AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳುವಾಗಿದ್ದ 9 ಲಕ್ಷ ಮೌಲ್ಯದ 50 ಮೊಬೈಲ್​ ಜಪ್ತಿ, ವಾರಸುದಾರರಿಗೆ ಹಸ್ತಾಂತರ: ಎಸ್​ಪಿ ಸೀಮಾ ಲಾಟ್ಕರ್

ಮೈಸೂರು ಜಿಲ್ಲೆಯಲ್ಲಿ ಕಳುವಾಗಿದ್ದ 9 ಲಕ್ಷ ಮೌಲ್ಯದ 50 ಮೊಬೈಲ್​ ಜಪ್ತಿ ಮಾಡಿದ್ದು, 5 ಲಕ್ಷ ರೂ. ಮೌಲ್ಯದ 30 ಮೊಬೈಲ್​ ವಾರಸುದಾರರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಸೀಮಾಲಾಟ್ಕರ್​ ಹೇಳಿದರು.

ಕಳುವಾಗಿದ್ದ 9 ಲಕ್ಷ ಮೌಲ್ಯದ 50 ಮೊಬೈಲ್​ ಜಪ್ತಿ, ವಾರಸುದಾರರಿಗೆ ಹಸ್ತಾಂತರ: ಎಸ್​ಪಿ ಸೀಮಾ ಲಾಟ್ಕರ್
ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಸೀಮಾಲಾಟ್ಕರ್​
ಗಂಗಾಧರ​ ಬ. ಸಾಬೋಜಿ
|

Updated on:May 23, 2023 | 7:09 PM

Share

ಮೈಸೂರು: ಜಿಲ್ಲೆಯಲ್ಲಿ ಕಳುವಾಗಿದ್ದ 9 ಲಕ್ಷ ಮೌಲ್ಯದ 50 ಮೊಬೈಲ್​ ಜಪ್ತಿ (seized) ಮಾಡಿದ್ದು, 5 ಲಕ್ಷ ರೂ. ಮೌಲ್ಯದ 30 ಮೊಬೈಲ್​ ವಾರಸುದಾರರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಸೀಮಾಲಾಟ್ಕರ್​ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, CEIR ಪೋರ್ಟ್ ಮೂಲಕ ಮೊಬೈಲ್​ ಮಾಲೀಕರು ದೂರು ದಾಖಲಿಸಿದ್ದರು. ಕೇರಳ, ಮಹಾರಾಷ್ಟ್ರ, ತೆಲಂಗಾಣದಲ್ಲಿ ಮೊಬೈಲ್​ ಜಪ್ತಿ ಮಾಡಿದ್ದೇವೆ. ಮೇ 18ರಂದು ಡ್ರಾಪ್ ಕೇಳುವ ನೆಪದಲ್ಲಿ ಆಟೋ ಚಾಲಕನನ್ನು ಸುಲಿಗೆ ಮಾಡಿದ್ದವರ ಪೈಕಿ ಒಬ್ಬನ ಬಂಧನ ಮಾಡಲಾಗಿದೆ ಎಂದು ಹೇಳಿದರು.

ಚಾಕು ತೋರಿಸಿ ಆಟೋ, ಮೊಬೈಲ್, 2 ಸಾವಿರ ನಗದು ದರೋಡೆ ಮಾಡಿದ್ದು, ವರುಣ ಪೊಲೀಸ್ ಠಾಣೆಯಲ್ಲಿ ಆಟೋ ಚಾಲಕ ಪ್ರಕರಣ ದಾಖಲಿಸಿದ್ದ. ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಕಲಬುರಗಿಯಲ್ಲಿ ಜಾನವಾರು ಕಳ್ಳತನ ಗ್ಯಾಂಗ್: ಹೈಫೈ ಕಾರಲ್ಲಿ ಬರ್ತಾರೆ ಎತ್ತಾಕೊಂಡು ಹೋಗ್ತಾರೆ..!

ಬೈಕ್​ ಕಳವು ಮಾಡುತ್ತಿದ್ದ 7 ಜನ ಅಂತಾರಾಜ್ಯ ಕಳ್ಳರ ಬಂಧನ

ಬೆಂಗಳೂರು: ಬೈಕ್​ಗಳನ್ನು ಕದಿಯುತ್ತಿದ್ದ ಖತರ್ನಾಕ್ ಆರೋಪಿಗಳ ಗ್ಯಾಂಗ್ ಇದೀಗ ಬೆಂಗಳೂರು ಪೊಲೀಸರ ಬಲೆಗೆ ಬಿದ್ದಿದೆ. ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರು ಮತ್ತು ತಮಿಳುನಾಡಿನಲ್ಲಿ ಬೈಕ್​ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ. ಬೈಕ್​ ಕಳವು ಮಾಡುತ್ತಿದ್ದ 7 ಆರೋಪಿಗಳ ಸಹಿತ 1.20 ಕೋಟಿಗೂ ಹೆಚ್ಚು ಮೌಲ್ಯದ 72 ಬೈಕ್​ಗಳನ್ನು ಬೆಂಗಳೂರಿನ ಬೊಮ್ಮನಹಳ್ಳಿ ಠಾಣಾ ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: Bangalore news: ಮೋಜು ಮಸ್ತಿಗಾಗಿ ಬೆಂಗಳೂರು, ತಮಿಳುನಾಡಿನಲ್ಲಿ ಬೈಕ್ ಕಳವು ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್

ಬೈಕ್​ಗಳನ್ನು ಕಳವು ಮಾಡುತ್ತಿದ್ದ ಆರೋಪಿಗಳು, ನಂತರ ಆ ಬೈಕ್​ಗಳನ್ನು ತಮಿಳುನಾಡು ರಾಜ್ಯಕ್ಕೆ ಕಡಿಮೆ ಬೆಲೆಗೆ ಮಾರಿ ಮೋಜು ಮಸ್ತಿ ಮಾಡುತ್ತಿದ್ದರು. ಕಳವು ಮಾಡಿದ 2 ಲಕ್ಷ ಮೌಲ್ಯದ ಬೈಕ್​ಗಳನ್ನ ಕೇವಲ 25 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಹೊಸೂರು ಟೋಲ್​ನಲ್ಲಿ 100 ರೂಪಾಯಿ ಕೊಟ್ಟು ತಮಿಳುನಾಡಿಗೆ ಕಂಡೊಯ್ದು ಅಲ್ಲಿನ ರಿಜಿಸ್ಟ್ರೇಷನ್ ನಂಬರ್ ಹಾಕಿಸಿ ಮಾರಾಟ ಮಾಡುತ್ತಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:06 pm, Tue, 23 May 23

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More