AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳುವಾಗಿದ್ದ 9 ಲಕ್ಷ ಮೌಲ್ಯದ 50 ಮೊಬೈಲ್​ ಜಪ್ತಿ, ವಾರಸುದಾರರಿಗೆ ಹಸ್ತಾಂತರ: ಎಸ್​ಪಿ ಸೀಮಾ ಲಾಟ್ಕರ್

ಮೈಸೂರು ಜಿಲ್ಲೆಯಲ್ಲಿ ಕಳುವಾಗಿದ್ದ 9 ಲಕ್ಷ ಮೌಲ್ಯದ 50 ಮೊಬೈಲ್​ ಜಪ್ತಿ ಮಾಡಿದ್ದು, 5 ಲಕ್ಷ ರೂ. ಮೌಲ್ಯದ 30 ಮೊಬೈಲ್​ ವಾರಸುದಾರರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಸೀಮಾಲಾಟ್ಕರ್​ ಹೇಳಿದರು.

ಕಳುವಾಗಿದ್ದ 9 ಲಕ್ಷ ಮೌಲ್ಯದ 50 ಮೊಬೈಲ್​ ಜಪ್ತಿ, ವಾರಸುದಾರರಿಗೆ ಹಸ್ತಾಂತರ: ಎಸ್​ಪಿ ಸೀಮಾ ಲಾಟ್ಕರ್
ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಸೀಮಾಲಾಟ್ಕರ್​
ಗಂಗಾಧರ​ ಬ. ಸಾಬೋಜಿ
|

Updated on:May 23, 2023 | 7:09 PM

Share

ಮೈಸೂರು: ಜಿಲ್ಲೆಯಲ್ಲಿ ಕಳುವಾಗಿದ್ದ 9 ಲಕ್ಷ ಮೌಲ್ಯದ 50 ಮೊಬೈಲ್​ ಜಪ್ತಿ (seized) ಮಾಡಿದ್ದು, 5 ಲಕ್ಷ ರೂ. ಮೌಲ್ಯದ 30 ಮೊಬೈಲ್​ ವಾರಸುದಾರರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಸೀಮಾಲಾಟ್ಕರ್​ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, CEIR ಪೋರ್ಟ್ ಮೂಲಕ ಮೊಬೈಲ್​ ಮಾಲೀಕರು ದೂರು ದಾಖಲಿಸಿದ್ದರು. ಕೇರಳ, ಮಹಾರಾಷ್ಟ್ರ, ತೆಲಂಗಾಣದಲ್ಲಿ ಮೊಬೈಲ್​ ಜಪ್ತಿ ಮಾಡಿದ್ದೇವೆ. ಮೇ 18ರಂದು ಡ್ರಾಪ್ ಕೇಳುವ ನೆಪದಲ್ಲಿ ಆಟೋ ಚಾಲಕನನ್ನು ಸುಲಿಗೆ ಮಾಡಿದ್ದವರ ಪೈಕಿ ಒಬ್ಬನ ಬಂಧನ ಮಾಡಲಾಗಿದೆ ಎಂದು ಹೇಳಿದರು.

ಚಾಕು ತೋರಿಸಿ ಆಟೋ, ಮೊಬೈಲ್, 2 ಸಾವಿರ ನಗದು ದರೋಡೆ ಮಾಡಿದ್ದು, ವರುಣ ಪೊಲೀಸ್ ಠಾಣೆಯಲ್ಲಿ ಆಟೋ ಚಾಲಕ ಪ್ರಕರಣ ದಾಖಲಿಸಿದ್ದ. ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಕಲಬುರಗಿಯಲ್ಲಿ ಜಾನವಾರು ಕಳ್ಳತನ ಗ್ಯಾಂಗ್: ಹೈಫೈ ಕಾರಲ್ಲಿ ಬರ್ತಾರೆ ಎತ್ತಾಕೊಂಡು ಹೋಗ್ತಾರೆ..!

ಬೈಕ್​ ಕಳವು ಮಾಡುತ್ತಿದ್ದ 7 ಜನ ಅಂತಾರಾಜ್ಯ ಕಳ್ಳರ ಬಂಧನ

ಬೆಂಗಳೂರು: ಬೈಕ್​ಗಳನ್ನು ಕದಿಯುತ್ತಿದ್ದ ಖತರ್ನಾಕ್ ಆರೋಪಿಗಳ ಗ್ಯಾಂಗ್ ಇದೀಗ ಬೆಂಗಳೂರು ಪೊಲೀಸರ ಬಲೆಗೆ ಬಿದ್ದಿದೆ. ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರು ಮತ್ತು ತಮಿಳುನಾಡಿನಲ್ಲಿ ಬೈಕ್​ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ. ಬೈಕ್​ ಕಳವು ಮಾಡುತ್ತಿದ್ದ 7 ಆರೋಪಿಗಳ ಸಹಿತ 1.20 ಕೋಟಿಗೂ ಹೆಚ್ಚು ಮೌಲ್ಯದ 72 ಬೈಕ್​ಗಳನ್ನು ಬೆಂಗಳೂರಿನ ಬೊಮ್ಮನಹಳ್ಳಿ ಠಾಣಾ ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: Bangalore news: ಮೋಜು ಮಸ್ತಿಗಾಗಿ ಬೆಂಗಳೂರು, ತಮಿಳುನಾಡಿನಲ್ಲಿ ಬೈಕ್ ಕಳವು ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್

ಬೈಕ್​ಗಳನ್ನು ಕಳವು ಮಾಡುತ್ತಿದ್ದ ಆರೋಪಿಗಳು, ನಂತರ ಆ ಬೈಕ್​ಗಳನ್ನು ತಮಿಳುನಾಡು ರಾಜ್ಯಕ್ಕೆ ಕಡಿಮೆ ಬೆಲೆಗೆ ಮಾರಿ ಮೋಜು ಮಸ್ತಿ ಮಾಡುತ್ತಿದ್ದರು. ಕಳವು ಮಾಡಿದ 2 ಲಕ್ಷ ಮೌಲ್ಯದ ಬೈಕ್​ಗಳನ್ನ ಕೇವಲ 25 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಹೊಸೂರು ಟೋಲ್​ನಲ್ಲಿ 100 ರೂಪಾಯಿ ಕೊಟ್ಟು ತಮಿಳುನಾಡಿಗೆ ಕಂಡೊಯ್ದು ಅಲ್ಲಿನ ರಿಜಿಸ್ಟ್ರೇಷನ್ ನಂಬರ್ ಹಾಕಿಸಿ ಮಾರಾಟ ಮಾಡುತ್ತಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:06 pm, Tue, 23 May 23

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ