದಲ್ಲಿ ಆಟೋ ಚಾಲಕನನ್ನು ಸುಲಿಗೆ ಮಾಡಿದ್ದವರ ಪೈಕಿ ಒಬ್ಬನ ಬಂಧನ ಮಾಡಲಾಗಿದೆ ಎಂದು ಹೇಳಿದರು.

ಚಾಕು ತೋರಿಸಿ ಆಟೋ, ಮೊಬೈಲ್, 2 ಸಾವಿರ ನಗದು ದರೋಡೆ ಮಾಡಿದ್ದು, ವರುಣ ಪೊಲೀಸ್ ಠಾಣೆಯಲ್ಲಿ ಆಟೋ ಚಾಲಕ ಪ್ರಕರಣ ದಾಖಲಿಸಿದ್ದ. ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಕಲಬುರಗಿಯಲ್ಲಿ ಜಾನವಾರು ಕಳ್ಳತನ ಗ್ಯಾಂಗ್: ಹೈಫೈ ಕಾರಲ್ಲಿ ಬರ್ತಾರೆ ಎತ್ತಾಕೊಂಡು ಹೋಗ್ತಾರೆ..!

ಬೈಕ್​ ಕಳವು ಮಾಡುತ್ತಿದ್ದ 7 ಜನ ಅಂತಾರಾಜ್ಯ ಕಳ್ಳರ ಬಂಧನ

ಬೆಂಗಳೂರು: ಬೈಕ್​ಗಳನ್ನು ಕದಿಯುತ್ತಿದ್ದ ಖತರ್ನಾಕ್ ಆರೋಪಿಗಳ ಗ್ಯಾಂಗ್ ಇದೀಗ ಬೆಂಗಳೂರು ಪೊಲೀಸರ ಬಲೆಗೆ ಬಿದ್ದಿದೆ. ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರು ಮತ್ತು ತಮಿಳುನಾಡಿನಲ್ಲಿ ಬೈಕ್​ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ. ಬೈಕ್​ ಕಳವು ಮಾಡುತ್ತಿದ್ದ 7 ಆರೋಪಿಗಳ ಸಹಿತ 1.20 ಕೋಟಿಗೂ ಹೆಚ್ಚು ಮೌಲ್ಯದ 72 ಬೈಕ್​ಗಳನ್ನು ಬೆಂಗಳೂರಿನ ಬೊಮ್ಮನಹಳ್ಳಿ ಠಾಣಾ ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: Bangalore news: ಮೋಜು ಮಸ್ತಿಗಾಗಿ ಬೆಂಗಳೂರು, ತಮಿಳುನಾಡಿನಲ್ಲಿ ಬೈಕ್ ಕಳವು ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್

ಬೈಕ್​ಗಳನ್ನು ಕಳವು ಮಾಡುತ್ತಿದ್ದ ಆರೋಪಿಗಳು, ನಂತರ ಆ ಬೈಕ್​ಗಳನ್ನು ತಮಿಳುನಾಡು ರಾಜ್ಯಕ್ಕೆ ಕಡಿಮೆ ಬೆಲೆಗೆ ಮಾರಿ ಮೋಜು ಮಸ್ತಿ ಮಾಡುತ್ತಿದ್ದರು. ಕಳವು ಮಾಡಿದ 2 ಲಕ್ಷ ಮೌಲ್ಯದ ಬೈಕ್​ಗಳನ್ನ ಕೇವಲ 25 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಹೊಸೂರು ಟೋಲ್​ನಲ್ಲಿ 100 ರೂಪಾಯಿ ಕೊಟ್ಟು ತಮಿಳುನಾಡಿಗೆ ಕಂಡೊಯ್ದು ಅಲ್ಲಿನ ರಿಜಿಸ್ಟ್ರೇಷನ್ ನಂಬರ್ ಹಾಕಿಸಿ ಮಾರಾಟ ಮಾಡುತ್ತಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:06 pm, Tue, 23 May 23

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ